ಧರ್ಮಸ್ಥಳದ ಧರ್ಮಾಧಿಕಾರಿಯವರನ್ನು ಭೇಟಿಯಾದ ರಿಷಬ್ ಶೆಟ್ಟಿ ದಂಪತಿ

ಧರ್ಮಸ್ಥಳದ ಧರ್ಮಾಧಿಕಾರಿಯವರನ್ನು ಭೇಟಿಯಾದ ರಿಷಬ್ ಶೆಟ್ಟಿ ದಂಪತಿ

Published : Nov 02, 2022, 09:19 PM IST

ಕಾಂತಾರ ಸಿನಿಮಾ ಯಶಸ್ಸಿನ ಬೆನ್ನಲ್ಲೇ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಭೇಟಿ ನೀಡಿದ್ದು,ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ರಿಷಬ್ ಶೆಟ್ಟಿ ದಂಪತಿಗೆ ನಟ ಪ್ರಮೋದ್ ಶೆಟ್ಟಿ ‌ಸಾಥ್ ಕೊಟ್ಟಿದ್ದಾರೆ. 

ಬೆಳ್ತಂಗಡಿ (ನ.02): ಕಾಂತಾರ ಸಿನಿಮಾ ಯಶಸ್ಸಿನ ಬೆನ್ನಲ್ಲೇ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಭೇಟಿ ನೀಡಿದ್ದು,ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ರಿಷಬ್ ಶೆಟ್ಟಿ ದಂಪತಿಗೆ ನಟ ಪ್ರಮೋದ್ ಶೆಟ್ಟಿ ‌ಸಾಥ್ ಕೊಟ್ಟಿದ್ದಾರೆ. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಿಷಬ್ ದಂಪತಿ  ಭೇಟಿಯಾಗಿದ್ದಾರೆ. ಈ ವೇಳೆ ಕಾಂತಾರಾ ಆ ಸಿನಿಮಾ ಬಗ್ಗೆ ಭಾರೀ ಮೆಚ್ಚುಗೆಯನ್ನು ಹೆಗ್ಗಡೆ ಅವರು ವ್ಯಕ್ತಪಡಿಸಿದ್ದು, ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ಹೆಗ್ಗಡೆಯವರ ಜೊತೆಗೂ ರಿಷಬ್ ಚರ್ಚೆ ನಡೆಸಿದ್ದಾರೆ. ಕೆಲ ಕಾಲ ಸಿನಿಮಾದ ಬಗ್ಗೆ ಮಾತುಕತೆ ನಡೆಸಿದ ರಿಷಬ್ ಶೆಟ್ಟಿ ದಂಪತಿ ಬಳಿಕ ಧರ್ಮಾಧಿಕಾರಿಗಳ ಆಶೀರ್ವಾದ ಪಡೆದಿದ್ದಾರೆ. ಇನ್ನು ಧರ್ಮಸ್ಥಳ ಭೇಟಿ ಬಳಿಕ  ಮಾತನಾಡಿದ ನಟ ರಿಷಬ್ ಶೆಟ್ಟಿ, ಸಿನಿಮಾ ಮಾಡುವ ಮುನ್ನ ಹೆಗ್ಗಡೆಯವರನ್ನ ಭೇಟಿ ಮಾಡಿದ್ದೆ. ಆ ಬಳಿಕ ಟ್ರೇಲರ್ ರಿಲೀಸ್ ಆದ ಬಳಿಕ ಮತ್ತೆ ಬಂದಿದ್ದೆ. ಸಿನಿಮಾ ರಿಲೀಸ್  ಬಳಿಕ ಹೆಗ್ಗಡೆಯವರ ಭೇಟಿಗೆ ಸಾಕಷ್ಟು ಸಲ ಬರಬೇಕು ಅಂದುಕೊಂಡಿದ್ದೆ. ಆದರೆ ಇದೀಗ ಕಾಲ ಕೂಡಿ ಬಂತು, ಬಂದು ಆಶೀರ್ವಾದ ಪಡೆದೆವು. ಸಿನಿಮಾ 30 ದಿನ ದಾಟಿ ಯಶಸ್ವಿಯಾಗಿ ಓಡ್ತಾ ಇದೆ ಎಂದು ತಿಳಿಸಿದರು.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
Read more