ಅವಮಾನ ಮಾಡುವ ಏಕೈಕ ಉದ್ದೇಶ ಅವರದಾಗಿತ್ತು: ಚಂದನ್‌ ಕುಮಾರ್‌

ಅವಮಾನ ಮಾಡುವ ಏಕೈಕ ಉದ್ದೇಶ ಅವರದಾಗಿತ್ತು: ಚಂದನ್‌ ಕುಮಾರ್‌

Published : Aug 01, 2022, 08:56 PM IST

ಶೂಟಿಂಗ್‌ ವೇಳೆ ಕ್ಯಾಮೆರಾಮೆನ್ ಹಾಗೂ ತಂತ್ರಜ್ಞರ ಜೊತೆ ಚಂದನ್ ಕುಮಾರ್ ಕಿರಿಕ್ ಮಾಡಿಕೊಂಡಿದ್ದಲ್ಲದೆ, ಶೂಟಿಂಗ್‌ ಸ್ಥಳದಲ್ಲೇ ಚಂದನ್‌ ಮೇಲೆ ಹಲ್ಲೆ ಮಾಡಲಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ಚಂದನ್‌ ಕುಮಾರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
 

ಬೆಂಗಳೂರು (ಆ.1): ಹೈದ್ರಾಬಾದ್‌ನಲ್ಲಿ ಸಾವಿತ್ರಮ್ಮಗಾರು ಅಬ್ಬಾಯಿ ಧಾರಾವಾಹಿಯ ಶೂಟಿಂಗ್ ವೇಳೆ ಕನ್ನಡದ ಜನಪ್ರತಿಯ ಕಿರುತೆರೆ ನಟ ಚಂದನ್‌ ಕುಮಾರ್‌ಗೆ ಕಪಾಳ ಮೋಕ್ಷ ಮಾಡಲಾಗಿದೆ. ಈ ಕುರಿತಂತೆ ಸ್ವತಃ ಚಂದನ್‌ ಕುಮಾರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಅವಮಾನ ಮಾಡುವ ಏಕೈಕ ಉದ್ದೇಶ ಅವರಲ್ಲಿತ್ತು ಎಂದು ಹೇಳಿದ್ದಾರೆ.

ಅವರು ಆರೋಪಿಸಿರುವ ಹಾಗೆ ನಾನು ಅಮ್ಮ ಎನ್ನುವ ಪದವನ್ನೆಲ್ಲಾ ಬಳಸಿ ಬೈದಿಲ್ಲ. ನನ್ನ ತಾಯಿಗೆ ಆದ ಪರಿಸ್ಥಿತಿ ನಿನ್ನ ತಾಯಿಗೂ ಆದರೇ ಸುಮ್ಮನಿರ್ತಿದ್ಯಾ ಎಂದು ತೆಲುಗಿನಲ್ಲಿಯೇ ಕೇಳಿದ್ದೆ. ಈ ವಿಡಿಯೋದಲ್ಲಿ ಅವರಿಗೆ ಬೇಕಾದ ಅಂಶವನ್ನು ಮಾತ್ರ ಕಟ್‌ ಮಾಡಿ ಆರೋಪ ಮಾಡಿದ್ದಾರೆ. ಒಟ್ಟಾರೆ ಇಡೀ ಚಿತ್ರೀಕರಣದ ವೇಳೆ ಸಾಕಷ್ಟು ಇಂಥ ಘಟನೆಗಳು ನಡೆದಿದ್ದವು ಎನ್ನುವುದನ್ನು ಚಂದನ್‌ ಕುಮಾರ್‌ ಬಹಿರಂಗಪಡಿಸಿದ್ದಾರೆ.

ತೆಲುಗು ಧಾರಾವಾಹಿ ಸೆಟ್‌ಲ್ಲಿ ಕನ್ನಡದ ನಟ ಚಂದನ್ ಮೇಲೆ ಹಲ್ಲೆ; ವಿಡಿಯೋ ವೈರಲ್

ಬೆಳಗ್ಗೆ ಎದ್ದು ನ್ಯೂಸ್ ನೋಡಿ ಶಾಕ್ ಆಯ್ತು. ಖುಷಿಯ ವಿಚಾರ ತಾಯಿ ಹುಷಾರ್ ಆಗಿದ್ದಾರೆ. ಹೈದ್ರಾಬಾದ್ ನಡೆದಿದ್ದ ಘಟನೆಯನ್ನು ನಾನು ಅಲ್ಲೆ ಬಿಟ್ಟಿದ್ದೆ.  ಒಬ್ಬ ಕನ್ನಡ ನಟನಿಗೆ ಹೊಡೆದಿದ್ದಾರೆ. ಎಲ್ಲರೂ ನನ್ನ ಬೆಂಬಲಕ್ಕೆ ನಿಂತಿದ್ದಾರೆ, ಹೊರಗಿನ ನಟರನ್ನ ಕರೆಸಿ ನಾವು ಹಾಗೆ ಮಾಡಿದ್ರೆ ತಪ್ಪು. ನನ್ನ ಅವರೆಲ್ಲ ನಡೆಸಿಕೊಂಡ ರೀತಿ ಸರಿ ಇಲ್ಲ ಎಂದು ಚಂದನ್‌ ಹೇಳಿದ್ದಾರೆ. ಮಾತುಕತೆ ಏನ್ ಬೇಕಾದ್ರು ಮಾತನಾಡಲಿ. ಮ್ಯಾನ್ ಹ್ಯಾಂಡ್ಲಿಂಗ್‌ ಮಾಡೋದೇನಿತ್ತು. ಸೀರಿಯಲ್ ಟೀಮ್ ನಲ್ಲಿ ಎಲ್ಲರೂ ಚೆನ್ನಾಗಿದ್ದರು. ಅದ್ಯಾಕೆ ಹೀಗೆ ವರ್ತಿಸಿದ್ದಾರೋ ನನಗೆ ಗೊತ್ತಿಲ್ಲ ಎಂದಿದ್ದಾರೆ.

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more