ವಿಜಯಪುರದಲ್ಲಿ ರೌಡಿಗಳ ಪರೇಡ್:  ಧರ್ಮರಾಜ್‌ ಚೇಲಾಗಳ ಚಳಿ ಬಿಡಿಸಿದ ಎಸ್ಪಿ

ವಿಜಯಪುರದಲ್ಲಿ ರೌಡಿಗಳ ಪರೇಡ್: ಧರ್ಮರಾಜ್‌ ಚೇಲಾಗಳ ಚಳಿ ಬಿಡಿಸಿದ ಎಸ್ಪಿ

Published : Jun 26, 2022, 02:05 PM ISTUpdated : Jun 26, 2022, 04:14 PM IST

ಭೀಮಾ ತೀರದ ಹಂತಕರ ಹೆಡೆಮುರಿ ಕಟ್ಟಿದ್ದಾರೆ ಪೊಲೀಸರು. ಶಾಂತಿ ಕಾಪಾಡಲು ರೌಡಿಶೀಟರ್‌ಗಳ ಪರೇಡ್ ನಡೆಸಲಾಗಿದೆ. ಡಿಎಂಸಿ ಹೆಸರು ಹೇಳಿದ ಹುಡುಗರಿಗೆ ಎಸ್‌ಪಿ ಆನಂದ್ ಕುಮಾರ್ ಬಿಸಿ ಮುಟ್ಟಿಸಿದ್ದಾರೆ. 

ವಿಜಯಪುರ (ಜೂ. 26): ಭೀಮಾ ತೀರದ (Bhimatheera)  ಹಂತಕರ ಹೆಡೆಮುರಿ ಕಟ್ಟಿದ್ದಾರೆ ಪೊಲೀಸರು. ಶಾಂತಿ ಕಾಪಾಡಲು ರೌಡಿಶೀಟರ್‌ಗಳ ಪರೇಡ್ ನಡೆಸಲಾಗಿದೆ. ಡಿಎಂಸಿ ಹೆಸರು ಹೇಳಿದ ಹುಡುಗರಿಗೆ ಎಸ್‌ಪಿ ಆನಂದ್ ಕುಮಾರ್ ಬಿಸಿ ಮುಟ್ಟಿಸಿದ್ದಾರೆ. ಎಸ್‌ಪಿ ಹೊಡೆತಕ್ಕೆ ಧರ್ಮರಾಜ್ ಚಡಚಣ ಹುಡುಗರು ಥಂಡಾ ಹೊಡೆದಿದ್ದಾರೆ. 

ವಿಜಯಪುರ ಜಿಲ್ಲೆಯ ಭೀಮಾತೀರ ಐದು ದಶಕಗಳ ರಕ್ತಪಾತದ ಇತಿಹಾಸ ಹೊಂದಿದೆ. 4 ವರ್ಷಗಳ ಹಿಂದೆ ಮಹಾದೇವ ಬೈರಗೊಂಡ ಮೇಲೆ ಹಾಡುಹಗಲೇ ಅಟ್ಯಾಕ್‌ ನಡೆಯೋ ಮೂಲಕ ಭೀಮಾತೀರ ಸಧ್ಯಕ್ಕೆ ತಣ್ಣಗಿರುವಂತೆ ಕಾಣ್ತಿದೆ. ಆದ್ರೆ ಈ ಭಾಗದಲ್ಲಿ ಅಪರಾಧ ಕೃತ್ಯಗಳನ್ನ ತಡೆಯೋದು ಪೊಲೀಸ್‌ ಇಲಾಖೆಗೆ ಸವಾಲೆ ಸರಿ. ಯಾಕಂದ್ರೆ 50 ವರ್ಷಗಳ ಇತಿಹಾಸವನ್ನ ಹೊಂದಿದೆ ಭೀಮಾತೀರದ ಪಾತಕಲೋಕ. ಸಧ್ಯ ಭೀಮಾತೀರದಲ್ಲಿನ ಅಪರಾಧಿಕ ಕೃತ್ಯಗಳನ್ನ ತಡೆಯಲು ಎಸ್ಪಿ ಆನಂದಕುಮಾರ್‌ ಇನ್ನಿಲ್ಲದ ಕಠಿಣ ಕ್ರಮಗಳನ್ನ ಕೈಗೊಳ್ತಿದ್ದಾರೆ. ಭೀಮಾತೀರದ ಹತ್ಯಾಕಾಂಡಗಳಲ್ಲಿ ಭಾಗಿಯಾಗಿರೋ ರೌಡಿಗಳಿಗೆ ಹಳೆ ಹಂತಕರಿಗೆ ಎಸ್ಪಿ ಆನಂದಕುಮಾರ್‌ ಮುಲಾಜೇ ಇಲ್ಲದಂತೆ ಖಡಕ್ಕಾಗಿ ವಾರ್ನಿಂಗ್‌ ಗಳನ್ನ ಮಾಡಿದ್ದಾರೆ. ಭೀಮಾತೀರದಲ್ಲಿ ಬಾಲ ಬಿಚ್ಚಿದ್ರೆ ಬಾಲವನ್ನೆ ಕಟ್‌ ಮಾಡಿ ಬಿಡ್ತೀವಿ ಎನ್ನುವ ಮೂಲಕ ಇನ್ಮುಂದೆ ಪೊಲೀಸ್‌ ಇಲಾಖೆ ಸಹಿಸೋದಿಲ್ಲ ಎನ್ನುವ ಸಂದೇಶವನ್ನ ನೀಡಿದ್ದಾರೆ.

 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more