Jan 1, 2021, 9:32 AM IST
ಬೆಂಗಳೂರು (ಜ. 01): 10 ತಿಂಗಳುಗಳಿಂದ ಬಂದ್ ಆಗಿದ್ದ ರಾಜ್ಯದ ಎಲ್ಲಾ ಶಾಲೆ- ಪಿಯು ಕಾಲೇಜುಗಳು ಪುನಾರಂಭಗೊಂಡಿವೆ. ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಸಕಲ ಸಿದ್ಧತೆ ಹಾಗೂ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಶಾಲಾ- ಕಾಲೇಜು ಆವರಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡಾ ಸುರಕ್ಷಾ ಕ್ರಮಗಳ ಬಗ್ಗೆ ಮಾತನಾಡಿದ್ಧಾರೆ. ಪೋಷಕರು ಹೆದರು ಅಗತ್ಯ ಇಲ್ಲ, ನಾವು ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದು ಭರವಸೆ ನೀಡಿದ್ದಾರೆ.