ಗುಜರಾತ್ನಲ್ಲಿ 6ರಿಂದ 12ನೇ ತರಗತಿಯ ಪಠ್ಯದಲ್ಲಿ ಭಗವದ್ಗೀತೆ ಸೇರಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ನಮ್ಮ ರಾಜ್ಯದಲ್ಲೂ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಕುರಿತು ಚರ್ಚೆ ಆರಂಭವಾಗಿದೆ.
ಬೆಂಗಳೂರು (ಮಾ. 19): ಗುಜರಾತ್ನಲ್ಲಿ 6ರಿಂದ 12ನೇ ತರಗತಿಯ ಪಠ್ಯದಲ್ಲಿ ಭಗವದ್ಗೀತೆ ಸೇರಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ನಮ್ಮ ರಾಜ್ಯದಲ್ಲೂ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಕುರಿತು ಚರ್ಚೆ ಆರಂಭವಾಗಿದೆ.
'ಕಲಿಕೆಗೆ ಹೆಚ್ಚಿನ ಆದ್ಯತೆ ನೀಡುವ ಸಂದರ್ಭದಲ್ಲಿ ಸರ್ಕಾರ ಮಕ್ಕಳ ಮನಸ್ಸನ್ನು ಕಲ್ಮಶ ಮಾಡಲು ಮುಂದಾಗಿದೆ. ಇದು ನಮ್ಮ ಏಕತೆಗೆ ಅಪಾಯ ತಂದೊಡ್ಡುತ್ತದೆ. ಧರ್ಮ ಹಾಗೂ ಶಿಕ್ಷಣವನ್ನು ಮಿಶ್ರಣ ಮಾಡಬಾರದು. ಇದು ರಾಜ್ಯದ ವಾತಾವರಣ ಹಾಳು ಮಾಡುತ್ತದೆ. ಹಾಗಾಗಿ ಸರ್ಕಾರ ಇನ್ನಷ್ಟು ಪುನರ್ ವಿಮರ್ಶಿಸಬೇಕು' ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.