ಬಲಿಷ್ಠ ಬಿಎಸ್‌ವೈ: 22 ಸೀಟಿನ ಹಿಂದಿನ ‘ರಹಸ್ಯ’ ಬಿಚ್ಚಿಟ್ಟರು!

Mar 23, 2019, 8:34 PM IST

ಬೆಂಗಳೂರು(ಮಾ.23): ಬಿಜೆಪಿ ರಾಜ್ಯ ಘಟಕ ಲೋಕಸಭೆ ಚುನಾವಣೆಗೆ ಸಜ್ಜಾಗಿದೆ. ಶತಾಯಗತಾಯ 28 ಕ್ಷೇತ್ರಗಳ ಪೈಕಿ 22 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಲು ಕರ್ನಾಟಕ ಬಿಜೆಪಿ ಪಣ ತೊಟ್ಟಿದೆ. ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿಎಸ್ ಯಡಿಯೂರಪ್ಪ, ಸುವರ್ಣನ್ಯೂಸ್ ಜೊತೆ ಎಕ್ಸಕ್ಲೂಸಿವ್ ಆಗಿ ಮಾತನಾಡಿದ್ದು,  22 ಕ್ಷೇತ್ರಗಳಲ್ಲಿ ಕಮಲ ಅರಳಿಸುವ ಭರವಸೆ ನೀಡಿದ್ದಾರೆ. ಇದೇ ವೇಳೆ ರಾಜ್ಯ ಸಮ್ಮಿಶ್ರ ಸರ್ಕಾರದ ಅವಕಾಶವಾದಿ ರಾಜಕಾರಣದ ಕುರಿತು ಸುದೀರ್ಘವಾಗಿ ಮಾತನಾಡಿದ ಬಿಎಸ್ ವೈ, ಸುವರ್ಣನ್ಯೂಸ್ ನ ವರದಿಗಾರರ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...