Mysuru: ಮಾರ್ಚ್‌ನಲ್ಲಿ ರಂಗಾಯಣದ ಬಹುರೂಪಿ ನಾಟಕೋತ್ಸವಕ್ಕೆ ವೇದಿಕೆ ಸಜ್ಜು

Mysuru: ಮಾರ್ಚ್‌ನಲ್ಲಿ ರಂಗಾಯಣದ ಬಹುರೂಪಿ ನಾಟಕೋತ್ಸವಕ್ಕೆ ವೇದಿಕೆ ಸಜ್ಜು

Published : Feb 23, 2022, 12:00 PM IST

ರಾಷ್ಟ್ರೀಯ ಮಾನ್ಯತೆ ಹೊಂದಿರುವ ರಂಗಾಯಣದ ಬಹುರೂಪಿ ನಾಟಕೋತ್ಸವಕ್ಕೆ ಮತ್ತೊಮ್ಮೆ ವೇದಿಕೆ ಸಿದ್ದವಾಗಿದೆ. ಕೊರೊನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ರಂಗ ರಸಮಯ ಕ್ಷಣ ಮತ್ತೆ ಬಂದಿದೆ. ಮುಂದಿನ ತಿಂಗಳು 10 ದಿನಗಳ ಕಾಲ ನಡೆಯುವ ರಾಷ್ಟ್ರೀಯ ನಾಟಕೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನ ರಂಗಾಯಣ ಸಜ್ಜಾಗುತ್ತಿದೆ.

ಒಂದೆಡೆ ಕೊರೊನಾ ಮೂರನೇ ಅಲೆಯ ಅಬ್ಬರ, ಮತ್ತೊಂದೆಡೆ ಅಥಿತಿಗಳ ಆಹ್ವಾನದ ವಿಚಾರದಲ್ಲಿ ಏರ್ಪಟ್ಟಿದ್ದ ವಿವಾದ. ಎರಡೂ ಕಾರಣಗಳಿಂದಾಗಿ ಮೈಸೂರಿನ ರಂಗಾಯಣ(Rangayana)ದ ಬಹುರೂಪಿ ರಂಗೋತ್ಸವ ಕಳೆದ ವರ್ಷ ಡಿಸೆಂಬರ್‌(December)ನಲ್ಲಿ ನಿಂತು ಹೋಗಿತ್ತು.‌ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರನ್ನು ಉತ್ಸವಕ್ಕೆ ಆಹ್ವಾನಿಸಿರುವುದರ ವಿರುದ್ಧ ಎಡಪಂಥೀಯ ಸದಸ್ಯರು ದನಿ ಎತ್ತಿದ್ದರು. ಇದರ ಜೊತೆಗೆ ಕೊರೊನಾ(Corona) ಅಬ್ಬರ ಹೆಚ್ಚಾಗಿ ಬಹುರೂಪಿ ನಾಟಕೋತ್ಸವ ಮುಂದೂಡಲ್ಪಟ್ಟಿತ್ತು.

 ಈಗ ಮತ್ತೊಮ್ಮೆ ಬಹುರೂಪಿಗೆ ಕಾಲ ಕೂಡಿ ಬಂದಿದ್ದು, ಮಾರ್ಚ್(March) 11 ರಿಂದ 10 ದಿನಗಳ ಕಾಲ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಜರುಗಲಿದೆ. ಈ ಬಾರಿ "ತಾಯಿ" ಎಂಬ ಶೀರ್ಷಿಕೆ ಅಡಿಯಲ್ಲಿ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ನಡೆಯಲಿದ್ದು, ತಾಯಿ ಬಗ್ಗೆ ವಿಸ್ತೃತ ಚರ್ಚೆಯನ್ನೊಳಗೊಂಡ ವಿಚಾರ ಸಂಕಿರಣ ಆಯೋಜನೆ ಮಾಡಲಾಗಿದೆ.

ಜಮೀನು, ಜಲ, ಜಾನುವಾರು, ಜಂಗಲ್, ಜನ ಎಂಬ ಪಂಚಸೂತ್ರದಲ್ಲಿ ತಾಯಿ(Mother) ಮತ್ತು ತಾಯ್ತನ ನೋಡುವ ಪ್ರಯತ್ನ ರಂಗೋತ್ಸವದಲ್ಲಿ ನಡೆಯಲಿದೆ. ವಿವಿಧ ರಾಜ್ಯ, ಜಿಲ್ಲೆಗಳ ಶ್ರೇಷ್ಠ ನಾಟಕಗಳ ಪ್ರದರ್ಶನ, ಜಾನಪದ ಕಲಾಪ್ರದರ್ಶನ, ಚಲನಚಿತ್ರೋತ್ಸವ(Film Festival), ಪುಸ್ತಕ ಪ್ರದರ್ಶನ(Book Exhibition), ಕರಕುಶಲ ಪ್ರದರ್ಶನ, ಪ್ರಾತ್ಯಕ್ಷಿಕೆ, ಆಹಾರ ಮೇಳ ಸೇರಿ ಹಲವು ಕಾರ್ಯಕ್ರಮಗಳನ್ನು ರಂಗಾಯಣ ಆಯೋಜನೆ ಮಾಡಿಕೊಂಡಿದ್ದು, ಈ ಬಾರಿ ಬಹುರೂಪಿಯಲ್ಲಿ ವಿವಿಧ ರಾಜ್ಯ, ವಿವಿಧ ಭಾಷೆಗಳ ಒಟ್ಟು 35 ನಾಟಕಗಳ ಪ್ರದರ್ಶನಗೊಳ್ಳಲಿವೆ. 

KPAC Lalitha Passes Away : ಖ್ಯಾತ ಮಲಯಾಳಂ ನಟಿ ಕೆಪಿಎಸಿ ಲಲಿತಾ ಇನ್ನಿಲ್ಲ

ರಾಷ್ಟ್ರ ಪ್ರಖ್ಯಾತ ನಟಿ ಶಬಾನಾ ಆಜ್ಮಿ(Shabana Azmi), ನಾಸಿರುದ್ದೀನ್ ಶಾ, ಅಮೋಲ್ ಪಾಲೇಕರ್, ಶ್ರೀಲಂಕಾ(Srilanka)ದ ಪರಾಕ್ರಮ ನಿರಿಯಲ್ಲ, ಪ್ರಸನ್ನ, ಅನಂತ್ ನಾಗ್ ಸೇರಿ ಇತರ ಹಿರಿಯ ರಂಗ ಕಲಾವಿದರಿಂದ ಬಹುರೂಪಿ ಉದ್ಘಾಟನೆ ನಡೆಯಲಿದೆ. ಸದ್ಯ ಸಮಾರೋಪದ ಬಗ್ಗೆ ರಂಗಾಯಣ ನಿರ್ದೇಶಕರು ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
Read more