ಮುಖ್ಯಮಂತ್ರಿ ಮಗನಿಗೆ ಬುದ್ಧಿ ಹೇಳಿದ ಬಿಗ್‌ಬಾಸ್‌ ವಿನ್ನರ್‌ ಪ್ರಥಮ್: ಎಲ್ಲ ಧರ್ಮ ಗೌರವಿಸುವಂತೆ ತಾಕೀತು

ಮುಖ್ಯಮಂತ್ರಿ ಮಗನಿಗೆ ಬುದ್ಧಿ ಹೇಳಿದ ಬಿಗ್‌ಬಾಸ್‌ ವಿನ್ನರ್‌ ಪ್ರಥಮ್: ಎಲ್ಲ ಧರ್ಮ ಗೌರವಿಸುವಂತೆ ತಾಕೀತು

Published : Sep 06, 2023, 11:31 AM IST

ಸನಾತನ ಧರ್ಮ ನಿರ್ಮೂಲನೆ ಮಾಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಿಎಂ ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌ಗೆ ಬಿಗ್‌ಬಾಸ್‌ ವಿನ್ನರ್‌ ಒಳ್ಳೆಯ ಹುಡುಗ ಪ್ರಥಮ್‌ ಬುದ್ಧಿ ಹೇಳಿದ್ದಾರೆ.

ಚಾಮರಾಜನಗರ (ಸೆ.06): ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಅವರ ಪುತ್ರ ಉದಯನಿಧಿ ಸ್ಟಾಲಿನ್‌ ಅವರು ಸನಾತನ ಧರ್ಮ ನಿರ್ಮೂಲನೆ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಗ್‌ಬಾಸ್‌ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್‌, ನಿನಗಿಷ್ಟ ಇಲ್ಲ ಅಂದ್ರೆ ಬೇಡಕಣಯ್ಯ, ನಿನಗ್ಯಾರಯ್ಯ ಹೇಳಿದ್ದು ಪೂಜೆ ಮಾಡು ಅಂತಾ? ಎಲ್ಲರಿಗೂ ಅವರದ್ದೇ ಧರ್ಮ ಇದೆ, ಎಲ್ಲಾ ಧರ್ಮವನ್ನು ಗೌರವಿಸ ಬೇಕು ಎಂದು ತಾಕೀತು ಮಾಡಿದ್ದಾರೆ.

ಮುಂದುವರೆದು, ಬೇರೆಯವರ ಭಾವನೆಗಳನ್ನು ನೋಯಿಸಿದರೆ ನಮ್ಮನ್ನು ಮನುಷ್ಯರು ಅಂತಾರಾ? ಎಲ್ಲರಿಗು ಅವರದ್ದೇ ಆದ ಧರ್ಮ ಇದೆ ನಂಬಿಕೆ ಇದೆ, ನಿನಗಿಷ್ಟ ಇಲ್ಲ ಅಂದ್ರೆ ಬೇಡ. ಸನಾತನ ಧರ್ಮ ಬಹಳ ಕಾಲದಿಂದ ಇದೆ. ಪ್ರತಿಯೊಂದು ಧರ್ಮವನ್ನು ಗೌರವಿಸಬೇಕು. ಆದರೆ ಸಾರ್ವಜನಿಕವಾಗಿ ಹೆಂಗೆಂಗೋ ಮಾತಾಡೋದು ಸರಿಯಲ್ಲ. ಒಂದು ಬಾರಿ ಹೇಳಿದ ಮೇಲೆ ತಿದ್ಕೊಬಹುದು ಅಂದ್ಕೊಂಡಿದ್ದೆನು. ಒಂದು ಬಾರಿ ನೀಡಿದ ಹೇಳಿಕೆ ತಪ್ಪಾಗಿದ್ರೆ ತಿದ್ದುಕೊಳ್ಳಲು ಬಹಳಷ್ಟು ವೇದಿಕೆಗಳಿವೆ. ಆದ್ರೆ ನಾನು ಹೇಳಿದ್ದೆ ಸರಿ, ನಾನು ಹಂಗೆ ಹೇಳೋದು ಅಂದರೆ ಎಷ್ಟೋ ಜನರ ಭಾವನೆಗಳಿಗೆ ನೋವಾಗುತ್ತದೆ. ಪದೇ ಪದೆ ಅದನ್ನೆ ಹೇಳ್ತೀನಿ  ಅಂದ್ರೆ ಅದು  ಉಡಾಫೆ ಆಗುತ್ತದೆ ಎಂದು ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ನಟ ಪ್ರಥಮ್ ಕಿಡಿಕಾರಿದ್ದಾರೆ.

03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
07:10ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!
Read more