ಪ್ರಧಾನಿ ಹುದ್ದೆಯ ಘನತೆ ಮರೆತು ಮೋದಿ ಮಾತು: ಸಿದ್ದರಾಮಯ್ಯ ಗುಟುರು

Apr 15, 2019, 2:06 PM IST

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನ ಬಾಕಿ ಉಳಿದಿದ್ದಂತೆ, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ.  ಮೈಸೂರಿನಲ್ಲಿ ಪತ್ರಕರ್ತರೊಡನೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನರೇಂದ್ರ ಮೋದಿ ವಿರುದ್ಧ ಗುಟುರು ಹಾಕಿದ್ದಾರೆ. ನರೇಂದ್ರ ಮೋದಿ ಆಧಾರರಹಿತವಾಗಿ ಆರೋಪಗಳನ್ನು ಮಾಡುತ್ತಿದ್ದು, ಪ್ರಧಾನಿ ಹುದ್ದೆಯ ಘನತೆ ಮರೆತು ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.