ಸಿಎಂ ಮಧ್ಯಪ್ರವೇಶಿಸಿ ಪಠ್ಯಪುಸ್ತಕ ವಿವಾದಕ್ಕೆ ತೆರೆ ಎಳೆಯಬೇಕು Baraguru Ramachandrappa

ಸಿಎಂ ಮಧ್ಯಪ್ರವೇಶಿಸಿ ಪಠ್ಯಪುಸ್ತಕ ವಿವಾದಕ್ಕೆ ತೆರೆ ಎಳೆಯಬೇಕು Baraguru Ramachandrappa

Published : May 29, 2022, 06:06 PM IST

ವಿವಾದ ಬಗೆಹರಿಸಲು ಮುಖ್ಯಮಂತ್ರಿ ಗಳು ಕೂಲಂಕುಶ ಪರಿಶೀಲಿಸಿ ವಿವಾದಕ್ಕೆ ತೆರೆ ಎಳೆಯಬೇಕು. ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಷೇತ್ರದ ಬಗ್ಗೆ ಬೇಸರ ಬರಬಾರದು ಎಂದು ಬರಗೂರು ರಾಮಚಂದ್ರಪ್ಪ ಮನವಿ ಮಾಡಿದ್ದಾರೆ.

ಬೆಂಗಳೂರು (ಮೇ.29): ಪಠ್ಯ ಪುಸ್ತಕ ಮರು ಪರಿಷ್ಕರಣಾವಿವಾದಕ್ಕೆ ಸಂಬಂಧಿಸಿ ಮಾತನಾಡಿರುವ ಸಾಹಿತಿ ಬರಗೂರು ರಾಮಚಂದ್ರಪ್ಪ (Baraguru Ramachandrappa) ಶೈಕ್ಷಣಿಕ (Education) ಘನತೆ ಉಳಿಯಬೇಕು ಎಂಬುದು ನನ್ನ ಕಳಕಳಿ ಎಂದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ  ಮಾನ್ಯ ಮುಖ್ಯಮಂತ್ರಿ ಗಳು ಮಧ್ಯಪ್ರವೇಶ ಮಾಡಬೇಕು.  ಶೈಕ್ಷಣಿಕ ಘನತೆ ಉಳಿಯಲು ಮುಖ್ಯಮಂತ್ರಿಗಳ ಮಧ್ಯಪ್ರವೇಶ ಅನಿವಾರ್ಯ  ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ (Text Books Revision) ನಮ್ಮ ಕಾಲದಲ್ಲು ಆಗಿತ್ತು. ಅದು ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು ಹಾಗು ಸಂವಿಧಾನದ ಆಶಯಗಳಿಗನುಗುಣವಾಗಿ ನಡೆದಿತ್ತು. ಆದ್ರೆ ಏಕೆ ಸೇರಿಸಿದ್ದಿವಿ ಏಕೆ ಬಿಟ್ಟಿದ್ದೇವೆ ಎಂಬುದಕ್ಕೆ ಕಾರಣ ನೀಡಿದ್ದೇವೆ. ಆದ್ರೆ ಈ ಬಾರಿ ಪಠ್ಯಪುಸ್ತಕ ಪರಿಷ್ಕರಣೆ ಆಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಹಾಗು ಸಂವಿಧಾನ ಆಶಯಕ್ಕೆ ಪಠ್ಯಪುಸ್ತಕ ರಚನೆ ಆಗಬಾರದು. 

CET 2022ಗೆ ಅರ್ಜಿ ಸಲ್ಲಿಸಲು ಕೊನೆ ಅವಕಾಶ, 2 ದಿನ ವಿಂಡೋ ರೀ ಓಪನ್

ಅನೇಕ ವೈಯಕ್ತಿಕ ವಾಗಿ ತೇಜೋವಧೆ ಮಾತುಗಳು ಬರುತ್ತಿರುವುದರಿಂದ ನಾನು ಆ ಮಟ್ಟಕ್ಕೆ ಇಳಿಯುವುದಿಲ್ಲ.ಅನೇಕ ಮುಖ್ಯಪಠ್ಯಗಳು ಕೈಬಿಟ್ಟಿರುವುದರಿಂದ ಕನ್ನಡ ವಿದ್ಯಾರ್ಥಿಗಳು ಅನ್ಯಾಯವಾಗುತ್ತದೆ. ಈ ವಿವಾದ ಬಗೆಹರಿಸಲು ಮುಖ್ಯಮಂತ್ರಿ ಗಳು ಕೂಲಂಕುಶ ಪರಿಶೀಲಿಸಿ ವಿವಾದಕ್ಕೆ ತೆರೆ ಎಳೆಯಬೇಕು. ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಷೇತ್ರದ ಬಗ್ಗೆ ಬೇಸರ ಬರಬಾರದು.  ಅದಕ್ಕಾಗಿ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಬೇಕೆಂದು ಬರಗೂರು ಮನವಿ ಮಾಡಿದ್ದಾರೆ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more