ಅವಮಾನ ಮಾಡುವ ಏಕೈಕ ಉದ್ದೇಶ ಅವರದಾಗಿತ್ತು: ಚಂದನ್‌ ಕುಮಾರ್‌

ಅವಮಾನ ಮಾಡುವ ಏಕೈಕ ಉದ್ದೇಶ ಅವರದಾಗಿತ್ತು: ಚಂದನ್‌ ಕುಮಾರ್‌

Published : Aug 01, 2022, 08:56 PM IST

ಶೂಟಿಂಗ್‌ ವೇಳೆ ಕ್ಯಾಮೆರಾಮೆನ್ ಹಾಗೂ ತಂತ್ರಜ್ಞರ ಜೊತೆ ಚಂದನ್ ಕುಮಾರ್ ಕಿರಿಕ್ ಮಾಡಿಕೊಂಡಿದ್ದಲ್ಲದೆ, ಶೂಟಿಂಗ್‌ ಸ್ಥಳದಲ್ಲೇ ಚಂದನ್‌ ಮೇಲೆ ಹಲ್ಲೆ ಮಾಡಲಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ಚಂದನ್‌ ಕುಮಾರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
 

ಬೆಂಗಳೂರು (ಆ.1): ಹೈದ್ರಾಬಾದ್‌ನಲ್ಲಿ ಸಾವಿತ್ರಮ್ಮಗಾರು ಅಬ್ಬಾಯಿ ಧಾರಾವಾಹಿಯ ಶೂಟಿಂಗ್ ವೇಳೆ ಕನ್ನಡದ ಜನಪ್ರತಿಯ ಕಿರುತೆರೆ ನಟ ಚಂದನ್‌ ಕುಮಾರ್‌ಗೆ ಕಪಾಳ ಮೋಕ್ಷ ಮಾಡಲಾಗಿದೆ. ಈ ಕುರಿತಂತೆ ಸ್ವತಃ ಚಂದನ್‌ ಕುಮಾರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಅವಮಾನ ಮಾಡುವ ಏಕೈಕ ಉದ್ದೇಶ ಅವರಲ್ಲಿತ್ತು ಎಂದು ಹೇಳಿದ್ದಾರೆ.

ಅವರು ಆರೋಪಿಸಿರುವ ಹಾಗೆ ನಾನು ಅಮ್ಮ ಎನ್ನುವ ಪದವನ್ನೆಲ್ಲಾ ಬಳಸಿ ಬೈದಿಲ್ಲ. ನನ್ನ ತಾಯಿಗೆ ಆದ ಪರಿಸ್ಥಿತಿ ನಿನ್ನ ತಾಯಿಗೂ ಆದರೇ ಸುಮ್ಮನಿರ್ತಿದ್ಯಾ ಎಂದು ತೆಲುಗಿನಲ್ಲಿಯೇ ಕೇಳಿದ್ದೆ. ಈ ವಿಡಿಯೋದಲ್ಲಿ ಅವರಿಗೆ ಬೇಕಾದ ಅಂಶವನ್ನು ಮಾತ್ರ ಕಟ್‌ ಮಾಡಿ ಆರೋಪ ಮಾಡಿದ್ದಾರೆ. ಒಟ್ಟಾರೆ ಇಡೀ ಚಿತ್ರೀಕರಣದ ವೇಳೆ ಸಾಕಷ್ಟು ಇಂಥ ಘಟನೆಗಳು ನಡೆದಿದ್ದವು ಎನ್ನುವುದನ್ನು ಚಂದನ್‌ ಕುಮಾರ್‌ ಬಹಿರಂಗಪಡಿಸಿದ್ದಾರೆ.

ತೆಲುಗು ಧಾರಾವಾಹಿ ಸೆಟ್‌ಲ್ಲಿ ಕನ್ನಡದ ನಟ ಚಂದನ್ ಮೇಲೆ ಹಲ್ಲೆ; ವಿಡಿಯೋ ವೈರಲ್

ಬೆಳಗ್ಗೆ ಎದ್ದು ನ್ಯೂಸ್ ನೋಡಿ ಶಾಕ್ ಆಯ್ತು. ಖುಷಿಯ ವಿಚಾರ ತಾಯಿ ಹುಷಾರ್ ಆಗಿದ್ದಾರೆ. ಹೈದ್ರಾಬಾದ್ ನಡೆದಿದ್ದ ಘಟನೆಯನ್ನು ನಾನು ಅಲ್ಲೆ ಬಿಟ್ಟಿದ್ದೆ.  ಒಬ್ಬ ಕನ್ನಡ ನಟನಿಗೆ ಹೊಡೆದಿದ್ದಾರೆ. ಎಲ್ಲರೂ ನನ್ನ ಬೆಂಬಲಕ್ಕೆ ನಿಂತಿದ್ದಾರೆ, ಹೊರಗಿನ ನಟರನ್ನ ಕರೆಸಿ ನಾವು ಹಾಗೆ ಮಾಡಿದ್ರೆ ತಪ್ಪು. ನನ್ನ ಅವರೆಲ್ಲ ನಡೆಸಿಕೊಂಡ ರೀತಿ ಸರಿ ಇಲ್ಲ ಎಂದು ಚಂದನ್‌ ಹೇಳಿದ್ದಾರೆ. ಮಾತುಕತೆ ಏನ್ ಬೇಕಾದ್ರು ಮಾತನಾಡಲಿ. ಮ್ಯಾನ್ ಹ್ಯಾಂಡ್ಲಿಂಗ್‌ ಮಾಡೋದೇನಿತ್ತು. ಸೀರಿಯಲ್ ಟೀಮ್ ನಲ್ಲಿ ಎಲ್ಲರೂ ಚೆನ್ನಾಗಿದ್ದರು. ಅದ್ಯಾಕೆ ಹೀಗೆ ವರ್ತಿಸಿದ್ದಾರೋ ನನಗೆ ಗೊತ್ತಿಲ್ಲ ಎಂದಿದ್ದಾರೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
Read more