Hassan; ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ರಕ್ತ ಬರುವಂತೆ ಹೊಡೆದಾಡಿಕೊಂಡ ಅಧಿಕಾರಿಗಳು!

Hassan; ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ರಕ್ತ ಬರುವಂತೆ ಹೊಡೆದಾಡಿಕೊಂಡ ಅಧಿಕಾರಿಗಳು!

Published : Sep 18, 2022, 06:35 PM IST

ಹಾಸನ ಜಿಲ್ಲೆಯ ಅರಕಲಗೂಡಿನ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳು ಇಬ್ಬರು ರಕ್ತ ಬರುವಂತೆ ಹೊಡೆದಾಡಿಕೊಂಡು ಗಲಾಟೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಅರಕಲಗೂಡಿನ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳು ಇಬ್ಬರು ಗಲಾಟೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿಕ್ಷಕರಿಗೆ ತರಬೇತಿ ನೀಡುವ ಕಾರ್ಯಾಗಾರದಲ್ಲಿ ಅಕ್ಷರ ದಾಸೋಹ ಅಧಿಕಾರಿ ಶಿವಕುಮಾರ್ ಹಾಗೂ ಶಿಕ್ಷಣ ಸಂಯೋಜಕ ಗಿರಿಜಾನಂದ ಮುಂಬಳೆ ಪರಸ್ಪರ ರಕ್ತ ಬರುವಂತೆ ಹೊಡೆದಾಡಿಕೊಂಡಿದ್ದಾರೆ. ಶಿಕ್ಷಕರ ತರಬೇತಿ ನೀಡುವ ಕಾರ್ಯಾಗಾರವೊಂದು ಆಯೋಜಿಸಲಾಗಿತ್ತು. ಈ ವೇಳೆ ಗಿರಿಜಾನಂದ ಮುಂಬಳೆ ಗಣಿತವನ್ನು ಬಿಡಿಸುವ ವಿಧಾನವೊಂದನ್ನು ಹೇಳಿದ್ದಾರೆ. ಆದರೆ ಈ ವಿಧಾನ ತಪ್ಪು ಎಂದು   ಶಿವಕುಮಾರ್ ಅವರಿಗೆ ಅನ್ನಿಸಿ ಅದನ್ನು ಅಲ್ಲೇ ಹೇಳಿದ್ದಾರೆ.  ಬಳಿಕ ಅಲ್ಲಿಂದ ಅರಕಲಗೂಡಿನ ಶಿಕ್ಷಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ್ದಾರೆ. ಅಲ್ಲಿ ಶಿವಕುಮಾರ್ ಅವರನ್ನು ಮಾತನಾಡಲು ಇದೆ ಸ್ವಲ್ಪ ಹೊರಗೆ ಬನ್ನಿ ಎಂದು ಗಿರಿಜಾನಂದ ಕರೆದಿದ್ದಾರೆ ಆದರೆ. ಅವರು ಹೊರಗಡೆ ಬರುವುದಿಲ್ಲ. ಒಂದೆಡರಡು ಬಾರಿ ಕರೆದ ನಂತರ ಕುಪಿತರಾದ ಗಿರಿಜಾನಂದ ಮತ್ತೆ ಕರೆದಾಗ ಶಿವಕುಮಾರ್ ಹೊರಗಡೆ ಬಂದಿದ್ದಾರೆ. ಬಳಿಕ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ ತಾರಕಕ್ಕೇರಿ ರಕ್ತ ಬರುವಂತೆ ಹೊಡೆದಾಡಿಕೊಂಡಿದ್ದಾರೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
03:16ಸುವರ್ಣನ್ಯೂಸ್​-ಕನ್ನಡಪ್ರಭ ಸಹಯೋಗದಲ್ಲಿ ಎಸ್​ಐಪಿ ಅಬಾಕಸ್ ಮೆಂಟಲ್​ ಅರ್ಥಮೆಟಿಕ್​​ ಸ್ಪರ್ಧೆ
03:34ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!
04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
19:34ಮುಖ್ಯಮಂತ್ರಿ ಕನ್ನಡ ಪಂಡಿತ.. ಮಂತ್ರಿಗಳಿಗೆ ಕನ್ನಡವೇ ಬರಲ್ವಾ..?
03:32ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಾಗೂ ಅಮೆರಿಕ ಸಹಯೋಗ
05:21Board Examination: 5,8,9ನೇ ತರಗತಿಯ ಪರೀಕ್ಷೆ ಅತಂತ್ರ : ಬೋರ್ಡ್ ಎಕ್ಸಾಂ ಬೇಕು ಅಂತಿರೋ ಶಿಕ್ಷಣ ಇಲಾಖೆ!
04:36ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!
03:37ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!
03:32ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!
Read more