ಅವಮಾನ ಮಾಡುವ ಏಕೈಕ ಉದ್ದೇಶ ಅವರದಾಗಿತ್ತು: ಚಂದನ್‌ ಕುಮಾರ್‌

ಅವಮಾನ ಮಾಡುವ ಏಕೈಕ ಉದ್ದೇಶ ಅವರದಾಗಿತ್ತು: ಚಂದನ್‌ ಕುಮಾರ್‌

Published : Aug 01, 2022, 08:56 PM IST

ಶೂಟಿಂಗ್‌ ವೇಳೆ ಕ್ಯಾಮೆರಾಮೆನ್ ಹಾಗೂ ತಂತ್ರಜ್ಞರ ಜೊತೆ ಚಂದನ್ ಕುಮಾರ್ ಕಿರಿಕ್ ಮಾಡಿಕೊಂಡಿದ್ದಲ್ಲದೆ, ಶೂಟಿಂಗ್‌ ಸ್ಥಳದಲ್ಲೇ ಚಂದನ್‌ ಮೇಲೆ ಹಲ್ಲೆ ಮಾಡಲಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ಚಂದನ್‌ ಕುಮಾರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
 

ಬೆಂಗಳೂರು (ಆ.1): ಹೈದ್ರಾಬಾದ್‌ನಲ್ಲಿ ಸಾವಿತ್ರಮ್ಮಗಾರು ಅಬ್ಬಾಯಿ ಧಾರಾವಾಹಿಯ ಶೂಟಿಂಗ್ ವೇಳೆ ಕನ್ನಡದ ಜನಪ್ರತಿಯ ಕಿರುತೆರೆ ನಟ ಚಂದನ್‌ ಕುಮಾರ್‌ಗೆ ಕಪಾಳ ಮೋಕ್ಷ ಮಾಡಲಾಗಿದೆ. ಈ ಕುರಿತಂತೆ ಸ್ವತಃ ಚಂದನ್‌ ಕುಮಾರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಅವಮಾನ ಮಾಡುವ ಏಕೈಕ ಉದ್ದೇಶ ಅವರಲ್ಲಿತ್ತು ಎಂದು ಹೇಳಿದ್ದಾರೆ.

ಅವರು ಆರೋಪಿಸಿರುವ ಹಾಗೆ ನಾನು ಅಮ್ಮ ಎನ್ನುವ ಪದವನ್ನೆಲ್ಲಾ ಬಳಸಿ ಬೈದಿಲ್ಲ. ನನ್ನ ತಾಯಿಗೆ ಆದ ಪರಿಸ್ಥಿತಿ ನಿನ್ನ ತಾಯಿಗೂ ಆದರೇ ಸುಮ್ಮನಿರ್ತಿದ್ಯಾ ಎಂದು ತೆಲುಗಿನಲ್ಲಿಯೇ ಕೇಳಿದ್ದೆ. ಈ ವಿಡಿಯೋದಲ್ಲಿ ಅವರಿಗೆ ಬೇಕಾದ ಅಂಶವನ್ನು ಮಾತ್ರ ಕಟ್‌ ಮಾಡಿ ಆರೋಪ ಮಾಡಿದ್ದಾರೆ. ಒಟ್ಟಾರೆ ಇಡೀ ಚಿತ್ರೀಕರಣದ ವೇಳೆ ಸಾಕಷ್ಟು ಇಂಥ ಘಟನೆಗಳು ನಡೆದಿದ್ದವು ಎನ್ನುವುದನ್ನು ಚಂದನ್‌ ಕುಮಾರ್‌ ಬಹಿರಂಗಪಡಿಸಿದ್ದಾರೆ.

ತೆಲುಗು ಧಾರಾವಾಹಿ ಸೆಟ್‌ಲ್ಲಿ ಕನ್ನಡದ ನಟ ಚಂದನ್ ಮೇಲೆ ಹಲ್ಲೆ; ವಿಡಿಯೋ ವೈರಲ್

ಬೆಳಗ್ಗೆ ಎದ್ದು ನ್ಯೂಸ್ ನೋಡಿ ಶಾಕ್ ಆಯ್ತು. ಖುಷಿಯ ವಿಚಾರ ತಾಯಿ ಹುಷಾರ್ ಆಗಿದ್ದಾರೆ. ಹೈದ್ರಾಬಾದ್ ನಡೆದಿದ್ದ ಘಟನೆಯನ್ನು ನಾನು ಅಲ್ಲೆ ಬಿಟ್ಟಿದ್ದೆ.  ಒಬ್ಬ ಕನ್ನಡ ನಟನಿಗೆ ಹೊಡೆದಿದ್ದಾರೆ. ಎಲ್ಲರೂ ನನ್ನ ಬೆಂಬಲಕ್ಕೆ ನಿಂತಿದ್ದಾರೆ, ಹೊರಗಿನ ನಟರನ್ನ ಕರೆಸಿ ನಾವು ಹಾಗೆ ಮಾಡಿದ್ರೆ ತಪ್ಪು. ನನ್ನ ಅವರೆಲ್ಲ ನಡೆಸಿಕೊಂಡ ರೀತಿ ಸರಿ ಇಲ್ಲ ಎಂದು ಚಂದನ್‌ ಹೇಳಿದ್ದಾರೆ. ಮಾತುಕತೆ ಏನ್ ಬೇಕಾದ್ರು ಮಾತನಾಡಲಿ. ಮ್ಯಾನ್ ಹ್ಯಾಂಡ್ಲಿಂಗ್‌ ಮಾಡೋದೇನಿತ್ತು. ಸೀರಿಯಲ್ ಟೀಮ್ ನಲ್ಲಿ ಎಲ್ಲರೂ ಚೆನ್ನಾಗಿದ್ದರು. ಅದ್ಯಾಕೆ ಹೀಗೆ ವರ್ತಿಸಿದ್ದಾರೋ ನನಗೆ ಗೊತ್ತಿಲ್ಲ ಎಂದಿದ್ದಾರೆ.

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
Read more