Sep 27, 2023, 8:43 PM IST
ಬೆಂಗಳೂರು (ಸೆ.27): ರಾಜ್ಯದಲ್ಲಿ ಕಾವೇರಿ ಕಾವು ಜೋರಾಗಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ರೂ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನಿಯಂತ್ರಣ ಪ್ರಾಧಿಕಾರ ಆದೇಶ ನೀಡಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ರೈತರು, ಕನ್ನಡ ಪರ ಹೋರಾಟಗಾರರು ಹಲವು ದಿನಗಳಿಂದ ಬೀದಿಗಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಕಾವೇರಿ ಹೋರಾಟದ ಪರವಾಗಿ ಅನೇಕ ಸ್ಯಾಂಡಲ್ವುಡ್ ಸ್ಟಾರ್ ನಟರು ಬೆಂಬಲ ಸೂಚಿಸುತ್ತಿದ್ದಾರೆ. ಇದೀಗ ಹೊಸ ಸಿನಿಮಾಗಳಿಗೂ ಕಾವೇರಿ ಕಿಚ್ಚು ತಟ್ಟಿದೆ. ಶುಕ್ರವಾರ ಕರ್ನಾಟಕ ಬಂದ್ ಇದ್ದು, ನಾಳೆ ಕನ್ನಡದ ಮೂರು ಸಿನಿಮಾಗಳು ತೆರೆ ಕಾಣಲಿವೆ. ಇದೀಗ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಕಾವೇರಿಗಾಗಿ ಚಿತ್ರಗಳನ್ನು ಮುಂದೂಡಿ ಎಂದು ಮನವಿ ಮಾಡಿದ್ದಾರೆ. ಇದರ ಕಂಪ್ಲೀಟ್ ಮಾಹಿತಿಗಾಗಿ ವಿಡಿಯೋವನ್ನು ವೀಕ್ಷಿಸಿ.