Chitradurga Govt Medical College: ಕೊನೆಗೂ ಚಿತ್ರದುರ್ಗಕ್ಕೆ ಮೆಡಿಕಲ್ ಕಾಲೇಜು

Chitradurga Govt Medical College: ಕೊನೆಗೂ ಚಿತ್ರದುರ್ಗಕ್ಕೆ ಮೆಡಿಕಲ್ ಕಾಲೇಜು

Published : Jan 25, 2022, 12:25 PM ISTUpdated : Jan 25, 2022, 12:28 PM IST
  • ಕೋಟೆನಾಡಿಗೆ ಸರ್ಕಾರಿ‌ ಮೆಡಿಕಲ್ ಕಾಲೇಜು ಮಂಜೂರು
  • ಸರ್ಕಾರಿ‌ ಮೆಡಿಕಲ್‌ ಕಾಲೇಜೇ ಬೇಕು ಎಂದ್ದಿದ್ದ ಸ್ಥಳೀಯರು 
  • ಮೆಡಿಕಲ್ ಕಾಲೇಜು ಮಂಜೂರು ಮಾಡಲು ಸಿಎಂ ಸೂಚನೆ 
  • ಮುಂಬರುವ ಬಜೆಟ್‌ನಲ್ಲಿ ಘೋಷಣೆ ಮಾಡುವ ಭರವಸೆ

ಚಿತ್ರದುರ್ಗ(ಜ.25):  ಕೋಟೆನಾಡು ಚಿತ್ರದುರ್ಗ (Chitradurga) ಜಿಲ್ಲೆ ಬರ ಪೀಡಿತ ಪ್ರದೇಶ ಆಗಿರುವ ಕಾರಣ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ದೊರಕಬೇಕು ಎಂಬುದು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹೋರಾಟಗಾರರ ಒತ್ತಾಸೆಯಾಗಿತ್ತು. ಅದರಂತೆಯೇ ಜಿಲ್ಲೆಯ ಎಲ್ಲಾ ರಾಜಕಾರಣಿಗಳು ಹಾಗೂ ಹೋರಾಟಗಾರರು ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು (Medical College) ಬೇಕು ಎಂದು ಹಲವು ಬಾರಿ ಧ್ವನಿ ಎತ್ತಿದ ನಿದರ್ಶನಗಳುಂಟು. ಅದರಂತೆ ಬಿಎಸ್ ವೈ ಸಿಎಂ ಆಗಿದ್ದ ವೇಳೆ ಗೃಹ ಸಚಿವರಾಗಿದ್ದ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವರಾಗಿದ್ದ ಡಾ. ಕೆ ಸುಧಾಕರ್ ಕೋಟೆನಾಡಿಗೆ ಭೇಟಿ ನೀಡಿ ಪ್ರೈವೇಟ್  ಮೆಡಿಕಲ್ ಕಾಲೇಜು ನೀಡಲಾಗುವುದು ಎಂದು ಭರವಸೆ ನೀಡಿ ಜಿಲ್ಲಾಸ್ಪತ್ರೆ ಹಿಂಭಾಗದ ಸ್ಥಳವನ್ನು ಪರಿಶೀಲನೆ ಮಾಡಿದ್ದರು. ಆದ್ರೆ ನಮಗೆ ಸರ್ಕಾರಿ‌ ಮೆಡಿಕಲ್‌ ಕಾಲೇಜೆ ಬೇಕು ಎಂದು ಹಲವು ಸ್ಥಳೀಯ ನಾಯಕರು ಅದರಲ್ಲೂ ವಿಶೇಷವಾಗಿ ಚಿತ್ರದುರ್ಗ ಹಿರಿಯ ಶಾಸಕ ತಿಪ್ಪಾರೆಡ್ಡಿ ಹಲವು ಬಾರಿ ಅಪಸ್ವರ ಎತ್ತಿದ್ದರು. ಅದರ ಪ್ರತಿಫಲವೇ  ಹಿರಿಯೂರು ನಗರಕ್ಕೆ ಆಗಮಿಸಿದ್ದ ಆರೋಗ್ಯ ಸಚಿವರು ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಲು ಸಿಎಂ ಸೂಚನೆ ನೀಡಿದ್ದಾರೆ. ಮುಂಬರುವ ಬಜೆಟ್ ನಲ್ಲಿ ಘೋಷಣೆ ಮಾಡಲಾಗುವುದು ಎಂದು ಜಿಲ್ಲೆಯ ಜನರಿಗೆ ಸಿಹಿ ಸುದ್ದಿ ತಿಳಿಸಿದರು.

AKKAMAHADEVI WOMEN'S UNIVERSITY ಮುಚ್ಚುವ ಪ್ರಶ್ನೇಯೇ ಇಲ್ಲವೆಂದ ಕಾರಜೋಳ

ಇನ್ನೂ ಈ ಬಗ್ಗೆ ಸ್ವತಃ ಜಿಲ್ಲೆಯ ಹಿರಿಯ ಶಾಸಕರಾದ ತಿಪ್ಪಾರೆಡ್ಡಿ ಅವರನ್ನ ಕೇಳಿದ್ರೆ, ಈ ವಿಚಾರವಾಗಿ ಸಿಎಂ ಅವರೇ ನನ್ನನ್ನು ಖುದ್ದು ಕರೆದು ನಿಮ್ಮ ಒತ್ತಾಯದ‌ ಮೇರೆಗೆ ಸರ್ಕಾರಿ ಮೆಡಿಕಲ್ ಕಾಲೇಜು ನೀಡಲು ಒಪ್ಪಿದ್ದೇನೆ. ಸದ್ಯದಲ್ಲೇ ಅದರ ಬಗ್ಗೆ ಸಂಪೂರ್ಣ ವಿವರ ನೀಡಲಾಗುಗುವುದು ಎಂದು ಭರವಸೆ ನೀಡಿದ್ರು. ಈ ಬಾರಿ ಮಾತ್ರ ನಮ್ಮ‌ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರು ಆಗೋದು ಶತಃಸಿದ್ದ ಎಂದರು.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more