Apr 11, 2019, 12:08 PM IST
ಭಾರಿ ಚರ್ಚೆಗೆ ಗ್ರಾಸವಾಗಿರುವ ಬಿಜೆಪಿಯ ಬೆಂಗಳೂರು ದಕ್ಷಿಣ ಟಿಕೆಟ್ ವಿಚಾರ, ಮತ್ತೆ ಹೊಸ ತಿರುವನ್ನು ಪಡೆದುಕೊಂಡಿದೆ. ತೇಜಸ್ವಿನಿ ಅನಂತ್ ಕುಮಾರ್ರಿಗೆ ಟಿಕೆಟ್ ನೀಡಲು ರಾಜ್ಯ ನಾಯಕರ ಒಮ್ಮತಾಭಿಪ್ರಾಭಿಪ್ರಾಯವಿತ್ತು ಎಂದು ಹೇಳಲಾಗಿತ್ತು. ಆದರೆ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ಟಿಕೆಟ್ ನಿರಾಕರಿಸುವುದನ್ನು ಸಮರ್ಥಿಸಿಕೊಂಡಿದ್ದು, ಡಿ ಎನ್ ಎ ಆಧಾರದಲ್ಲಿ ಟಿಕೆಟ್ ಕೊಡಿ ಅಂದ್ರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.