ಸ್ಪಂದನಾ ಅಂತಿಮ ದರ್ಶನ ಪಡೆದ ಸ್ಪೀಕರ್ ಯು.ಟಿ.ಖಾದರ್

Aug 9, 2023, 10:21 AM IST

ಬೆಂಗಳೂರು (ಆ.09): ಸ್ಯಾಂಡಲ್​ವುಡ್​ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ  ಅವರ ಮೃತದೇಹದ ಅಂತಿಮ ದರ್ಶನ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಅವರ ಬೆಂಗಳೂರಿನ ಮಲ್ಲೇಶ್ವರದ ಮನೆಯಲ್ಲಿ ಸಾಗುತ್ತಿದೆ. ಕರ್ನಾಟಕ ಸರ್ಕಾರದ ಸ್ಪೀಕರ್ ಯು.ಟಿ. ಖಾದರ್ ಅಂತಿಮ ದರ್ಶನವನ್ನು ಪಡೆದಿದ್ದಾರೆ. ನನ್ನ ಆತ್ಮೀಯ ಸ್ನೇಹಿತರ ಸಹೋದರಿ ಸ್ಪಂದನಾ ಅವರ ಅಕಾಲಿಕ ನಿಧನ ಎಲ್ಲರಿಗೂ ನೋವನ್ನುಂಟು ಮಾಡಿದೆ. ಅತ್ಯಂತ ಸಣ್ಣ ವಯಸ್ಸಿಗೆ ಈ ರೀತಿಯ ಅಕಾಲಿಕವಾದ ಮರಣ ಎಲ್ಲರನ್ನು ದಿಗ್ಭ್ರಮೆಗೊಳಿಸಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದರು.