ಯೋಗರಾಜ್‌ಭಟ್ಟರ ಸಾರಥ್ಯದಲ್ಲಿ ಮಲ್ಟಿಸ್ಟಾರರ್ ಚಿತ್ರ: ಮೊದಲ ಬಾರಿಗೆ ಒಂದಾದ ಪ್ರಭುದೇವ-ಶಿವಣ್ಣ

ಯೋಗರಾಜ್‌ಭಟ್ಟರ ಸಾರಥ್ಯದಲ್ಲಿ ಮಲ್ಟಿಸ್ಟಾರರ್ ಚಿತ್ರ: ಮೊದಲ ಬಾರಿಗೆ ಒಂದಾದ ಪ್ರಭುದೇವ-ಶಿವಣ್ಣ

Published : Aug 26, 2023, 12:56 PM IST

ಕರುನಾಡ ಚಕ್ರವರ್ತಿ ಶಿವರಾಜ್​​​ಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಖ್ಯಾತಿಯ ಪ್ರಭುದೇವ ಅಭಿನಯದ ಮುಂದಿನ ಬಹುನಿರೀಕ್ಷಿತ ಸಿನಿಮಾ ಕರಟಕ ದಮನಕ. ಶೀರ್ಷಿಕೆಯಿಂದಲೇ ಸೌತ್ ಸಿನಿಮಾ ರಂಗದಲ್ಲಿ ಗಮನ ಸೆಳೆಯುತ್ತಿರುವ ಈ ಚಿತ್ರವನ್ನು ವಿಕಟಕವಿ ಯೋಗರಾಜ್ ಭಟ್ ನಿರ್ದೇಶಿಸುತ್ತಿದ್ದಾರೆ. 

ಕರುನಾಡ ಚಕ್ರವರ್ತಿ ಶಿವರಾಜ್​​​ಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಖ್ಯಾತಿಯ ಪ್ರಭುದೇವ ಅಭಿನಯದ ಮುಂದಿನ ಬಹುನಿರೀಕ್ಷಿತ ಸಿನಿಮಾ ಕರಟಕ ದಮನಕ. ಶೀರ್ಷಿಕೆಯಿಂದಲೇ ಸೌತ್ ಸಿನಿಮಾ ರಂಗದಲ್ಲಿ ಗಮನ ಸೆಳೆಯುತ್ತಿರುವ ಈ ಚಿತ್ರವನ್ನು ವಿಕಟಕವಿ ಯೋಗರಾಜ್ ಭಟ್ ನಿರ್ದೇಶಿಸುತ್ತಿದ್ದಾರೆ. ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾ ಕುರಿತು ಪ್ರೇಕ್ಷಕರಲ್ಲಿ ಕುತೂಹಲ ಮೂಡಿದೆ. ಇಂದಿಗೆ ಈ ಚಿತ್ರ ಪ್ರಾರಂಭವಾಗಿ ಒಂದು ವರ್ಷಗಳಾಗಿದೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, ಕರಟಕ ದಮನಕ ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. 

ಸಾಮಾನ್ಯವಾಗಿ ಇಬ್ಬರನ್ನು ಹೆಚ್ಚು ಸಲ ಒಟ್ಟಾಗಿ ನೋಡಿದಾಗ ಕರಟಕ ದಮನಕ ಎನ್ನುವುದು ಉಂಟು. ನಮ್ಮ ಚಿತ್ರದಲ್ಲಿ ಈ ಪಾತ್ರಗಳನ್ನು ಶಿವಣ್ಣ ಹಾಗೂ ಪ್ರಭುದೇವ ನಿರ್ವಹಿಸಿದ್ದಾರೆ. ಅವರಿಬ್ಬರ ಎನರ್ಜಿ ನೋಡಿದರೆ ನಿಜಕ್ಕೂ ಖುಷಿಯಾಗುತ್ತದೆ. ರಾಕ್ ಲೈನ್ ವೆಂಕಟೇಶ್ ಅವರು ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ವಿ. ಹರಿಕೃಷ್ಣ ಸಂಗೀತ ಸಂಯೋಜನೆಯ ಏಳು ಹಾಡುಗಳು ನಮ್ಮ ಚಿತ್ರದಲ್ಲಿವೆ. ನಾನು ಹಾಗೂ ರಾಕ್ ಲೈನ್ ವೆಂಕಟೇಶ್ ಸಹ ಚಿತ್ರದಲ್ಲಿ ನಟಿಸಿದ್ದೇವೆ. ಶೇ. 90ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ. ಸಾಂಗ್​ ಶೂಟಿಂಗ್​​ ಮಾತ್ರ ಬಾಕಿ ಇದೆ' ಎಂದು ಮಾಹಿತಿ ನೀಡಿದರು.

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more