ಕಡಬ ಸರಕಾರಿ ಶಾಲೆಯ ತರಗತಿಯಲ್ಲಿ ನಮಾಜ್ , ಶಿಕ್ಷಣಾಧಿಕಾರಿ ಭೇಟಿ ಬಳಿಕ ಸೌಹಾರ್ದಯುತವಾಗಿ  ಬಗೆ ಹರಿದ ಸಮಸ್ಯೆ

ಕಡಬ ಸರಕಾರಿ ಶಾಲೆಯ ತರಗತಿಯಲ್ಲಿ ನಮಾಜ್ , ಶಿಕ್ಷಣಾಧಿಕಾರಿ ಭೇಟಿ ಬಳಿಕ ಸೌಹಾರ್ದಯುತವಾಗಿ ಬಗೆ ಹರಿದ ಸಮಸ್ಯೆ

Published : Feb 12, 2022, 07:55 PM ISTUpdated : Feb 12, 2022, 08:22 PM IST

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಂಕತ್ತಡ್ಕ ಸರಕಾರಿ ಶಾಲೆಯ ಮಕ್ಕಳು ನಮಾಜ್ ಮಾಡುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತುರ್ತು ಸಭೆ ಬಳಿಕ ಸೌಹಾರ್ದಯುತವಾಗಿ ಈ ಸಮಸ್ಯೆ ಬಗೆ ಹರಿದಿದೆ ಎಂದು ಬಿಇಒ ಹೇಳಿದ್ದಾರೆ.

ಕಡಬ(ಫೆ.12): ದಕ್ಷಿಣ ಕನ್ನಡ ಜಿಲ್ಲೆಯ ಕಡಬ (Kadaba) ತಾಲೂಕಿನ ಅಂಕತ್ತಡ್ಕ ಸರಕಾರಿ ಶಾಲೆಯ ಮಕ್ಕಳು ನಮಾಜ್ (Namaz) ಮಾಡುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಳೆದ ಮೂರು ವಾರಗಳಿಂದ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡುತ್ತಿದ್ದಾರೆ.  6 ನೇ ಮತ್ತು 7 ನೇ ತರಗತಿ ಮಕ್ಕಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ನಮಾಜ್ ಮಾಡುತ್ತಿದ್ದರೂ ಶಾಲಾ ಸಿಬ್ಬಂದಿ ಗಮನ ಹರಿಸಿಲ್ಲ ಎನ್ನಲಾಗಿದೆ. 

Global remarks on hijab row: ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ, ವಿದೇಶಗಳಿಗೆ ಭಾರತದ ಖಡಕ್ ಎಚ್ಚರಿಕೆ

ನಮಾಜ್ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ  ಲೋಕೇಶ್  ನೇತೃತ್ವದಲ್ಲಿ  ಎಸ್ ಡಿಎಂಸಿ ಸದಸ್ಯರ  ತುರ್ತು ಸಭೆ ನಡೆಸಲಾಗಿದೆ. ಸಭೆಯಲ್ಲಿ ಸವಣೂರು ಪಂಚಾಯತ್ ಆಡಳಿತ, ಪೊಲೀಸ್ ಇಲಾಖೆ ಕೂಡ ಭಾಗವಹಿಸಿತ್ತು. ಜೊತೆಗೆ ಶಾಲಾ ಕೊಠಡಿಯಲ್ಲಿ ನಮಾಜ್ ಹಿನ್ನೆಲೆ ಮುಸ್ಲಿಂ ‌ಮಕ್ಕಳ ಪೋಷಕರೂ ಭಾಗಿಯಾಗಿದ್ದರು.  ಸಭೆ ವೇಳೆ ಎಸ್ ಡಿಎಂಸಿ ಅಧ್ಯಕ್ಷರು ನಮಾಜ್ ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಬಳಿಕ ಸೌಹಾರ್ದಯುತವಾಗಿ ಈ ಸಮಸ್ಯೆ ಬಗೆ ಹರಿದಿದೆ ಎಂದು ಬಿಇಒ ಹೇಳಿದ್ದಾರೆ.

03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
02:31ನಿಮ್ಮ ಮಗ ಅಥವಾ ಮಗಳು ಯಾವತ್ತಾದರೂ IAS/IPS ಆಗೇಬೇಕೆಂದು ಹೇಳಿ ಕೊಂಡಿದ್ದಾರಾ?