ಮುಖ್ಯಮಂತ್ರಿ ಮಗನಿಗೆ ಬುದ್ಧಿ ಹೇಳಿದ ಬಿಗ್‌ಬಾಸ್‌ ವಿನ್ನರ್‌ ಪ್ರಥಮ್: ಎಲ್ಲ ಧರ್ಮ ಗೌರವಿಸುವಂತೆ ತಾಕೀತು

ಮುಖ್ಯಮಂತ್ರಿ ಮಗನಿಗೆ ಬುದ್ಧಿ ಹೇಳಿದ ಬಿಗ್‌ಬಾಸ್‌ ವಿನ್ನರ್‌ ಪ್ರಥಮ್: ಎಲ್ಲ ಧರ್ಮ ಗೌರವಿಸುವಂತೆ ತಾಕೀತು

Published : Sep 06, 2023, 11:31 AM IST

ಸನಾತನ ಧರ್ಮ ನಿರ್ಮೂಲನೆ ಮಾಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಿಎಂ ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌ಗೆ ಬಿಗ್‌ಬಾಸ್‌ ವಿನ್ನರ್‌ ಒಳ್ಳೆಯ ಹುಡುಗ ಪ್ರಥಮ್‌ ಬುದ್ಧಿ ಹೇಳಿದ್ದಾರೆ.

ಚಾಮರಾಜನಗರ (ಸೆ.06): ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಅವರ ಪುತ್ರ ಉದಯನಿಧಿ ಸ್ಟಾಲಿನ್‌ ಅವರು ಸನಾತನ ಧರ್ಮ ನಿರ್ಮೂಲನೆ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಗ್‌ಬಾಸ್‌ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್‌, ನಿನಗಿಷ್ಟ ಇಲ್ಲ ಅಂದ್ರೆ ಬೇಡಕಣಯ್ಯ, ನಿನಗ್ಯಾರಯ್ಯ ಹೇಳಿದ್ದು ಪೂಜೆ ಮಾಡು ಅಂತಾ? ಎಲ್ಲರಿಗೂ ಅವರದ್ದೇ ಧರ್ಮ ಇದೆ, ಎಲ್ಲಾ ಧರ್ಮವನ್ನು ಗೌರವಿಸ ಬೇಕು ಎಂದು ತಾಕೀತು ಮಾಡಿದ್ದಾರೆ.

ಮುಂದುವರೆದು, ಬೇರೆಯವರ ಭಾವನೆಗಳನ್ನು ನೋಯಿಸಿದರೆ ನಮ್ಮನ್ನು ಮನುಷ್ಯರು ಅಂತಾರಾ? ಎಲ್ಲರಿಗು ಅವರದ್ದೇ ಆದ ಧರ್ಮ ಇದೆ ನಂಬಿಕೆ ಇದೆ, ನಿನಗಿಷ್ಟ ಇಲ್ಲ ಅಂದ್ರೆ ಬೇಡ. ಸನಾತನ ಧರ್ಮ ಬಹಳ ಕಾಲದಿಂದ ಇದೆ. ಪ್ರತಿಯೊಂದು ಧರ್ಮವನ್ನು ಗೌರವಿಸಬೇಕು. ಆದರೆ ಸಾರ್ವಜನಿಕವಾಗಿ ಹೆಂಗೆಂಗೋ ಮಾತಾಡೋದು ಸರಿಯಲ್ಲ. ಒಂದು ಬಾರಿ ಹೇಳಿದ ಮೇಲೆ ತಿದ್ಕೊಬಹುದು ಅಂದ್ಕೊಂಡಿದ್ದೆನು. ಒಂದು ಬಾರಿ ನೀಡಿದ ಹೇಳಿಕೆ ತಪ್ಪಾಗಿದ್ರೆ ತಿದ್ದುಕೊಳ್ಳಲು ಬಹಳಷ್ಟು ವೇದಿಕೆಗಳಿವೆ. ಆದ್ರೆ ನಾನು ಹೇಳಿದ್ದೆ ಸರಿ, ನಾನು ಹಂಗೆ ಹೇಳೋದು ಅಂದರೆ ಎಷ್ಟೋ ಜನರ ಭಾವನೆಗಳಿಗೆ ನೋವಾಗುತ್ತದೆ. ಪದೇ ಪದೆ ಅದನ್ನೆ ಹೇಳ್ತೀನಿ  ಅಂದ್ರೆ ಅದು  ಉಡಾಫೆ ಆಗುತ್ತದೆ ಎಂದು ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ನಟ ಪ್ರಥಮ್ ಕಿಡಿಕಾರಿದ್ದಾರೆ.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
Read more