'ಐಟಿ ದಾಳಿ ರಾಜಕೀಯ ಪ್ರೇರಿತ; ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬುತ್ತೆ!‘

Mar 28, 2019, 11:24 AM IST

ರಾಜ್ಯ ಜೆಡಿಎಸ್ ನಾಯಕರ ಮೇಲೆ ಐಟಿ ಇಲಾಖೆ ದಾಳಿಯು ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ.  ರಾಜಕೀಯ ದುರುದ್ದೇಶದಿಂದ ಬಿಜೆಪಿ ಈ ದಾಳಿಯನ್ನು ನಡೆಸಿದೆ, ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಆರೋಪಿಸಿದ್ದಾರೆ. ಚುನಾವಣಾ ಪ್ರಚಾರದ ಮೇಲೆ ಇದು ಯಾವುದೇ ಪರಿಣಾಮ ಬೀರಲ್ಲ ಎಂದಿರುವ ಸಚಿವರು, ಪ್ರತಿಯಾಗಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬುತ್ತದೆ ಎಂದಿದ್ದಾರೆ.