BIG 3: ಗದಗ ಹುಲ್ಲೂರು ಪಿಯು ಕಾಲೇಜು ಎತ್ತಂಗಡಿ ಇಲ್ಲ, ಸಿ ಸಿ ಪಾಟೀಲ್ ಭರವಸೆ

BIG 3: ಗದಗ ಹುಲ್ಲೂರು ಪಿಯು ಕಾಲೇಜು ಎತ್ತಂಗಡಿ ಇಲ್ಲ, ಸಿ ಸಿ ಪಾಟೀಲ್ ಭರವಸೆ

Published : Jun 29, 2022, 03:22 PM IST

ಗದಗ ರೋಣ ತಾಲೂಕಿನ ಹುಲ್ಲೂರು ಗ್ರಾಮದ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಡಿಮೆ ದಾಖಲಾತಿ ಇದೆ ಎಂದು ಎತ್ತಂಗಡಿ ಮಾಡಲು ಸಿದ್ಧತೆ ನಡೆದಿದೆ. ಈ ಕಾಲೇಜನ್ನು ಧಾರವಾಡದ ಅಳ್ನಾವರಕ್ಕೆ ಸ್ಥಳಾಂತರಿಸುವಂತೆ ಸರ್ಕಾರ ಆದೇಶ ನೀಡಿದೆ. ಈ ಆದೇಶದ ಬೆನ್ನಲ್ಲೇ ವಿದ್ಯಾರ್ಥಿಗಳು, ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. 

ಗದಗ (ಜೂ. 29): ಇಲ್ಲಿನ ರೋಣ ತಾಲೂಕಿನ ಹುಲ್ಲೂರು ಗ್ರಾಮದ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಡಿಮೆ ದಾಖಲಾತಿ ಇದೆ ಎಂದು ಎತ್ತಂಗಡಿ ಮಾಡಲು ಸಿದ್ಧತೆ ನಡೆದಿದೆ. ಈ ಕಾಲೇಜನ್ನು ಧಾರವಾಡದ ಅಳ್ನಾವರಕ್ಕೆ ಸ್ಥಳಾಂತರಿಸುವಂತೆ ಸರ್ಕಾರ ಆದೇಶ ನೀಡಿದೆ. ಈ ಆದೇಶದ ಬೆನ್ನಲ್ಲೇ ವಿದ್ಯಾರ್ಥಿಗಳು, ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. 'ಈ ಕಾಲೇಜು ಸ್ಥಳಾಂತರವಾದರೆ ನಾವು ಬೇರೆ ಕಡೆ ಕಳುಹಿಸಿ ಓದಿಸುವಷ್ಟು ಅನುಕೂಲವಾಗಿಲ್ಲ. ನಮ್ಮ ಮಕ್ಕಳು ಇಲ್ಲಿಯೇ ಒದುವಂತೆ ಅವಕಾಶ ಮಾಡಿಕೊಡಿ' ಎಂದು ಪೋಷಕರು ಒತ್ತಾಯಪಡಿಸಿದ್ದಾರೆ. 

2003 ರಲ್ಲಿ ಈ ಸರ್ಕಾರಿ ಪಿಯು ಕಾಲೇಜನ್ನು ಕಟ್ಟಲಾಗಿದೆ. 2018 ರಲ್ಲಿ ಸುಸಜ್ಜಿತ ಕಟ್ಟಡ ಕಟ್ಟಲಾಗಿದೆ. ಸದ್ಯ 28 ವಿದ್ಯಾರ್ಥಿಗಳು ದಾಖಲಾತಿ ಮಾಡಿಕೊಂಡಿದ್ದಾರೆ. ರೋಣದಿಂದ 10 ಕಿಮೀ ದೂರದಲ್ಲಿದೆ. ಈ ಬಗ್ಗೆ ಬಿಗ್ 3 ಬಹಳ ಕಳಕಳಿಯಿಂದ ವರದಿ ಪ್ರಸಾರ ಮಾಡಿತು. ವರದಿ ಬಳಿಕ ನರಗುಂದ ಶಾಸಕ ಸಿ ಸಿ ಪಾಟೀಲ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಯಾವುದೇ ಕಾರಣಕ್ಕೂ ಕಾಲೇಜು ಸ್ಥಳಾಂತರಕ್ಕೆ ಅವಕಾಶ ಕೊಡುವುದಿಲ್ಲ. ಉಳಿಸಿಕೊಳ್ಳಲು ಪ್ರಯತ್ನಪಡುತ್ತೇವೆ' ಎಂದು ಭರವಸೆ ನೀಡಿದರು. ಶಾಸಕರ ಭರವಸೆಯ ಮಾತುಗಳಿಂದ ವಿದ್ಯಾರ್ಥಿಗಳು, ಪೋಷಕರಲ್ಲಿ ಸಂಭ್ರಮ ಮನೆ ಮಾಡಿದೆ. 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more