ಪ್ರೀತಿಸಲು ನಿರಾಕರಣೆ: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರ ಕೊಲೆ ಮಾಡಿದ ಆರೋಪಿ ವಿಘ್ನೇಶ್!

ಪ್ರೀತಿಸಲು ನಿರಾಕರಣೆ: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರ ಕೊಲೆ ಮಾಡಿದ ಆರೋಪಿ ವಿಘ್ನೇಶ್!

Published : Oct 17, 2025, 12:20 PM IST

ಪ್ರೀತಿಗೆ ನಿರಾಕರಿಸಿದ ವಿದ್ಯಾರ್ಥಿನಿಯೊಬ್ಬಳಿಗೆ ಚಾಕುವಿನಿಂದ ಇರಿದು ಕಿಡಿಗೇಡಿಯೊಬ್ಬ ಹತ್ಯೆಗೈದು ಪರಾರಿಯಾಗಿರುವ ಘಟನೆ ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ಬೆಂಗಳೂರು (ಅ.17): ಪ್ರೀತಿಗೆ ನಿರಾಕರಿಸಿದ ವಿದ್ಯಾರ್ಥಿನಿಯೊಬ್ಬಳಿಗೆ ಚಾಕುವಿನಿಂದ ಇರಿದು ಕಿಡಿಗೇಡಿಯೊಬ್ಬ ಹತ್ಯೆಗೈದು ಪರಾರಿಯಾಗಿರುವ ಘಟನೆ ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಸ್ವತಂತ್ರಪಾಳ್ಯದ ಯಾಮಿನಿ ಪ್ರಿಯಾ (20) ಕೊಲೆಯಾದ ದುರ್ದೈವಿ. ಈ ಕೃತ್ಯ ಎಸಗಿ ಪರಾರಿಯಾಗಿರುವ ಮೃತಳ ನೆರೆ ಮನೆಯ ನಿವಾಸಿ ವಿಘ್ನೇಶ್ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕಾಲೇಜು ಮುಗಿಸಿ ಮನೆಗೆ ಮರಳುವಾಗ ಮಂತ್ರಿ ಮಾಲ್ ಸಮೀಪ ರೈಲ್ವೆ ಹಳಿಗಳ ಬಳಿ ಪ್ರಿಯಾಳಿಗೆ ಚಾಕುವಿನಿಂದ ಇರಿದು ಆರೋಪಿ ಕೊಂದಿದ್ದಾನೆ. ಕುಟುಂಬದ ಜತೆ ಸ್ವತಂತ್ರಪಾಳ್ಯದಲ್ಲಿ ನೆಲೆಸಿದ್ದ ಪ್ರಿಯಾ, ಖಾಸಗಿ ಕಾಲೇಜಿನಲ್ಲಿ ಬಿ ಫಾರ್ಮ್‌ ಓದುತ್ತಿದ್ದಳು.

ಪ್ರತಿ ದಿನ ನಡೆದುಕೊಂಡೇ ಕಾಲೇಜಿಗೆ ಹೋಗಿ ಆಕೆ ಬರುತ್ತಿದ್ದಳು. ಹಲವು ದಿನಗಳಿಂದ ಆಕೆಗೆ ಪ್ರೀತಿಸುವಂತೆ ನೆರೆಮನೆಯ ವಿಘ್ನೇಶ್ ಹಿಂದೆ ಬಿದ್ದಿದ್ದ. ಆದರೆ ಆತನ ಪ್ರಸ್ತಾಪಕ್ಕೆ ಪ್ರಿಯಾ ನಿರಾಕರಿಸಿದ್ದಳು. ಇದರಿಂದ ಕೆರಳಿದ ಆರೋಪಿ, ಕಾಲೇಜು ಮುಗಿಸಿ ಮಧ್ಯಾಹ್ನ ಮನೆಗೆ ಮರಳುತ್ತಿದ್ದ ಆಕೆಯನ್ನು ಅಡ್ಡಗಟ್ಟಿ ಕುತ್ತಿಗೆ ಹಾಗೂ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವವಾಗಿ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ರಕ್ತದ ಮಡುವಿನಲ್ಲಿ ವಿದ್ಯಾರ್ಥಿನಿ ಮೃತದೇಹ ಕಂಡು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more