'ಬಾ ನಲ್ಲೆ ಮಧುಚಂದ್ರಕೆ', 'ರಿಂಗ್ ರೋಡ್ ಶುಭಾ'ನಲ್ಲೂ ಇಂಥದ್ದೇ ಕಥೆ; ಮೇಘಾಲಯ ಕೇಸ್​ ಸಿನಿಮಾ ಆಗುತ್ತಾ?

'ಬಾ ನಲ್ಲೆ ಮಧುಚಂದ್ರಕೆ', 'ರಿಂಗ್ ರೋಡ್ ಶುಭಾ'ನಲ್ಲೂ ಇಂಥದ್ದೇ ಕಥೆ; ಮೇಘಾಲಯ ಕೇಸ್​ ಸಿನಿಮಾ ಆಗುತ್ತಾ?

Published : Jun 14, 2025, 11:48 AM ISTUpdated : Jun 14, 2025, 11:52 AM IST

ಮೊದಲು ವರ ರಾಜ ರಘುವಂಶಿ ಮೃತದೇಹ ಪತ್ತೆಯಾಗಿತ್ತು. ಬಳಿಕ ಆತನ ಪತ್ನಿ ಸೋನಮ್ ರಘುವಂಶಿಯೇ ಪತಿಯ ಮರ್ಡರ್ ಮಾಡಿಸಿದ್ದು ಅನ್ನೋ ಬೆಚ್ಚಿಬೀಳಿಸೋ ಸಂಗತಿ ಬಯಲಾಗಿತ್ತು. ಸೋನಮ್ ತನ್ನ ಪ್ರಿಯತಮನಿಗಾಗಿ ಸುಪಾರಿ ಕೊಟ್ಟು ಕಟ್ಟಿಕೊಂಡ ಗಂಡನ ಕೊಲೆ ಮಾಡಿಸಿದ್ಳು.

ಇತ್ತೀಚಿಗೆ ಮೇಘಾಲಯದಲ್ಲಿ ನಡೆದ ರಾಜಾ ರಘುವಂಶಿ ಮರ್ಡರ್​ ಕೇಸ್ ಇಡೀ ದೇಶಾದ್ಯಂತ ಸದ್ದು ಮಾಡಿದೆ. ಅದ್ರಲ್ಲೂ ನಮ್ಮ ಬಾ ನಲ್ಲೆ ಮಧುಚಂದ್ರಕೆ ಸಿನಿಮಾದ ಜೊತೆಗೆ ಇದನ್ನ ಹೋಲಿಕೆ ಮಾಡ್ತಾ ಇದ್ದಾರೆ. ಈ ಕಥೆಯನ್ನಿಟ್ಟುಕೊಂಡು ಬಾ ನಲ್ಲ ಮಧುಚಂದ್ರಕೆ ಅನ್ನೋ ಸಿನಿಮಾ ಮಾಡಬಹುದು ಅಂತ ಸಲಹೆ ಕೊಡ್ತಾ ಇದ್ದಾರೆ.

ಹೌದು, ಇತ್ತೀಚಿಗೆ ಮೇಘಾಲಯದಲ್ಲಿ ನಡೆದ ಮರ್ಡರ್ ಕೇಸ್ ಬಗ್ಗೆ ದೇಶಾದ್ಯಂತ ಚರ್ಚೆಯಾಗ್ತಾ ಇದೆ. ಅಸಲಿಗೆ ಮೇಘಾಲಯಕ್ಕೆ ಹನಿಮೂನ್​ಗೆ ಅಂತ ಬಂದಿದ್ದ ಇಂದೋರ್ ಮೂಲದ ನವದಂಪತಿ ಮೇ 23ನೇ ತಾರೀಖು ಕಣ್ಮರೆ ಆಗಿದ್ರು. ಇದೊಂದು ಮಿಸ್ಸಿಂಗ್ ಕೇಸ್ ಅಂದುಕೊಂಡು ತನಿಖೆಗೆ ಇಳಿದಿದ್ದ ಪೊಲೀಸರಿಗೆ ಬಳಿಕ ರೋಚಕ ವಿವರಗಳು ಸಿಕ್ಕಿದ್ವು.

ಮೊದಲು ವರ ರಾಜ ರಘುವಂಶಿ ಮೃತದೇಹ ಪತ್ತೆಯಾಗಿತ್ತು. ಬಳಿಕ ಆತನ ಪತ್ನಿ ಸೋನಮ್ ರಘುವಂಶಿಯೇ ಪತಿಯ ಮರ್ಡರ್ ಮಾಡಿಸಿದ್ದು ಅನ್ನೋ ಬೆಚ್ಚಿಬೀಳಿಸೋ ಸಂಗತಿ ಬಯಲಾಗಿತ್ತು. ಸೋನಮ್ ತನ್ನ ಪ್ರಿಯತಮನಿಗಾಗಿ ಸುಪಾರಿ ಕೊಟ್ಟು  ಕಟ್ಟಿಕೊಂಡ ಗಂಡನ ಕೊಲೆ ಮಾಡಿಸಿದ್ಳು.

