'ವೇದ'ನ ಗೆಲುವು ಮತ್ತೆ ಒಂದಾದ ಶಿವಣ್ಣ-ಹರ್ಷ: ಮತ್ತೆ ಡೈರೆಕ್ಷನ್ ಮಾಡಲು ಹೇಳಿದ ಸೆಂಚುರಿ ಸ್ಟಾರ್

'ವೇದ'ನ ಗೆಲುವು ಮತ್ತೆ ಒಂದಾದ ಶಿವಣ್ಣ-ಹರ್ಷ: ಮತ್ತೆ ಡೈರೆಕ್ಷನ್ ಮಾಡಲು ಹೇಳಿದ ಸೆಂಚುರಿ ಸ್ಟಾರ್

Published : Jan 04, 2023, 11:35 AM IST

ಒಂದು ಸಿನಿಮಾ ಹಿಟ್ ಆದ್ರೆ ಅದೇ ನಿರ್ದೇಶಕನ ಜೊತೆ ಮತ್ತೊಂದು ಸಿನಿಮಾ ಮಾಡೋದಕ್ಕೆ ಹೀರೋಗಳು ಹೆಚ್ಚು ಮುನ್ನುಗ್ಗುತ್ತಾರೆ. ಇದೀಗ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಕೂಡ ಹಾಗೆ ಮಾಡಿದ್ದಾರೆ. ವೇದ ಸಿನಿಮಾದ ದೊಡ್ಡ ಗೆಲುವು ನಿರ್ದೇಶಕ ಎ. ಹರ್ಷಗೆ ಶಿವಣ್ಣನಿಗಾಗಿ ಮತ್ತೊಂದು ಸಿನಿಮಾ ಮಾಡೋ ಅವಕಾಶ ಸಿಕ್ಕಿದೆ.

ಒಂದು ಸಿನಿಮಾ ಹಿಟ್ ಆದ್ರೆ ಅದೇ ನಿರ್ದೇಶಕನ ಜೊತೆ ಮತ್ತೊಂದು ಸಿನಿಮಾ ಮಾಡೋದಕ್ಕೆ ಹೀರೋಗಳು ಹೆಚ್ಚು ಮುನ್ನುಗ್ಗುತ್ತಾರೆ. ಇದೀಗ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಕೂಡ ಹಾಗೆ ಮಾಡಿದ್ದಾರೆ. ವೇದ ಸಿನಿಮಾದ ದೊಡ್ಡ ಗೆಲುವು ನಿರ್ದೇಶಕ ಎ. ಹರ್ಷಗೆ ಶಿವಣ್ಣನಿಗಾಗಿ ಮತ್ತೊಂದು ಸಿನಿಮಾ ಮಾಡೋ ಅವಕಾಶ ಸಿಕ್ಕಿದೆ. ಈ ಬಗ್ಗೆ ಎಕ್ಸ್‌ಕ್ಲೂಸಿವ್ ಇಂಟ್ರೆಸ್ಟಿಂಗ್ ಕಹಾನಿ ಇಲ್ಲಿದೆ. ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಬೆಳ್ಳಿತೆರೆ ಮೇಲೆ ವೇದನ ಸಕ್ಸಸ್ಫುಲ್ ಜರ್ನಿಯನ್ನ ಕಂಟಿನ್ಯೂ ಮಾಡಿದ್ದಾರೆ. ವೇದನ ಎಮೋಷನಲ್ ಅಬ್ಬರಕ್ಕೆ ಪ್ರೇಕ್ಷಕ ಗಣ ಮನಸೋ ಇಚ್ಚೆ ಮನಸೋತು ಚಿತ್ರಮಂದಿರಗಳು ಹೌಸ್ ಫುಲ್ ಆಗುವಂತೆ ಮಾಡುತ್ತಿದ್ದಾರೆ. 

ಈ ಸಕ್ಸಸ್ ಈಗ ಶಿವಣ್ಣ ಮತ್ತು ಹರ್ಷನ ಕಾಂಬಿನೇಷನ್ನಲ್ಲಿ ಮತ್ತೊಂದು ಸಿನಿಮಾ ಮಾಡೋಕೆ ಹರದಾರಿ ಮಾಡಿಕೊಟ್ಟಿದೆ. ನಿರ್ದೇಶಕ ಎ.ಹರ್ಷ ಸಿನಿಮಾ ಮೇಕಿಂಗ್ ಸ್ಟೈಲ್ ಶಿವಣ್ಣನ್ನ ಭಜರಂಗಿ ಸಿನಿಮಾದಲ್ಲೇ ಇಂಪ್ರೆಸ್ ಮಾಡಿತ್ತು. ಹರ್ಷನ ಡೈರೆಕ್ಷನ್ ಆಫ್ ಸ್ಟೈಲ್ಅನ್ನ ಕೊಂಡಾಡಿದ್ದ ಸೆಂಚುರಿ ಸ್ಟಾರ್ ವಜ್ರಕಾಯ ಸಿನಿಮಾದಲ್ಲಿ ಮತ್ತೆ ನಿರ್ದೇಶನಕ್ಕೆ ಅವಕಾಶ ಕೊಟ್ರು. ಆದ್ರೆ ವಜ್ರಕಾಯ ಹೇಳಿಕೊಳ್ಳುವಷ್ಟು ಗೆಲುವು ತಂದುಕೊಡ್ಲಿಲ್ಲ. ಆದರೆ ಹರ್ಷ ಶಿವಣ್ಣನ ಜೊತೆ ಭಜರಂಗಿ-2 ಮಾಡಿ ಮತ್ತೆ ಟ್ರ್ಯಾಕ್‌ಗೆ ಮರಳಿದ್ರು. ಅಷ್ಟರಲ್ಲೇ ಅಪ್ಪು ನಿಧನ ಹೊಂದಿದ್ದು ಭಜರಂಗಿ-2 ಸಿನಿಮಾ ಕಣ್ಮರೆಯಾಗುವಂತೆ ಆಯ್ತು. 

