ಶಿಕ್ಷಕರ ಕಿರುಕುಳ ಆರೋಪ, ವಿದ್ಯಾರ್ಥಿನಿ ಆತ್ಮಹತ್ಯೆಗೆ ಭಾರಿ ಪ್ರತಿಭಟನೆ, 13 ಬಸ್‌ಗೆ ಬೆಂಕಿ!

ಶಿಕ್ಷಕರ ಕಿರುಕುಳ ಆರೋಪ, ವಿದ್ಯಾರ್ಥಿನಿ ಆತ್ಮಹತ್ಯೆಗೆ ಭಾರಿ ಪ್ರತಿಭಟನೆ, 13 ಬಸ್‌ಗೆ ಬೆಂಕಿ!

Published : Jul 17, 2022, 04:21 PM ISTUpdated : Jul 17, 2022, 04:23 PM IST

ಡೆತ್‌ನೋಟ್‌ನಲ್ಲಿ ಶಿಕ್ಷಕರ ವಿರುದ್ಧ ಆರೋಪ ಮಾಡಿರುವ ವಿದ್ಯಾರ್ಥಿನಿ, 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಭಾರಿ ಪ್ರತಿಭಟನೆ, ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳದ ಶಾಲೆ ವಿರುದ್ಧ ಆಕ್ರೋಶ

ಚೆನ್ನೈ(ಜು.17):  ಶಾಲಾ ಕಟ್ಟದ ಮೇಲೆ ದಾಳಿ, ಕಿಟಕಿ ಗಾಜು, ಬಾಗಿಲು ಪುಡಿ ಪುಡಿ,  13 ಶಾಲಾ ಬಸ್ ಹಾಗೂ 3 ಪೊಲೀಸ್ ವಾಹನಕ್ಕೆ ಬೆಂಕಿ. ಹಿರಿಯ ಪೊಲೀಸ್ ಅಧಿಕಾರಿ ಸೇರಿ ಹಲವರಿಗ ಗಂಭೀರ ಗಾಯ.  ಇದು ತಮಿಳುನಾಡಿನ ಕಲ್ಲಾಕುರುಚಿ ಜಿಲ್ಲೆಯ ಶಾಲೆಯಲ್ಲಿ ನಡೆದ ಪ್ರತಿಭಟನೆ. ಶಾಲೆಯ 12ನೇ ತರಗತಿ ವಿದ್ಯಾರ್ಥಿನಿ ಬುಧವಾರ( ಜು.14) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿ ಡೆತ್ ನೋಟ್‌ನಲ್ಲಿ ಇಬ್ಬರು ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾಳೆ. ಆದರೆ ಇದುವರೆಗೂ ಶಾಲಾ ಆಡಳಿತ ಮಂಡಳಿ ಶಿಕ್ಷರ ವಿರುದ್ದ ಕ್ರಮಕೈಗೊಂಡಿಲ್ಲ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಶಾಲೆಗೆ ಮುತ್ತಿಗೆ ಹಾಕಿದ್ದಾರೆ. ಭಾರಿ ಪ್ರತಿಭಟನೆ ನಡೆಸಿದ್ದಾರೆ. ಸುಮಾರು 2,000ಕ್ಕೂ ಹೆಚ್ಚು ಮಂದಿ ಶಾಲೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಶಾಲಾ ಕಟ್ಟದ ಮೇಲೆ ದಾಳಿ ನಡೆಸಿದ್ದಾರೆ. ಭಾನುವಾರ ರಜಾದಿನವಾದ ಕಾರಣ ಶಾಲಾ ಆವರಣದಲ್ಲಿ ನಿಲ್ಲಿಸಿದ್ದ 13 ಬಸ್‌ಗಳನ್ನು ಜಖಂಗೊಳಿಸಿ ಬೆಂಕಿ ಹಚ್ಚಿದ್ದಾರೆ. ಪ್ರತಿಭಟನೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಟ್ರಾಕ್ಟರ್ ಮೂಲಕ ವಾಹನ ಜಖಂಗೊಳಿಸಿ ಪೊಲೀಸ್ ವಾಹನಕ್ಕೂ ಬೆಂಕಿ ಹಚ್ಚಿದ್ದಾರೆ.  ಘಟನೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more