Sep 2, 2020, 2:35 PM IST
ಬೆಂಗಳೂರು (ಸೆ. 02): ಕೊರೊನಾ, ಲಾಕ್ಡೌನ್ನಿಂದ ಪೋಷಕರು ಬಸವಳಿದು ಹೋಗಿದ್ದಾರೆ. ಸರ್ಕಾರಿ ಶಾಲೆಗಳತ್ತ ಪಾಲಕರ ಚಿತ್ತ ನೆಟ್ಟಿದೆ. ಕೊರೊನಾ, ಲಾಕ್ಡೌನ್ನಿಂದಾಗಿ ಕೆಲವರ ಕೆಲಸಕ್ಕೆ ಕತ್ತರಿ ಬಿದ್ದಿದೆ. ಆರ್ಥಿಕ ಸಂಕಷ್ಟ ಎದುರಾಗಿದೆ. ಕೆಲವರು ನಗರಗಳನ್ನು ಬಿಟ್ಟು ಗ್ರಾಮಗಳತ್ತ ಬರುತ್ತಿದ್ದಾರೆ. ಮಕ್ಕಳ ಶಾಲಾ ಫೀಸ್ ಕಟ್ಟಲು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಸರ್ಕಾರಿ ಶಾಲೆಗಳತ್ತ ಬರುತ್ತಿದ್ದಾರೆ. ಬೆಳಗಾವಿಯಲ್ಲಿ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.