ಇದು ದೈವಕ್ಕೆ ಅಪಚಾರ.. ದೈವನರ್ತಕರ ಬೇಸರ; ಹುಚ್ಚಾಟ ಆಡೋರಿಗೆ ಕಾಂತಾರ ಟೀಮ್ ಎಚ್ಚರಿಕೆ..!

ಇದು ದೈವಕ್ಕೆ ಅಪಚಾರ.. ದೈವನರ್ತಕರ ಬೇಸರ; ಹುಚ್ಚಾಟ ಆಡೋರಿಗೆ ಕಾಂತಾರ ಟೀಮ್ ಎಚ್ಚರಿಕೆ..!

Published : Oct 08, 2025, 08:52 PM IST

ಸಿನಿಮಾತಂಡಕ್ಕೆ ತಲೆನೋವು ತಂದಿರೋದು ದೈವದ ವೇಷ, ಹಾಕೋದು ದೈವ ಆವಾಹನೆಯಾದಂತೆ ನಟಿಸೋ ಹುಚ್ಚು ಪ್ರೇಕ್ಷಕರು. ಈ ರೀತಿ ಮಾಡಿದರೆ ಅದು ಪವಿತ್ರ ದೈವಗಳಿಗೆ ಅವಮಾನ ಮಾಡಿದಂತೆ.. ಹೀಗೆ ಹುಚ್ಚಾಟ ಆಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

ಕಾಂತಾರ ಚಾಪ್ಟರ್-1 ಸಿನಿಮಾ 'ಬಾಕ್ಸಾಫೀಸ್'ನಲ್ಲಿ ಅಬ್ಬರಿಸ್ತಾ ಇದೆ. ಸೋಮವಾರದ ದಿನವೂ ದಾಖಲೆ ಕಲೆಕ್ಷನ್ ಆಗಿದೆ. ಆದ್ರೆ  ಈ ನಡುವೆ ಸಿನಿಮಾತಂಡಕ್ಕೆ ತಲೆನೋವು ತಂದಿರೋದು ದೈವದ ವೇಷ, ಹಾಕೋದು ದೈವ ಆವಾಹನೆಯಾದಂತೆ ನಟಿಸೋ ಹುಚ್ಚು ಪ್ರೇಕ್ಷಕರು. ಈ ರೀತಿ ಮಾಡಿದರೆ ಅದು ಪವಿತ್ರ ದೈವಗಳಿಗೆ ಅವಮಾನ ಮಾಡಿದಂತೆ.. ಹೀಗೆ ಹುಚ್ಚಾಟ ಆಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

ಹೌದು, ಯಶಸ್ವಿ ಪ್ರದರ್ಶನ ಕಾಣ್ತಾ ಇರೋ ಕಾಂತಾರ ಟೀಂಗೆ ತಲೆನೋವು ತಂದಿರೋ ಏಕೈಕ ವಿಚಾರ ಅಂದ್ರೆ ಇದೇ. ದೈವದ ವೇಷಗಳನ್ನ ತೊಟ್ಟು ಚಿತ್ರಮಂದಿರಕ್ಕೆ ಬರೋದು. ಅಲ್ಲಿ ಹುಚ್ಚು ಹುಚ್ಚಾಗಿ ನರ್ತಿಸೋದು.. ಇನ್ನೊಂದು ಕಡೆಗೆ ಸಿನಿಮಾ ನೋಡ್ತಾ ಮೈಮೇಲೆ ದೈವ ಆವಾಹನೆ ಆದವರಂತೆ ನಟಿಸೋದು ದಿನೇ ದಿನೇ ಜಾಸ್ತಿ ಆಗ್ತಾ ಇದೆ.

ಅಸಲಿಗೆ ಸಿನಿಮಾ ರಿಲೀಸ್ ಆದ ದಿನವೇ ಬೆಂಗಳೂರಿನಲ್ಲಿ ಒಬ್ಬ ಯುವಕ ದೈವ ಆವಾಹನೆ ಆದವರಂತೆ ನಟನೆ ಮಾಡಿದ್ದ. ಈಗ ಆತ  ಕ್ಷಮೆ ಕೇಳಿದ್ದಾನೆ. ಈ ನಡುವೆ ತಮಿಳುನಾಡಿನ ದಿಂಡಿಗಲ್​ನ ಚಿತ್ರಮಂದಿರದಲ್ಲಿ ಒಬ್ಬ ಯುವಕ ಪಂಜುರ್ಲಿ ದೈವದ ವೇಷ ತೊಟ್ಟು ಹುಚ್ಚು ಹುಚ್ಚಾಗಿ ನರ್ತಿಸಿದ್ದ.

ಇನ್ನೂ ಹಾವೇರಿಯಲ್ಲಿ ಒಬ್ಬ ಮಹಿಳೆ  ಸಿನಿಮಾ ನೋಡ್ತಾ ತನ್ನ ಮೈಮೇಲೆ ದೈವ ಬಂದಂತೆ ವರ್ತಿಸಿದ್ಳು. ಸಿನಿಮಾ ನೋಡೋದನ್ನ ಬಿಟ್ಟು ಜನರೆಲ್ಲಾ ಈಕೆಯ ಅರಚಾಟ ಕಿರುಚಾಟ ನೋಡುವಂತೆ ಮಾಡಿದ್ಳು.

