Rohith Chakrathirtha: ಮಕ್ಕಳ ಪಠ್ಯಪುಸ್ತಕದಲ್ಲಿ ಕೇಸರಿ ಕಲರ್​? ಪರಿಷ್ಕರಣೆ ಮಾಡಿದವರೇ ಪಶ್ನೆಗೆ ಉತ್ತರಿಸ್ತಾರೆ!

Rohith Chakrathirtha: ಮಕ್ಕಳ ಪಠ್ಯಪುಸ್ತಕದಲ್ಲಿ ಕೇಸರಿ ಕಲರ್​? ಪರಿಷ್ಕರಣೆ ಮಾಡಿದವರೇ ಪಶ್ನೆಗೆ ಉತ್ತರಿಸ್ತಾರೆ!

Published : May 24, 2022, 07:28 PM IST

ನ್ಯೂಸ್‌ ಅವರ್‌ ಸ್ಪೇಷಲ್‌ನಲ್ಲಿ ಸಮಾಜದ ಬೇರೆ ಬೇರೆ ಕ್ಷೇತ್ರಗಳನ್ನು ಪ್ರತಿನಿಧಿಸುವ ಜನರ ಪ್ರಶ್ನೆಗಳಿಗೆ ಪಠ್ಯ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ  ಉತ್ತರಿಸಿದ್ದಾರೆ.

ಬೆಂಗಳೂರು (ಮೇ 24): ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ (Textbooks Revision) ವೇಳೆ ಮಹಾನ್‌ ಸೇನಾನಿ ಭಗತ್‌ ಸಿಂಗ್‌ ಅವರ ಪಾಠಕ್ಕೆ ಕೊಕ್‌ ನೀಡಿ, ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಸಂಸ್ಥಾಪಕ ಹೆಡಗೇವಾರ್‌ ಅವರ ಭಾಷಣವನ್ನು ಸೇರ್ಪಡೆ ಮಾಡಲಾಗಿದೆ ಎಂಬ ವಿವಾದ ಇದೀಗ ಹಲವು ಮಜಲುಗಳನ್ನು ಪಡೆದುಕೊಂಡಿದೆ. ಪಠ್ಯದಿಂದ ನಾರಾಯಣ ಗುರು ಅವರ ಅಧ್ಯಾಯವನ್ನೂ ಕೈಬಿಡಲಾಗಿದೆ ಎಂಬ ದೂರು ಕೂಡ ವ್ಯಕ್ತವಾಗಿದೆ. ಕೆಲವು ಲೇಖಕರಿಗೆ ಸಂಬಂಧಿಸಿದ ಗದ್ಯವನ್ನು ಪಠ್ಯ ಪುಸ್ತಕ ರಚನಾ ಸಮಿತಿ ಸೇರ್ಪಡೆ ಮಾಡಿರುವುದರಿಂದ ಶಾಲಾ ಪಠ್ಯದಲ್ಲಿ ಕೇಸರೀಕರಣವಾಗಿದೆ ಎಂದು ಹಲವು ಸಂಘಟನೆಗಳು, ಎಡಪಂಥೀಯ ನಾಯಕರು ಹಾಗೂ ರಾಜಕೀಯ ಪಕ್ಷಗಳು ದೂರುತ್ತಿವೆ. 

ಇದನ್ನೂ ನೋಡಿ: ಈಶ್ವರಪ್ಪ ರಾಜಕೀಯ ಜೀವನ ಮುಗಿದೇ ಹೋಯ್ತಾ? ನೇರ ಪ್ರಶ್ನೆಗಳಿಗೆ ಈಶ್ವರಪ್ಪ ನೇರಾ ನೇರ ಉತ್ತರ

ಪಠ್ಯ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ (Rohith Chakrathirtha), ಶಿಕ್ಷಣ ಇಲಾಖೆ ಹಾಗೂ ಖುದ್ದು ಶಿಕ್ಷಣ ಸಚಿವರೇ ಈ ಕುರಿತು ಸ್ಪಷ್ಟನೆ ನೀಡಿದ ತರುವಾಯವೂ ಈ ವಿವಾದ ನಿಲ್ಲುತ್ತಿಲ್ಲ. ಶಾಲಾ ಪಠ್ಯ ವಿಚಾರದಲ್ಲಿ ಇದೇ ರೀತಿ ಜಟಾಪಟಿ ಮುಂದುವರಿಯುತ್ತಾ ಹೋದರೆ, ಆ ಪಠ್ಯಪುಸ್ತಕವನ್ನು ಅಧ್ಯಯನ ಮಾಡಬೇಕಾದ ಮಕ್ಕಳು ಹಾಗೂ ಅವರ ಪೋಷಕರಿಗೆ ಗೊಂದಲವಾಗುವುದಿಲ್ಲವೇ? ಇದಕ್ಕೆ ಯಾರ ಬಳಿಯೂ ಉತ್ತರವಿಲ್ಲ. ಇವೆಲ್ಲದರ ಬಗ್ಗೆ  ನ್ಯೂಸ್ ನ್ಯೂಸ್‌ (Suvarna News Hour) ಅವರ್‌ ಸ್ಪೇಷಲ್‌ನಲ್ಲಿ ಸಮಾಜದ ಬೇರೆ ಬೇರೆ ಕ್ಷೇತ್ರಗಳನ್ನು ಪ್ರತಿನಿಧಿಸುವ ಜನರ ಪ್ರಶ್ನೆಗಳಿಗೆ ಪಠ್ಯ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಖುದ್ದು ಉತ್ತರಿಸಿದ್ದಾರೆ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?
Read more