ಧರ್ಮಸ್ಥಳದ ಧರ್ಮಾಧಿಕಾರಿಯವರನ್ನು ಭೇಟಿಯಾದ ರಿಷಬ್ ಶೆಟ್ಟಿ ದಂಪತಿ

ಧರ್ಮಸ್ಥಳದ ಧರ್ಮಾಧಿಕಾರಿಯವರನ್ನು ಭೇಟಿಯಾದ ರಿಷಬ್ ಶೆಟ್ಟಿ ದಂಪತಿ

Published : Nov 02, 2022, 09:19 PM IST

ಕಾಂತಾರ ಸಿನಿಮಾ ಯಶಸ್ಸಿನ ಬೆನ್ನಲ್ಲೇ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಭೇಟಿ ನೀಡಿದ್ದು,ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ರಿಷಬ್ ಶೆಟ್ಟಿ ದಂಪತಿಗೆ ನಟ ಪ್ರಮೋದ್ ಶೆಟ್ಟಿ ‌ಸಾಥ್ ಕೊಟ್ಟಿದ್ದಾರೆ. 

ಬೆಳ್ತಂಗಡಿ (ನ.02): ಕಾಂತಾರ ಸಿನಿಮಾ ಯಶಸ್ಸಿನ ಬೆನ್ನಲ್ಲೇ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಭೇಟಿ ನೀಡಿದ್ದು,ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ರಿಷಬ್ ಶೆಟ್ಟಿ ದಂಪತಿಗೆ ನಟ ಪ್ರಮೋದ್ ಶೆಟ್ಟಿ ‌ಸಾಥ್ ಕೊಟ್ಟಿದ್ದಾರೆ. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಿಷಬ್ ದಂಪತಿ  ಭೇಟಿಯಾಗಿದ್ದಾರೆ. ಈ ವೇಳೆ ಕಾಂತಾರಾ ಆ ಸಿನಿಮಾ ಬಗ್ಗೆ ಭಾರೀ ಮೆಚ್ಚುಗೆಯನ್ನು ಹೆಗ್ಗಡೆ ಅವರು ವ್ಯಕ್ತಪಡಿಸಿದ್ದು, ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ಹೆಗ್ಗಡೆಯವರ ಜೊತೆಗೂ ರಿಷಬ್ ಚರ್ಚೆ ನಡೆಸಿದ್ದಾರೆ. ಕೆಲ ಕಾಲ ಸಿನಿಮಾದ ಬಗ್ಗೆ ಮಾತುಕತೆ ನಡೆಸಿದ ರಿಷಬ್ ಶೆಟ್ಟಿ ದಂಪತಿ ಬಳಿಕ ಧರ್ಮಾಧಿಕಾರಿಗಳ ಆಶೀರ್ವಾದ ಪಡೆದಿದ್ದಾರೆ. ಇನ್ನು ಧರ್ಮಸ್ಥಳ ಭೇಟಿ ಬಳಿಕ  ಮಾತನಾಡಿದ ನಟ ರಿಷಬ್ ಶೆಟ್ಟಿ, ಸಿನಿಮಾ ಮಾಡುವ ಮುನ್ನ ಹೆಗ್ಗಡೆಯವರನ್ನ ಭೇಟಿ ಮಾಡಿದ್ದೆ. ಆ ಬಳಿಕ ಟ್ರೇಲರ್ ರಿಲೀಸ್ ಆದ ಬಳಿಕ ಮತ್ತೆ ಬಂದಿದ್ದೆ. ಸಿನಿಮಾ ರಿಲೀಸ್  ಬಳಿಕ ಹೆಗ್ಗಡೆಯವರ ಭೇಟಿಗೆ ಸಾಕಷ್ಟು ಸಲ ಬರಬೇಕು ಅಂದುಕೊಂಡಿದ್ದೆ. ಆದರೆ ಇದೀಗ ಕಾಲ ಕೂಡಿ ಬಂತು, ಬಂದು ಆಶೀರ್ವಾದ ಪಡೆದೆವು. ಸಿನಿಮಾ 30 ದಿನ ದಾಟಿ ಯಶಸ್ವಿಯಾಗಿ ಓಡ್ತಾ ಇದೆ ಎಂದು ತಿಳಿಸಿದರು.

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more