ಇದನ್ನ ನೋಡಿದವರು 1993ರಲ್ಲಿ ಬಂದ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಬಾ ನಲ್ಲೆ ಮಧುಚಂದ್ರಕೆ ಸಿನಿಮಾವನ್ನ ನೆನಪಿಸಿಕೊಂಡಿದ್ರು. ಅಸಲಿಗೆ ಈ ಸಿನಿಮಾದಲ್ಲಿ ನಾಯಕ ನಾಯಕಿನ್ನ ಮಧುಚಂದ್ರಕೆ ಕರೆದೊಯ್ದು ಕೊಲೆ ಮಾಡ್ತಾನೆ. ಆದ್ರೆ ಸೋನಮ್ ಕೇಸ್​ನಲ್ಲಿ ಪತ್ನಿಯೇ ಪತಿಯ ಕೊಲೆ ಮಾಡಿಸಿದ್ದಾಳೆ. ಅಷ್ಟು ಬಿಟ್ರೆ ಎಲ್ಲಾ ಸೇಮ್ ಟು ಟೇಮ್.

ಅಸಲಿಗೆ ಬಾ ನಲ್ಲೆ ಮಧುಚಂದ್ರಕೆ ಸಿನಿಮಾದ ಕಥೆ ಕೂಡ ನಿಜ ಘಟನೆಯೊಂದರ ಸ್ಪೂರ್ತಿಯಿಂದ ಮೂಡಿಬಂದಿತ್ತು. ಪೊಲೀಸ್ ಅಧಿಕಾರಿಯೊಬ್ರು ಹೇಳಿದ ಕ್ರೈಂ ಕಥೆಯೊಂದನ್ನ ಕೇಳಿ ಬಾ ನಲ್ಲೆ ಮಧುಚಂದ್ರಕೆ ಅನ್ನೋ ಕಾದಂಬರಿ ಬರೆದಿದ್ರು ನಾಗತಿಹಳ್ಳಿ ಚಂದ್ರಶೇಖರ್. ಮುಂದೆ ಅದೇ ಕಾದಂಬರಿ ಆಧರಿಸಿ ಈ ಸಿನಿಮಾ ಮಾಡಿದ್ರು.

ಇನ್ನೂ ಮೇಘಾಲಯ ಮರ್ಡರ್ ಕೇಸ್​​ಗೆ ಹೋಲಿಕೆಯಾಗುವಂಥಾ ಮತ್ತೊಂದು ಕನ್ನಡ ಸಿನಿಮಾ ಇದೆ. ಅದುವೇ ರಿಂಗ್ ರೋಡ್ ಶುಭಾ. 2015ರಲ್ಲಿ ಬಂದ ಈ ಸಿನಿಮಾ ಕೂಡ ಒಂದು ನೈಜ ಕಥೆಯನ್ನ ಆಧರಿಸಿ ಸಿದ್ದವಾಗಿತ್ತು. 2003ರಲ್ಲಿ ಶುಭಾ ಅನ್ನೋ ಯುವತಿ ಎಂಗೇಜ್ ಮೆಂಟ್ ಅಗಿದ್ದ ತನ್ನ ಭಾವಿ ಪತಿಯನ್ನ ಗೆಳೆಯನಿಗೋಸ್ಕರ ಕೊಲೆ ಮಾಡಿಸಿದ್ದಳು.

ಇದೀಗ ಮೇಘಾಲಯ ಮರ್ಡರ್ ಕೇಸ್​ನ ನೋಡಿ ಈ ಸಿನಿಮಾಗಳನ್ನ ಜನ ನೆನಪು ಮಾಡಿಕೊಳ್ತಾ ಇದ್ದಾರೆ. ಅದ್ರಲ್ಲೂ ಮೇಘಾಲಯ ಹನಿಮೂನ್ ಮರ್ಡರ್ ಕೇಸ್​ನ ಒಂದೊಂದು ವಿವರಗಳು ಕೂಡ ಬೆಚ್ಚಿ ಬೀಳಿಸೋ ತರಹ ಇದಾವೆ. ಸೋ ಇದನ್ನ ಆಧರಿಸಿ ಬಾ ನಲ್ಲ ಮಧುಚಂದ್ರಕೆ ಅನ್ನೋ ಸಿನಿಮಾ ಬಂದ್ರೂ ಅಚ್ಚರಿ ಏನಿಲ್ಲ.!

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
Read more