Sep 1, 2023, 10:01 PM IST
ಜೀ ಕನ್ನಡ ವಾಹಿನಿ ಪ್ರೇಕ್ಷಕರಿಗೆ ಮನರಂಜನೆ ನೀಡುವಲ್ಲಿ ಸದಾ ಮುಂದಿರುತ್ತೆ. ವಾರದ ದಿನಗಳಲ್ಲಿ ಜನಪ್ರಿಯ ಧಾರಾವಾಹಿಗಳ ಮೂಲಕ ಜನರನ್ನು ರಂಜಿಸುತ್ತೆ. ಶ್ರೀರಸ್ತು ಶುಭಮಸ್ತು ಧಾರಾವಾಹಿ ಜನರಿಗೆ ಇಷ್ಟ ಆಗಿದೆ. ಶ್ರೀರಸ್ತು ಶುಭಮಸ್ತು ಧಾರಾವಾಹಿ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯಲ್ಲಿ ನಟಿ ಸುಧಾರಾಣಿ ಅವರು ತುಳಸಿ ಎಂಬ ಪಾತ್ರ ನಿರ್ವಹಿಸುತ್ತಿದ್ದಾರೆ. ಅಜಿತ್ ಅವರು ಮಾಧವ ಎನ್ನುವ ಪಾತ್ರದಲ್ಲಿ ಕಾಣಿಸಿಕೊಂಡರೆ ವೆಂಕಟರಾವ್ ಅವರು ದತ್ತಣ್ಣ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇದೀಗ ಈ ಧಾರಾವಾಹಿ ತಂಡ ಏಷ್ಯಾನೆಟ್ ಸುವರ್ಣ ನ್ಯೂಸ್ಗೆ ವಿಶೇಷ ಸಂದರ್ಶನ ನೀಡಿದ್ದಾರೆ.