ಬಿಜೆಪಿ ಹೈಕಮಾಂಡ್ ನನಗೆ ಟಿಕೆಟ್ ಕೊಟ್ಟಿರುವುದು ಅನಂತ್ ಕುಮಾರ್ ಕೊಡುಗೆ: ತೇಜಸ್ವಿ

Mar 26, 2019, 12:14 PM IST

ಭಾರೀ ಕುತೂಹಲ ಮೂಡಿಸಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಡೆಗೂ ನಿರ್ಧಾರವಾಗಿದೆ. ಆರ್‌ಎಸ್‌ಎಸ್ ಕಾರ್ಯಕರ್ತ ತೇಜಸ್ವಿ ಸೂರ್ಯಗೆ ಮಣೆ ಹಾಕಲಾಗಿದೆ. ತೇಜಸ್ವಿನಿ ಅನಂತ್ ಕುಮಾರ್ ಗೆ ಸಿಗಬಹುದು ಎಂದು ಕಡೆವರೆಗೂ ನಿರೀಕ್ಷಿಸಲಾಗಿತ್ತು. ಆದರೆ ಅದು ಸುಳ್ಳಾಗಿದೆ. ತೇಜಸ್ವಿ ಸೂರ್ಯ ತೇಜಸ್ವಿನಿ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ.