Hubballi: ಹಾಡಹಗಲೇ ನಡುರಸ್ತೆಯಲ್ಲಿ ಯುವಕನಿಗೆ ಚಾಕು ಇರಿತ, ದುಷ್ಕರ್ಮಿಗಳು ಎಸ್ಕೇಪ್

Hubballi: ಹಾಡಹಗಲೇ ನಡುರಸ್ತೆಯಲ್ಲಿ ಯುವಕನಿಗೆ ಚಾಕು ಇರಿತ, ದುಷ್ಕರ್ಮಿಗಳು ಎಸ್ಕೇಪ್

Published : Jan 02, 2025, 08:03 PM IST

ಹುಬ್ಬಳ್ಳಿಯ ಅಯೋಧ್ಯೆ ನಗರದಲ್ಲಿ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ನಡೆದಿದ್ದು, ಮಾರುತಿ ಎಂಬ ಯುವಕನಿಗೆ ಗಾಯಗಳಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಹುಬ್ಬಳ್ಳಿ (ಜ.2): ಸಣ್ಣ ವಿಚಾರಕ್ಕೆ ಯುವಕನೊಬ್ಬನಿಗೆ ನಡುರಸ್ತೆಯಲ್ಲಿಯೇ ಚಾಕು ಇರಿದಂಥ ಘಟನೆ ಅಯೋಧ್ಯೆ ನಗರದ ವಾಟರ್‌ಟ್ಯಾಂಕ್‌ ಬಳಿ ನಡೆದಿದೆ. ಇಲ್ಲಿನ ಸ್ಥಳೀಯ ಅಂಬೇಡ್ಕರ್‌ ಕಾಲೋನಿ ನಿವಾಸಿ ಮಾರುತಿ ಚಾಕು ದಾಳಿಗೆ ಒಳಗಾದ ಯುವಕ. ಬುಧವಾರ ಸಂಜೆ ವಾಟರ್‌ಟ್ಯಾಂಕ್‌ ಬಳಿ ನಿಂತಿದ್ದಾಗ ಕೆಲ ಯುವಕರು ಬಂದು ಚಾಕು ಇರಿದಿದ್ದಾರೆ. ನಡುರಸ್ತೆಯಲ್ಲೇ ಚಾಕು ಇರಿಯುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಮಾರುತಿಯ ಬೆನ್ನು ಹಾಗು ಪಕ್ಕೆಲುಬಿಗೆ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಪೊಲೀಸರು ಕೊಲೆ ಯತ್ನದ ಪ್ರಕರಣವನ್ನು ದಾಖಲು ಮಾಡಿಕೊಂಡು ಚಾಕು ಇರಿದು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಶೋಧ ಆರಂಭಿಸಿದ್ದಾರೆ. ಘಟನೆಯ ಮಾಹಿತಿ ತಿಳಿದು ಕಾನೂನು ಸುವ್ಯವಸ್ಥೆ ಡಿಸಿಪಿ ನಂದಗಾವಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಹಾಗೂ ಸಂಬಂಧಿಕರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

'ನಾನು, ನನ್ನಿಂದಲೇ ಎನ್ನುವ ನೀವು ಸ್ಮಶಾನಕ್ಕೆ ಹೋಗಿ ಬನ್ನಿ..' ರಾಜ್ಯ ಸರ್ಕಾರದ ವಿರುದ್ಧ ಸೂರಜ್‌ ರೇವಣ್ಣ ಗುಡುಗು!

 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more