ಒಂದು ಕಡೆ ಅಪ್ಪು ಇಲ್ಲವಾದ ಮೇಲೆ ಶಿವಣ್ಣ ಅಪ್ಪು ಅನುಪಸ್ಥಿತಿಯಲ್ಲೇ ತಮ್ಮ ಕುಟುಂಬದ ಗೀತಾ ಪಿಕ್ಚರ್ಸ್ ಬ್ಯಾನರ್ ಶುರುಮಾಡಿದ್ರು. ಆ ಬ್ಯಾನರ್‌ನ ಮೊದಲ ಸಿನಿಮಾ ಯಾರು ಡೈರೆಕ್ಷನ್ ಮಾಡೋದು ಅಂತ ಹುಡುಕುವಾಗ್ಲೆ ಶಿವಣ್ಣನಿಗಾಗಿ ನಿರ್ದೇಶಕ ವೇದ ಅನ್ನೋ ಅದ್ಧೂರಿ ಎಮೋಷಲ್ ಸ್ಟೋರಿಯನ್ನ ರೆಡಿ ಮಾಡಿದ್ರು. ಕೊನೆಗೆ ಇದೇ ಬೆಸ್ಟ್ ಅಂತ ಶಿವಣ್ಣ ವೇದ ಸಿನಿಮಾ ಮಾಡಿ ಗೆದ್ದಿದ್ದಾರೆ. ಈ ಗೆಲುವು ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್‌ಗೆ ಖುಷಿ ಕೊಟ್ಟಿದ್ದು ಈಗ ಮತ್ತೆ ಅದೇ ಗೀತಾ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಎ. ಹರ್ಷ ನಿರ್ದೇಶನದಲ್ಲಿ ಹೊಸ ಸಿನಿಮಾ ಮಾಡೋ ಬಗ್ಗೆ ಮಾತುಕತೆ ನಡೆದಿದೆ. ಅಲ್ಲಿ ಆ ಸಿನಿಮಾ ಏನಾದ್ರು ಶುರುವಾದ್ರೆ ಶಿವರಾಜ್ ಕುಮಾರ್ ಹಾಗು ನಿರ್ದೇಶಕ ಎ. ಹರ್ಷ ಐದನೇ ಬಾರಿ ಒಂದಾದ ಹಾಗಾಗುತ್ತೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
06:51BBK 12: ಎಲ್ಲಿಗೋ ವೈರಿಂಗ್​, ಇನ್ನೆಲ್ಲೋ ಲೈಟಿಂಗ್! ಗಿಲ್ಲಿ-ಕಾವ್ಯಾ ಸ್ನೇಹದಲ್ಲಿ ಅನಿರೀಕ್ಷಿತ ತಿರುವು!
21:30BBK 12: ಮಾಳು ಸ್ಟ್ರೈಟ್ ಹಿಟ್! ಉತ್ತರ ಕರ್ನಾಟಕ ಹೈದನ ಮೇಲೆ ಗರಂ ಆದ ಗಿಲ್ಲಿ ನಟ ಫ್ಯಾನ್ಸ್
02:52ಈಗ ಮತ್ತೊಂದು ಸರ್ಪ್ರೈಸ್‌ ಕೊಟ್ಟ ಶಿವರಾಜ್‌ಕುಮಾರ್‌, ಉಪೇಂದ್ರ, ಅರ್ಜುನ್‌ ಜನ್ಯ 45 Movie!
05:25ಜನವರಿ 8ಕ್ಕೆ ಕಾದಿದೆಯಾ Toxic Movie​​ ಸೂಪರ್​ ಸರ್​​ಪ್ರೈಸ್..? ಇನ್ಮುಂದೆ ನಡೆಯೋದು ಏನಿದ್ರೂ ಯಶ್ ಆಟ..!
04:41ನಿನಗಿದು ಬೇಕಿತ್ತಾ ಗಿಲ್ಲಿ..? ಆಟದಲ್ಲಿ ಗಿಲ್ಲಿ ನಟನ ಕಳ್ಳಾಟ..! ಗಿಲ್ಲಿಗೆ ವಿಲನ್​ ಆಗುತ್ತಿದೆಯಾ ಅವರ ಕಾಮಿಡಿ?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
07:10ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!
Read more