Mysuru: ಮಾರ್ಚ್‌ನಲ್ಲಿ ರಂಗಾಯಣದ ಬಹುರೂಪಿ ನಾಟಕೋತ್ಸವಕ್ಕೆ ವೇದಿಕೆ ಸಜ್ಜು

Mysuru: ಮಾರ್ಚ್‌ನಲ್ಲಿ ರಂಗಾಯಣದ ಬಹುರೂಪಿ ನಾಟಕೋತ್ಸವಕ್ಕೆ ವೇದಿಕೆ ಸಜ್ಜು

Published : Feb 23, 2022, 12:00 PM IST

ರಾಷ್ಟ್ರೀಯ ಮಾನ್ಯತೆ ಹೊಂದಿರುವ ರಂಗಾಯಣದ ಬಹುರೂಪಿ ನಾಟಕೋತ್ಸವಕ್ಕೆ ಮತ್ತೊಮ್ಮೆ ವೇದಿಕೆ ಸಿದ್ದವಾಗಿದೆ. ಕೊರೊನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ರಂಗ ರಸಮಯ ಕ್ಷಣ ಮತ್ತೆ ಬಂದಿದೆ. ಮುಂದಿನ ತಿಂಗಳು 10 ದಿನಗಳ ಕಾಲ ನಡೆಯುವ ರಾಷ್ಟ್ರೀಯ ನಾಟಕೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನ ರಂಗಾಯಣ ಸಜ್ಜಾಗುತ್ತಿದೆ.

ಒಂದೆಡೆ ಕೊರೊನಾ ಮೂರನೇ ಅಲೆಯ ಅಬ್ಬರ, ಮತ್ತೊಂದೆಡೆ ಅಥಿತಿಗಳ ಆಹ್ವಾನದ ವಿಚಾರದಲ್ಲಿ ಏರ್ಪಟ್ಟಿದ್ದ ವಿವಾದ. ಎರಡೂ ಕಾರಣಗಳಿಂದಾಗಿ ಮೈಸೂರಿನ ರಂಗಾಯಣ(Rangayana)ದ ಬಹುರೂಪಿ ರಂಗೋತ್ಸವ ಕಳೆದ ವರ್ಷ ಡಿಸೆಂಬರ್‌(December)ನಲ್ಲಿ ನಿಂತು ಹೋಗಿತ್ತು.‌ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರನ್ನು ಉತ್ಸವಕ್ಕೆ ಆಹ್ವಾನಿಸಿರುವುದರ ವಿರುದ್ಧ ಎಡಪಂಥೀಯ ಸದಸ್ಯರು ದನಿ ಎತ್ತಿದ್ದರು. ಇದರ ಜೊತೆಗೆ ಕೊರೊನಾ(Corona) ಅಬ್ಬರ ಹೆಚ್ಚಾಗಿ ಬಹುರೂಪಿ ನಾಟಕೋತ್ಸವ ಮುಂದೂಡಲ್ಪಟ್ಟಿತ್ತು.

 ಈಗ ಮತ್ತೊಮ್ಮೆ ಬಹುರೂಪಿಗೆ ಕಾಲ ಕೂಡಿ ಬಂದಿದ್ದು, ಮಾರ್ಚ್(March) 11 ರಿಂದ 10 ದಿನಗಳ ಕಾಲ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಜರುಗಲಿದೆ. ಈ ಬಾರಿ "ತಾಯಿ" ಎಂಬ ಶೀರ್ಷಿಕೆ ಅಡಿಯಲ್ಲಿ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ನಡೆಯಲಿದ್ದು, ತಾಯಿ ಬಗ್ಗೆ ವಿಸ್ತೃತ ಚರ್ಚೆಯನ್ನೊಳಗೊಂಡ ವಿಚಾರ ಸಂಕಿರಣ ಆಯೋಜನೆ ಮಾಡಲಾಗಿದೆ.

ಜಮೀನು, ಜಲ, ಜಾನುವಾರು, ಜಂಗಲ್, ಜನ ಎಂಬ ಪಂಚಸೂತ್ರದಲ್ಲಿ ತಾಯಿ(Mother) ಮತ್ತು ತಾಯ್ತನ ನೋಡುವ ಪ್ರಯತ್ನ ರಂಗೋತ್ಸವದಲ್ಲಿ ನಡೆಯಲಿದೆ. ವಿವಿಧ ರಾಜ್ಯ, ಜಿಲ್ಲೆಗಳ ಶ್ರೇಷ್ಠ ನಾಟಕಗಳ ಪ್ರದರ್ಶನ, ಜಾನಪದ ಕಲಾಪ್ರದರ್ಶನ, ಚಲನಚಿತ್ರೋತ್ಸವ(Film Festival), ಪುಸ್ತಕ ಪ್ರದರ್ಶನ(Book Exhibition), ಕರಕುಶಲ ಪ್ರದರ್ಶನ, ಪ್ರಾತ್ಯಕ್ಷಿಕೆ, ಆಹಾರ ಮೇಳ ಸೇರಿ ಹಲವು ಕಾರ್ಯಕ್ರಮಗಳನ್ನು ರಂಗಾಯಣ ಆಯೋಜನೆ ಮಾಡಿಕೊಂಡಿದ್ದು, ಈ ಬಾರಿ ಬಹುರೂಪಿಯಲ್ಲಿ ವಿವಿಧ ರಾಜ್ಯ, ವಿವಿಧ ಭಾಷೆಗಳ ಒಟ್ಟು 35 ನಾಟಕಗಳ ಪ್ರದರ್ಶನಗೊಳ್ಳಲಿವೆ. 

KPAC Lalitha Passes Away : ಖ್ಯಾತ ಮಲಯಾಳಂ ನಟಿ ಕೆಪಿಎಸಿ ಲಲಿತಾ ಇನ್ನಿಲ್ಲ

ರಾಷ್ಟ್ರ ಪ್ರಖ್ಯಾತ ನಟಿ ಶಬಾನಾ ಆಜ್ಮಿ(Shabana Azmi), ನಾಸಿರುದ್ದೀನ್ ಶಾ, ಅಮೋಲ್ ಪಾಲೇಕರ್, ಶ್ರೀಲಂಕಾ(Srilanka)ದ ಪರಾಕ್ರಮ ನಿರಿಯಲ್ಲ, ಪ್ರಸನ್ನ, ಅನಂತ್ ನಾಗ್ ಸೇರಿ ಇತರ ಹಿರಿಯ ರಂಗ ಕಲಾವಿದರಿಂದ ಬಹುರೂಪಿ ಉದ್ಘಾಟನೆ ನಡೆಯಲಿದೆ. ಸದ್ಯ ಸಮಾರೋಪದ ಬಗ್ಗೆ ರಂಗಾಯಣ ನಿರ್ದೇಶಕರು ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
Read more