ಪಠ್ಯ ವಿವಾದ: ಕನಕದಾಸರ ಪಠ್ಯಕ್ಕೆ ಕತ್ತರಿ, ಹೋರಾಟದ ಎಚ್ಚರಿಕೆ ನೀಡಿದ ಕಾಗಿನೆಲೆ ಶ್ರೀಗಳು

ಪಠ್ಯ ವಿವಾದ: ಕನಕದಾಸರ ಪಠ್ಯಕ್ಕೆ ಕತ್ತರಿ, ಹೋರಾಟದ ಎಚ್ಚರಿಕೆ ನೀಡಿದ ಕಾಗಿನೆಲೆ ಶ್ರೀಗಳು

Published : Jun 26, 2022, 11:27 AM ISTUpdated : Jun 26, 2022, 11:34 AM IST

ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿರುವ ಶಾಲಾ ಪಠ್ಯ ಪರಿಷ್ಕರಣೆ ಬಗ್ಗೆ ರಾಜ್ಯದ ಮತ್ತೊಬ್ಬ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಜೂ. 26): ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿರುವ ಶಾಲಾ ಪಠ್ಯ ಪರಿಷ್ಕರಣೆ ಬಗ್ಗೆ ರಾಜ್ಯದ ಮತ್ತೊಬ್ಬ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಕ್ತಿಪಂಥದ ಹರಿಕಾರ ಕನಕದಾಸರ ಬಗ್ಗೆ ಪಠ್ಯದಲ್ಲಿ ಕೇವಲ ಒಂದೇ ಸಾಲಿನ ವಿವರಣೆ ನೀಡಿ ಅವರಿಗೆ ಅಗೌರವ ತೋರಿಸಲಾಗಿದೆ ಎಂದು ಕಾಗಿನಲೆ ಮಹಾಸಂಸ್ಥಾನದ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಭಕ್ತಿಪಂಥ ಎಂಬ ಪಾಠದಲ್ಲಿ ಕನಕದಾಸರನ್ನು ಪರಿಚಯಿಸುವಾಗ ಕೇವಲ ಒಂದೇ ಒಂದು ಸಾಲಿನಲ್ಲಿ ಅವರ ಬಗ್ಗೆ ಮಾಹಿತಿ ನೀಡಿ ಮುಗಿಸಲಾಗಿದೆ. ಈ ಹಿಂದಿನ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯ ಸಮಿತಿಯು ಕನಕದಾಸರ ಬಗ್ಗೆ ಸುಮಾರು ಮುಕ್ಕಾಲು ಪುಟಗಳಷ್ಟುವಿವರವನ್ನು ಪಠ್ಯದಲ್ಲಿ ನೀಡಿತ್ತು. ಇದನ್ನು ರೋಹಿತ್‌ ಚಕ್ರತೀರ್ಥ ಸಮಿತಿ ಕತ್ತರಿಸಿ ಒಂದು ಸಾಲಿಗೆ ಇಳಿಸಿದೆ. ಈ ಸರ್ಕಾರಕ್ಕೆ ಕನಕದಾಸರ ಬಗ್ಗೆ ಇಷ್ಟುಅಸಡ್ಡೆ ಏಕೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್‌ಗೆ  ಶ್ರೀಗಳು ಪತ್ರ ಬರೆದಿದ್ದಾರೆ.  ಬರಗೂರು ರಾಮಚಂದ್ರಪ್ಪ ಅವರ ಸಮಿತಿ ಪರಿಷ್ಕರಿಸಿದ್ದ ಪಠ್ಯವನ್ನೇ ಮುಂದುವರೆಸಬೇಕು. ಇಲ್ಲದಿದ್ದರೆ ಸಮಾಜವನ್ನು ಸಂಘಟಿಸಿಕೊಂಡು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

 

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?