ಇದೀಗ ಮತ್ತೊಬ್ಬ ಮಹಿಳೆ ಕೂಡ ಇದೇ ರೀತಿ ಮೈಮೇಲೆ ಆವಾಹನೆ ಆದಂತೆ ವರ್ತಿಸಿದ್ದಾಳೆ. ದೇಶದ ನಾನಾ ಕಡೆಗೆ ಇಂಥಾ ಘಟನೆಗಳು ನಡೀತಾನೆ ಇವೆ. ಸೋಷಿಯಲ್ ಮಿಡಿಯಾ ತುಂಬಾ ಇಂಥಾ ಅನೇಕ ವಿಡಿಯೋಗಳು ವೈರಲ್ ಆಗಿವೆ.

ಕರಾವಳಿಯ ದೈವಗಳು , ದೈವಾರಾಧನೆಗೆ ಅದರದ್ದೇ ಇತಿಹಾಸ, ಪರಂಪರೆ ಪಾವಿತ್ರ್ಯತೆ ಇದೆ. ಹೀಗೆ ಯಾರೆಂದರೆ ಯಾರು ದೈವದ ವೇಷ ತೊಟ್ಟುಕೊಳ್ಳೋದು, ದೈವ ಆವಾಹನೆ ಆದಂತೆ ನಟಿಸೋದು ದೈವಕ್ಕೆ ಅಪಚಾರ ಎಸಗಿದಂತೆ. ಅಸಲಿಗೆ 2022ರಲ್ಲಿ ಕಾಂತಾರ ತೆರೆಗೆ ಬರುವ ಮುನ್ನ ಹೊರಜಗತ್ತಿನ ತುಳುನಾಡಿನ ದೈವಗಳ ಬಗ್ಗೆ ಅಷ್ಟಾಗಿ ತಿಳುವಳಿಕೆ ಇರಲಿಲ್ಲ ಆದ್ರೆ ಕಾಂತಾರದಲ್ಲಿ ಪಂಜುರ್ಲಿ, ಗುಳಿಗ ದೈವಗಳನ್ನ ನೋಡಿದ ಮೇಲೆ ಎಲ್ಲರಿಗೂ ಈ ಬಗ್ಗೆ ಕುತೂಹಲ ಹೆಚ್ಚಾಯ್ತು.

ಕುತೂಹಲದಿಂದ ತಿಳಿದುಕೊಳ್ಳೋದು ಬೇರೆ, ಆದ್ರೆ ಮಕ್ಕಳಿಗೆ ದೈವದ ವೇಷ ಹಾಕಿಸೋದು. ವೇಷ ಭೂಷಣ ಸ್ಪರ್ದೆಗಳಲ್ಲಿ ಇದನ್ನ ಅನುಕರಿಸೋದು. ರೀಲ್ಸ್ ಗಾಗಿ ಈ ವೇಷ ತೊಡೋದು.. ಇಂಥಾ ಹುಚ್ಚಾಟಗಳನ್ನ ಜನ ಮಾಡ್ಲಿಕ್ಕೆ ಶುರುಮಾಡಿದ್ರು. ಆಗಲೇ ತುಳುನಾಡಿನ ದೈವನರ್ತಕರು ಕಾಂತಾರ ಸಿನಿಮಾವನ್ನ ಮುಂದುವರೆಸಬೇಡಿ ಅಂತ ಪ್ರತಿಭಟನೆ ಮಾಡಿದ್ರು. ಯಾವುದೇ ಸೀರಿಯಲ್, ಸಿನಿಮಾಗಳಲ್ಲಿ ದೈವಗಳನ್ನ ತೋರಿಸೋದು ಬೇಡ ಅಂತ ಆಗ್ರಹ ಮಾಡಿದ್ರು.

ಇದರ ಹೊರತಾಗಿಯೂ ಕಾಂತಾರ ಚಾಪ್ಟರ್​-1ನಲ್ಲಿ ದೈವಾರಾಧನೆ, ದೈವ ಆವಾಹನೆ ದೃಶ್ಯಗಳಿವೆ. ಇವುಗಳನ್ನ ಸೂಕ್ತ ಹಿರಿಯರ, ಮಾರ್ಗದರ್ಶಕರ ಸಲಹೆ ಪಡೆದೇ ಮಾಡಲಾಗಿದೆ. ಇವುಗಳನ್ನ ಅನುಕರಿಸಬೇಡಿ ಅಂತ ಸಿನಿತಂಡ ಟೈಟಲ್ ಕಾರ್ಡ್​ನಲ್ಲೇ ಎಚ್ಚರಿಸಿದೆ. ಆದ್ರೆ ಜನ ಮಾತ್ರ ಮತ್ತೆ ಸಿನಿಮಾ ನೋಡಿ ಹುಚ್ಚಾಟಗಳನ್ನ ಮಾಡ್ತಾ ಇದ್ದಾರೆ.

ಹೌದು ಇನ್ಮುಂದೆ ಯಾವುದೇ ಚಿತ್ರಮಂದಿರಗಳಲ್ಲಿ ಅಥವಾ ಸಭೆ, ಸಮಾರಂಭಗಳಲ್ಲಿ ಇಂಥಾ ದೈವ ಆವಾಹನೆ, ಅನುಕರಣೆ ಮಾಡಿದ್ದು ಕಂಡುಬಂದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ತಿವಿ ಅಂತ ಕಾಂತಾರ ಟೀಂ ಬಹಿರಂಗವಾಗಿ ಎಚ್ಚರಿಕೆ ನೀಡಿದೆ. ಸಿನಿಮಾ ನೋಡಿ ಎಂಜಾಯ್ ಮಾಡಿ.. ಆದ್ರೆ ಇಂಥಾ ಹುಚ್ಚಾಟ ಆಡಬೇಡಿ ಅಂತ  ಚಿತ್ರತಂಡ ಎಚ್ಚರಿಸಿದೆ.

ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ…

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
Read more