Hubballi: ಹಾಡಹಗಲೇ ನಡುರಸ್ತೆಯಲ್ಲಿ ಯುವಕನಿಗೆ ಚಾಕು ಇರಿತ, ದುಷ್ಕರ್ಮಿಗಳು ಎಸ್ಕೇಪ್

Hubballi: ಹಾಡಹಗಲೇ ನಡುರಸ್ತೆಯಲ್ಲಿ ಯುವಕನಿಗೆ ಚಾಕು ಇರಿತ, ದುಷ್ಕರ್ಮಿಗಳು ಎಸ್ಕೇಪ್

Published : Jan 02, 2025, 08:03 PM IST

ಹುಬ್ಬಳ್ಳಿಯ ಅಯೋಧ್ಯೆ ನಗರದಲ್ಲಿ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ನಡೆದಿದ್ದು, ಮಾರುತಿ ಎಂಬ ಯುವಕನಿಗೆ ಗಾಯಗಳಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಹುಬ್ಬಳ್ಳಿ (ಜ.2): ಸಣ್ಣ ವಿಚಾರಕ್ಕೆ ಯುವಕನೊಬ್ಬನಿಗೆ ನಡುರಸ್ತೆಯಲ್ಲಿಯೇ ಚಾಕು ಇರಿದಂಥ ಘಟನೆ ಅಯೋಧ್ಯೆ ನಗರದ ವಾಟರ್‌ಟ್ಯಾಂಕ್‌ ಬಳಿ ನಡೆದಿದೆ. ಇಲ್ಲಿನ ಸ್ಥಳೀಯ ಅಂಬೇಡ್ಕರ್‌ ಕಾಲೋನಿ ನಿವಾಸಿ ಮಾರುತಿ ಚಾಕು ದಾಳಿಗೆ ಒಳಗಾದ ಯುವಕ. ಬುಧವಾರ ಸಂಜೆ ವಾಟರ್‌ಟ್ಯಾಂಕ್‌ ಬಳಿ ನಿಂತಿದ್ದಾಗ ಕೆಲ ಯುವಕರು ಬಂದು ಚಾಕು ಇರಿದಿದ್ದಾರೆ. ನಡುರಸ್ತೆಯಲ್ಲೇ ಚಾಕು ಇರಿಯುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಮಾರುತಿಯ ಬೆನ್ನು ಹಾಗು ಪಕ್ಕೆಲುಬಿಗೆ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಪೊಲೀಸರು ಕೊಲೆ ಯತ್ನದ ಪ್ರಕರಣವನ್ನು ದಾಖಲು ಮಾಡಿಕೊಂಡು ಚಾಕು ಇರಿದು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಶೋಧ ಆರಂಭಿಸಿದ್ದಾರೆ. ಘಟನೆಯ ಮಾಹಿತಿ ತಿಳಿದು ಕಾನೂನು ಸುವ್ಯವಸ್ಥೆ ಡಿಸಿಪಿ ನಂದಗಾವಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಹಾಗೂ ಸಂಬಂಧಿಕರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

'ನಾನು, ನನ್ನಿಂದಲೇ ಎನ್ನುವ ನೀವು ಸ್ಮಶಾನಕ್ಕೆ ಹೋಗಿ ಬನ್ನಿ..' ರಾಜ್ಯ ಸರ್ಕಾರದ ವಿರುದ್ಧ ಸೂರಜ್‌ ರೇವಣ್ಣ ಗುಡುಗು!

 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more