ರಕ್ಷಿತ್ ತೀರ್ಥಹಳ್ಳಿ 'ತಿಮ್ಮನ ಮೊಟ್ಟೆಗಳು' ಚಿತ್ರಕ್ಕೆ ಹಾರೈಸಿದ ಕೇಂದ್ರ ಸಚಿವ ಕುಮಾರಸ್ವಾಮಿ, ಪುತ್ರ ನಿಖಿಲ್

ರಕ್ಷಿತ್ ತೀರ್ಥಹಳ್ಳಿ 'ತಿಮ್ಮನ ಮೊಟ್ಟೆಗಳು' ಚಿತ್ರಕ್ಕೆ ಹಾರೈಸಿದ ಕೇಂದ್ರ ಸಚಿವ ಕುಮಾರಸ್ವಾಮಿ, ಪುತ್ರ ನಿಖಿಲ್

Published : Jun 22, 2025, 01:56 PM IST

ಶ್ರೀಕೃಷ್ಣ ಪ್ರೊಡಕ್ಸನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ ಚೊಚ್ಚಲ ನಿರ್ಮಾಣಕ್ಕೆ ಆದರ್ಶ್ ಅಯ್ಯಂಗಾರ್ ಬಂಡವಾಳ ಹಾಕಿದ್ದಾರೆ. ರಕ್ಷಿತ್ ತೀರ್ಥಹಳ್ಳಿ ಬರೆದಿರುವ 'ಕಾಡಿನ ನೆಂಟರು' ಕಥಾ ಸಂಕಲನದಿಂದ ಆಯ್ದ ಒಂದು ಕಥೆ 'ತಿಮ್ಮನ ಮೊಟ್ಟೆಗಳು' ಈಗ ಸಿನಿಮಾ ರೂಪ ಪಡೆದಿದೆ. ಪಶ್ಚಿಮಘಟ್ಟದ ಕಾಡುಗಳಲ್ಲಿ..

ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ 'ತಿಮ್ಮನ ಮೊಟ್ಟೆಗಳು' ಚಿತ್ರವು ಇದೇ ತಿಂಗಳು, ಅಂದರೆ ಜೂನ್ 27ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಹೊಸಬಟ ಈ ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿದೆ. ಇದೀಗ, ಈ ಚಿತ್ರದ ಬಗ್ಗೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಾಗು ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರು 'ತಿಮ್ಮನ ಮೊಟ್ಟೆಗಳು ಚಿತ್ರವು ಯಶಸ್ಸು ಕಾಣಲಿ ಎಂದು ಹರಸಿ, ಹಾರೈಸಿದ್ದಾರೆ.

ಶ್ರೀಕೃಷ್ಣ ಪ್ರೊಡಕ್ಸನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ ಚೊಚ್ಚಲ ನಿರ್ಮಾಣಕ್ಕೆ ಆದರ್ಶ್ ಅಯ್ಯಂಗಾರ್ ಬಂಡವಾಳ ಹಾಕಿದ್ದಾರೆ. ರಕ್ಷಿತ್ ತೀರ್ಥಹಳ್ಳಿ ಬರೆದಿರುವ 'ಕಾಡಿನ ನೆಂಟರು' ಕಥಾ ಸಂಕಲನದಿಂದ ಆಯ್ದ ಒಂದು ಕಥೆ 'ತಿಮ್ಮನ ಮೊಟ್ಟೆಗಳು' ಈಗ ಸಿನಿಮಾ ರೂಪ ಪಡೆದಿದೆ. ಪಶ್ಚಿಮಘಟ್ಟದ ಕಾಡುಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಕಾಳಿಂಗ ಸರ್ಪದ ಕುರಿತು ಚಿತ್ರದ ಪ್ರಮುಖ ಕಥೆಯಿದ್ದು, ಮನುಷ್ಯನಲ್ಲಿರುವ ಹಾಗೆ ಪ್ರಾಣಿಗಳಲ್ಲೂ ಬಾಂಧವ್ಯವಿದೆ.

'ಈತರಹದ ವಿಚಾರಗಳನ್ನು ಜನರ ಮುಂದಿಡುವ ಪ್ರಯತ್ನ ಮಾಡಿದ್ದೇನೆ. ನಿರ್ಮಾಪಕರು ಇತ್ತೀಚೆಗೆ  ಅಮೇರಿಕಾದ ಡಾಲಸ್ ನಲ್ಲಿ  ಪ್ರಿಮೀಯರ್ ಶೋ ಸಹ ಆಯೋಜಿಸಿದ್ದರು. ಅಲ್ಲಿನ ಜನರು ಚಿತ್ರವನ್ನು ಬಹಳ ಇಷ್ಟಪಟ್ಟಿದ್ದಾರೆ. ಪ್ರಸಿದ್ದ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲೂ ಪ್ರದರ್ಶನವಾಗಿರುವ ನಮ್ಮ ಚಿತ್ರ ಜೂನ್ 27 ರಂದು ಬಿಡುಗಡೆಯಾಗುತ್ತಿದೆ. ಎಲ್ಲರೂ  ನೋಡಿ ಪ್ರೋತ್ಸಾಹಿಸಿ ಎಂದಿದ್ದಾರೆ 'ತಿಮ್ಮನ ಮೊಟ್ಟೆಗಳು' ನಿರ್ದೇಶಕರಾದ ರಕ್ಷಿತ್ ತೀರ್ಥಹಳ್ಳಿ.         
    
'ಪ್ರಕೃತಿ ಮತ್ತು ಮನುಷ್ಯನ ನಡುವಿನ ಸೂಕ್ಷ್ಮಸಂವೇದನೆಗಳನ್ನೊಳಗೊಂಡಿರುವ ಕಥಾವಸ್ತುವನ್ನು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ' ಎಂದು ಹಿರಿಯ ನಟ ಸುಚೇಂದ್ರ ಪ್ರಸಾದ್ ಕೂಡ ತಿಳಿಸಿದ್ದಾರೆ.

ತಿಮ್ಮನ ಪಾತ್ರಧಾರಿ ಕೇಶವ್ ಗುತ್ತಳಿಕೆ, ನಟಿ ಶಿಕಾ ಸೋಮಶೇಖರ್, ಪ್ರಗತಿ ಪ್ರಭು, ರಘು ರಾಮನಕೊಪ್ಪ ಹಾಗೂ ಸಂಗೀತ ನಿರ್ದೇಶಕ ಹೇಮಂತ್ ಜೋಯಿಷ್ ಕೂಡ ಈ ಚಿತ್ರ ಹಾಗೂ ತಮ್ಮತಮ್ಮ  ಪಾತ್ರಗಳ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದು ಮಾತನ್ನಾಡಿದ್ದಾರೆ. ಅಂದಹಾಗೆ,ಈ ಚಿತ್ರವು ಇದೇ 27 ರಂದು, (27 ಜೂನ್ 2025) ಕರ್ನಾಟಕದಾದ್ಯಂತ ಬಿಡುಗಡೆ ಆಗಲಿದೆ. 

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
Read more