Hubballi: ಹಾಡಹಗಲೇ ನಡುರಸ್ತೆಯಲ್ಲಿ ಯುವಕನಿಗೆ ಚಾಕು ಇರಿತ, ದುಷ್ಕರ್ಮಿಗಳು ಎಸ್ಕೇಪ್

Hubballi: ಹಾಡಹಗಲೇ ನಡುರಸ್ತೆಯಲ್ಲಿ ಯುವಕನಿಗೆ ಚಾಕು ಇರಿತ, ದುಷ್ಕರ್ಮಿಗಳು ಎಸ್ಕೇಪ್

Published : Jan 02, 2025, 08:03 PM IST

ಹುಬ್ಬಳ್ಳಿಯ ಅಯೋಧ್ಯೆ ನಗರದಲ್ಲಿ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ನಡೆದಿದ್ದು, ಮಾರುತಿ ಎಂಬ ಯುವಕನಿಗೆ ಗಾಯಗಳಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಹುಬ್ಬಳ್ಳಿ (ಜ.2): ಸಣ್ಣ ವಿಚಾರಕ್ಕೆ ಯುವಕನೊಬ್ಬನಿಗೆ ನಡುರಸ್ತೆಯಲ್ಲಿಯೇ ಚಾಕು ಇರಿದಂಥ ಘಟನೆ ಅಯೋಧ್ಯೆ ನಗರದ ವಾಟರ್‌ಟ್ಯಾಂಕ್‌ ಬಳಿ ನಡೆದಿದೆ. ಇಲ್ಲಿನ ಸ್ಥಳೀಯ ಅಂಬೇಡ್ಕರ್‌ ಕಾಲೋನಿ ನಿವಾಸಿ ಮಾರುತಿ ಚಾಕು ದಾಳಿಗೆ ಒಳಗಾದ ಯುವಕ. ಬುಧವಾರ ಸಂಜೆ ವಾಟರ್‌ಟ್ಯಾಂಕ್‌ ಬಳಿ ನಿಂತಿದ್ದಾಗ ಕೆಲ ಯುವಕರು ಬಂದು ಚಾಕು ಇರಿದಿದ್ದಾರೆ. ನಡುರಸ್ತೆಯಲ್ಲೇ ಚಾಕು ಇರಿಯುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಮಾರುತಿಯ ಬೆನ್ನು ಹಾಗು ಪಕ್ಕೆಲುಬಿಗೆ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಪೊಲೀಸರು ಕೊಲೆ ಯತ್ನದ ಪ್ರಕರಣವನ್ನು ದಾಖಲು ಮಾಡಿಕೊಂಡು ಚಾಕು ಇರಿದು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಶೋಧ ಆರಂಭಿಸಿದ್ದಾರೆ. ಘಟನೆಯ ಮಾಹಿತಿ ತಿಳಿದು ಕಾನೂನು ಸುವ್ಯವಸ್ಥೆ ಡಿಸಿಪಿ ನಂದಗಾವಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಹಾಗೂ ಸಂಬಂಧಿಕರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

'ನಾನು, ನನ್ನಿಂದಲೇ ಎನ್ನುವ ನೀವು ಸ್ಮಶಾನಕ್ಕೆ ಹೋಗಿ ಬನ್ನಿ..' ರಾಜ್ಯ ಸರ್ಕಾರದ ವಿರುದ್ಧ ಸೂರಜ್‌ ರೇವಣ್ಣ ಗುಡುಗು!

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more