ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಅನಂತ್‌ ನಾಗ್: ಚಿತ್ರರಂಗದ ನೆನಪಿನ ಬುತ್ತಿ ಬಿಚ್ಚಿಟ್ಟ ಖ್ಯಾತ ನಟ

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಅನಂತ್‌ ನಾಗ್: ಚಿತ್ರರಂಗದ ನೆನಪಿನ ಬುತ್ತಿ ಬಿಚ್ಚಿಟ್ಟ ಖ್ಯಾತ ನಟ

Published : Aug 14, 2023, 11:21 PM IST

ಚಿತ್ರರಂಗದಲ್ಲಿ ಐದು ದಶಕಗಳನ್ನು ಕಳೆದ ಕನ್ನಡದ ಮೇರು ನಟ ಅನಂತ್‌ನಾಗ್‌ರಿಗೆ ಕನ್ನಡದ ಪ್ರತಿಷ್ಠಿತ ಸಿನಿಮಾ ಪ್ರಚಾರ ಸಂಸ್ಥೆ ರಾಘವೇಂದ್ರ ಚಿತ್ರವಾಣಿ ಗೌರವ ಸಮರ್ಪಿಸಿದೆ. ಅನಂತ್‌ನಾಗ್‌ ಮತ್ತು ಗಾಯತ್ರಿ ಅನಂತ್‌ನಾಗ್‌ ದಂಪತಿಗೆ ಸನ್ಮಾನ ನಡೆಸುವ ಮೂಲಕ ಅಪರೂಪದ ದಂಪತಿಗೆ ಕೃತಜ್ಞತೆ ಸಲ್ಲಿಸಿದೆ. 

ಬೆಂಗಳೂರು (ಆ.14): ಚಿತ್ರರಂಗದಲ್ಲಿ ಐದು ದಶಕಗಳನ್ನು ಕಳೆದ ಕನ್ನಡದ ಮೇರು ನಟ ಅನಂತ್‌ನಾಗ್‌ರಿಗೆ ಕನ್ನಡದ ಪ್ರತಿಷ್ಠಿತ ಸಿನಿಮಾ ಪ್ರಚಾರ ಸಂಸ್ಥೆ ರಾಘವೇಂದ್ರ ಚಿತ್ರವಾಣಿ ಗೌರವ ಸಮರ್ಪಿಸಿದೆ. ಅನಂತ್‌ನಾಗ್‌ ಮತ್ತು ಗಾಯತ್ರಿ ಅನಂತ್‌ನಾಗ್‌ ದಂಪತಿಗೆ ಸನ್ಮಾನ ನಡೆಸುವ ಮೂಲಕ ಅಪರೂಪದ ದಂಪತಿಗೆ ಕೃತಜ್ಞತೆ ಸಲ್ಲಿಸಿದೆ. ಭಾವಪೂರ್ಣವಾಗಿ ನಡೆದ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಖ್ಯಾತ ನಟ ರಮೇಶ್‌ ಅರವಿಂದ್‌ ಅವರು ಅನಂತ್‌ನಾಗ್‌ ಅವರ ಸಂದರ್ಶನ ನಡೆಸಿದರು. ವಿಭಿನ್ನ ಪ್ರಶ್ನೆಗಳ ಮೂಲಕ ಅನಂತ್‌ನಾಗ್‌ರ ಆಂತರ್ಯವನ್ನು ಕಟ್ಟಿಕೊಡುವ ಪ್ರಯತ್ನ ಮಾಡಿದರು. 

ಅನಂತ್‌ನಾಗ್‌ರನ್ನು ಹಾಡಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶಿಷ್ಟಮೆರುಗನ್ನು ತಂದುಕೊಟ್ಟರು. ಸಂದರ್ಶನದಲ್ಲಿ ಮಾತನಾಡುತ್ತಾ ಅನಂತ್‌ನಾಗ್‌, ಅಧ್ಯಾತ್ಮಿಕ ವಾತಾವರಣದಲ್ಲಿ ಬಾಲ್ಯವನ್ನು ಕಳೆದೆ. ಅಲ್ಲಿಯೇ ಅಪರೂಪದ ವ್ಯಕ್ತಿಗಳನ್ನು ಇಮಿಟೇಟ್‌ ಮಾಡುತ್ತಿದ್ದೆ, ಅವರ ಮಿಮಿಕ್ರಿ ಮಾಡುತ್ತಿದ್ದೆ. ಮುಂದೆ ಮುಂಬೈಯಲ್ಲಿ ನಿಜ ಜೀವನಕ್ಕೆ ಎದುರುಗೊಂಡೆ. ಕಾಲೇಜಿನಲ್ಲಿ ಸರಿಯಾಗಿ ಓದದೆ ಟೀಕೆಗೆ ಒಳಗಾದೆ. ಆಗ ನನಗೆ ನಾಟಕಗಳು, ಪಾತ್ರಗಳು ಆನಂದಕೊಟ್ಟವು. ಅಲ್ಲಿಂದ ಇಲ್ಲಿಯವರೆಗೆ 50 ವರ್ಷ ಸಂದಿದೆ. ನಾನು ಎಲ್ಲವನ್ನೂ ಮಾಡಿದೆ ಎಂದರೆ ಅಹಂಕಾರ ಆಗುತ್ತದೆ. 

ಯಾವುದೇ ಒಂದು ಶಕ್ತಿ ನನ್ನಿಂದ ಇದನ್ನೆಲ್ಲಾ ಮಾಡಿಸಿತು ಎಂದು ಹೇಳುವುದೇ ಸರಿ. ನನ್ನ ಈ ಪ್ರಯಾಣದಲ್ಲಿ ಚಿತ್ರರಂಗದ ಮಂದಿ ಮತ್ತು ಪತ್ರಕರ್ತರೇ ನನ್ನ ಸ್ನೇಹಿತರು, ಸರಿದಾರಿ ತೋರಿ ಮುನ್ನಡೆಸಿದವರು ಎಂದರು. ರಾಘವೇಂದ್ರ ಚಿತ್ರವಾಣಿಯ ಕುರಿತು ಮಾತನಾಡಿದ ಅವರು, ನನ್ನ ಮತ್ತು ರಾಘವೇಂದ್ರ ಚಿತ್ರವಾಣಿ ಸಂಬಂಧ ಸುದೀರ್ಘವಾದದ್ದು. ಡಿವಿ ಸುಧೀಂದ್ರ ನನ್ನ ಈ ಪ್ರಯಾಣದ ಆರಂಭ ಕಾಲದಲ್ಲಿ ಇದ್ದರು. ಅವರ ನಿರ್ಮಾಣದ ಸಿನಿಮಾದಲ್ಲಿಯೂ ನಟಿಸಿದ್ದೇನೆ ಎಂದು ಹೇಳಿದರು. ಸಂಸ್ಥೆಯ ಮುಖ್ಯಸ್ಥ ಸುಧೀಂದ್ರ ವೆಂಕಟೇಶ್‌, ಸುನಿಲ್‌ ಸುಧೀಂದ್ರ, ಡಿ.ಜಿ. ವಾಸುದೇವ ಮತ್ತು ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
Read more