Mysuru: ಮಾರ್ಚ್‌ನಲ್ಲಿ ರಂಗಾಯಣದ ಬಹುರೂಪಿ ನಾಟಕೋತ್ಸವಕ್ಕೆ ವೇದಿಕೆ ಸಜ್ಜು

Mysuru: ಮಾರ್ಚ್‌ನಲ್ಲಿ ರಂಗಾಯಣದ ಬಹುರೂಪಿ ನಾಟಕೋತ್ಸವಕ್ಕೆ ವೇದಿಕೆ ಸಜ್ಜು

Published : Feb 23, 2022, 12:00 PM IST

ರಾಷ್ಟ್ರೀಯ ಮಾನ್ಯತೆ ಹೊಂದಿರುವ ರಂಗಾಯಣದ ಬಹುರೂಪಿ ನಾಟಕೋತ್ಸವಕ್ಕೆ ಮತ್ತೊಮ್ಮೆ ವೇದಿಕೆ ಸಿದ್ದವಾಗಿದೆ. ಕೊರೊನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ರಂಗ ರಸಮಯ ಕ್ಷಣ ಮತ್ತೆ ಬಂದಿದೆ. ಮುಂದಿನ ತಿಂಗಳು 10 ದಿನಗಳ ಕಾಲ ನಡೆಯುವ ರಾಷ್ಟ್ರೀಯ ನಾಟಕೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನ ರಂಗಾಯಣ ಸಜ್ಜಾಗುತ್ತಿದೆ.

ಒಂದೆಡೆ ಕೊರೊನಾ ಮೂರನೇ ಅಲೆಯ ಅಬ್ಬರ, ಮತ್ತೊಂದೆಡೆ ಅಥಿತಿಗಳ ಆಹ್ವಾನದ ವಿಚಾರದಲ್ಲಿ ಏರ್ಪಟ್ಟಿದ್ದ ವಿವಾದ. ಎರಡೂ ಕಾರಣಗಳಿಂದಾಗಿ ಮೈಸೂರಿನ ರಂಗಾಯಣ(Rangayana)ದ ಬಹುರೂಪಿ ರಂಗೋತ್ಸವ ಕಳೆದ ವರ್ಷ ಡಿಸೆಂಬರ್‌(December)ನಲ್ಲಿ ನಿಂತು ಹೋಗಿತ್ತು.‌ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರನ್ನು ಉತ್ಸವಕ್ಕೆ ಆಹ್ವಾನಿಸಿರುವುದರ ವಿರುದ್ಧ ಎಡಪಂಥೀಯ ಸದಸ್ಯರು ದನಿ ಎತ್ತಿದ್ದರು. ಇದರ ಜೊತೆಗೆ ಕೊರೊನಾ(Corona) ಅಬ್ಬರ ಹೆಚ್ಚಾಗಿ ಬಹುರೂಪಿ ನಾಟಕೋತ್ಸವ ಮುಂದೂಡಲ್ಪಟ್ಟಿತ್ತು.

 ಈಗ ಮತ್ತೊಮ್ಮೆ ಬಹುರೂಪಿಗೆ ಕಾಲ ಕೂಡಿ ಬಂದಿದ್ದು, ಮಾರ್ಚ್(March) 11 ರಿಂದ 10 ದಿನಗಳ ಕಾಲ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಜರುಗಲಿದೆ. ಈ ಬಾರಿ "ತಾಯಿ" ಎಂಬ ಶೀರ್ಷಿಕೆ ಅಡಿಯಲ್ಲಿ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ನಡೆಯಲಿದ್ದು, ತಾಯಿ ಬಗ್ಗೆ ವಿಸ್ತೃತ ಚರ್ಚೆಯನ್ನೊಳಗೊಂಡ ವಿಚಾರ ಸಂಕಿರಣ ಆಯೋಜನೆ ಮಾಡಲಾಗಿದೆ.

ಜಮೀನು, ಜಲ, ಜಾನುವಾರು, ಜಂಗಲ್, ಜನ ಎಂಬ ಪಂಚಸೂತ್ರದಲ್ಲಿ ತಾಯಿ(Mother) ಮತ್ತು ತಾಯ್ತನ ನೋಡುವ ಪ್ರಯತ್ನ ರಂಗೋತ್ಸವದಲ್ಲಿ ನಡೆಯಲಿದೆ. ವಿವಿಧ ರಾಜ್ಯ, ಜಿಲ್ಲೆಗಳ ಶ್ರೇಷ್ಠ ನಾಟಕಗಳ ಪ್ರದರ್ಶನ, ಜಾನಪದ ಕಲಾಪ್ರದರ್ಶನ, ಚಲನಚಿತ್ರೋತ್ಸವ(Film Festival), ಪುಸ್ತಕ ಪ್ರದರ್ಶನ(Book Exhibition), ಕರಕುಶಲ ಪ್ರದರ್ಶನ, ಪ್ರಾತ್ಯಕ್ಷಿಕೆ, ಆಹಾರ ಮೇಳ ಸೇರಿ ಹಲವು ಕಾರ್ಯಕ್ರಮಗಳನ್ನು ರಂಗಾಯಣ ಆಯೋಜನೆ ಮಾಡಿಕೊಂಡಿದ್ದು, ಈ ಬಾರಿ ಬಹುರೂಪಿಯಲ್ಲಿ ವಿವಿಧ ರಾಜ್ಯ, ವಿವಿಧ ಭಾಷೆಗಳ ಒಟ್ಟು 35 ನಾಟಕಗಳ ಪ್ರದರ್ಶನಗೊಳ್ಳಲಿವೆ. 

KPAC Lalitha Passes Away : ಖ್ಯಾತ ಮಲಯಾಳಂ ನಟಿ ಕೆಪಿಎಸಿ ಲಲಿತಾ ಇನ್ನಿಲ್ಲ

ರಾಷ್ಟ್ರ ಪ್ರಖ್ಯಾತ ನಟಿ ಶಬಾನಾ ಆಜ್ಮಿ(Shabana Azmi), ನಾಸಿರುದ್ದೀನ್ ಶಾ, ಅಮೋಲ್ ಪಾಲೇಕರ್, ಶ್ರೀಲಂಕಾ(Srilanka)ದ ಪರಾಕ್ರಮ ನಿರಿಯಲ್ಲ, ಪ್ರಸನ್ನ, ಅನಂತ್ ನಾಗ್ ಸೇರಿ ಇತರ ಹಿರಿಯ ರಂಗ ಕಲಾವಿದರಿಂದ ಬಹುರೂಪಿ ಉದ್ಘಾಟನೆ ನಡೆಯಲಿದೆ. ಸದ್ಯ ಸಮಾರೋಪದ ಬಗ್ಗೆ ರಂಗಾಯಣ ನಿರ್ದೇಶಕರು ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
Read more