ಅವಮಾನ ಮಾಡುವ ಏಕೈಕ ಉದ್ದೇಶ ಅವರದಾಗಿತ್ತು: ಚಂದನ್‌ ಕುಮಾರ್‌

ಅವಮಾನ ಮಾಡುವ ಏಕೈಕ ಉದ್ದೇಶ ಅವರದಾಗಿತ್ತು: ಚಂದನ್‌ ಕುಮಾರ್‌

Published : Aug 01, 2022, 08:56 PM IST

ಶೂಟಿಂಗ್‌ ವೇಳೆ ಕ್ಯಾಮೆರಾಮೆನ್ ಹಾಗೂ ತಂತ್ರಜ್ಞರ ಜೊತೆ ಚಂದನ್ ಕುಮಾರ್ ಕಿರಿಕ್ ಮಾಡಿಕೊಂಡಿದ್ದಲ್ಲದೆ, ಶೂಟಿಂಗ್‌ ಸ್ಥಳದಲ್ಲೇ ಚಂದನ್‌ ಮೇಲೆ ಹಲ್ಲೆ ಮಾಡಲಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ಚಂದನ್‌ ಕುಮಾರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
 

ಬೆಂಗಳೂರು (ಆ.1): ಹೈದ್ರಾಬಾದ್‌ನಲ್ಲಿ ಸಾವಿತ್ರಮ್ಮಗಾರು ಅಬ್ಬಾಯಿ ಧಾರಾವಾಹಿಯ ಶೂಟಿಂಗ್ ವೇಳೆ ಕನ್ನಡದ ಜನಪ್ರತಿಯ ಕಿರುತೆರೆ ನಟ ಚಂದನ್‌ ಕುಮಾರ್‌ಗೆ ಕಪಾಳ ಮೋಕ್ಷ ಮಾಡಲಾಗಿದೆ. ಈ ಕುರಿತಂತೆ ಸ್ವತಃ ಚಂದನ್‌ ಕುಮಾರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಅವಮಾನ ಮಾಡುವ ಏಕೈಕ ಉದ್ದೇಶ ಅವರಲ್ಲಿತ್ತು ಎಂದು ಹೇಳಿದ್ದಾರೆ.

ಅವರು ಆರೋಪಿಸಿರುವ ಹಾಗೆ ನಾನು ಅಮ್ಮ ಎನ್ನುವ ಪದವನ್ನೆಲ್ಲಾ ಬಳಸಿ ಬೈದಿಲ್ಲ. ನನ್ನ ತಾಯಿಗೆ ಆದ ಪರಿಸ್ಥಿತಿ ನಿನ್ನ ತಾಯಿಗೂ ಆದರೇ ಸುಮ್ಮನಿರ್ತಿದ್ಯಾ ಎಂದು ತೆಲುಗಿನಲ್ಲಿಯೇ ಕೇಳಿದ್ದೆ. ಈ ವಿಡಿಯೋದಲ್ಲಿ ಅವರಿಗೆ ಬೇಕಾದ ಅಂಶವನ್ನು ಮಾತ್ರ ಕಟ್‌ ಮಾಡಿ ಆರೋಪ ಮಾಡಿದ್ದಾರೆ. ಒಟ್ಟಾರೆ ಇಡೀ ಚಿತ್ರೀಕರಣದ ವೇಳೆ ಸಾಕಷ್ಟು ಇಂಥ ಘಟನೆಗಳು ನಡೆದಿದ್ದವು ಎನ್ನುವುದನ್ನು ಚಂದನ್‌ ಕುಮಾರ್‌ ಬಹಿರಂಗಪಡಿಸಿದ್ದಾರೆ.

ತೆಲುಗು ಧಾರಾವಾಹಿ ಸೆಟ್‌ಲ್ಲಿ ಕನ್ನಡದ ನಟ ಚಂದನ್ ಮೇಲೆ ಹಲ್ಲೆ; ವಿಡಿಯೋ ವೈರಲ್

ಬೆಳಗ್ಗೆ ಎದ್ದು ನ್ಯೂಸ್ ನೋಡಿ ಶಾಕ್ ಆಯ್ತು. ಖುಷಿಯ ವಿಚಾರ ತಾಯಿ ಹುಷಾರ್ ಆಗಿದ್ದಾರೆ. ಹೈದ್ರಾಬಾದ್ ನಡೆದಿದ್ದ ಘಟನೆಯನ್ನು ನಾನು ಅಲ್ಲೆ ಬಿಟ್ಟಿದ್ದೆ.  ಒಬ್ಬ ಕನ್ನಡ ನಟನಿಗೆ ಹೊಡೆದಿದ್ದಾರೆ. ಎಲ್ಲರೂ ನನ್ನ ಬೆಂಬಲಕ್ಕೆ ನಿಂತಿದ್ದಾರೆ, ಹೊರಗಿನ ನಟರನ್ನ ಕರೆಸಿ ನಾವು ಹಾಗೆ ಮಾಡಿದ್ರೆ ತಪ್ಪು. ನನ್ನ ಅವರೆಲ್ಲ ನಡೆಸಿಕೊಂಡ ರೀತಿ ಸರಿ ಇಲ್ಲ ಎಂದು ಚಂದನ್‌ ಹೇಳಿದ್ದಾರೆ. ಮಾತುಕತೆ ಏನ್ ಬೇಕಾದ್ರು ಮಾತನಾಡಲಿ. ಮ್ಯಾನ್ ಹ್ಯಾಂಡ್ಲಿಂಗ್‌ ಮಾಡೋದೇನಿತ್ತು. ಸೀರಿಯಲ್ ಟೀಮ್ ನಲ್ಲಿ ಎಲ್ಲರೂ ಚೆನ್ನಾಗಿದ್ದರು. ಅದ್ಯಾಕೆ ಹೀಗೆ ವರ್ತಿಸಿದ್ದಾರೋ ನನಗೆ ಗೊತ್ತಿಲ್ಲ ಎಂದಿದ್ದಾರೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
Read more