ಉರಿಗೌಡ - ನಂಜೇಗೌಡ ಸಿನಿಮಾ: ಮುನಿರತ್ನಗೆ ಆದಿಚುಂಚನಗಿರಿ ಶ್ರೀ ಆಹ್ವಾನ

ಉರಿಗೌಡ - ನಂಜೇಗೌಡ ಸಿನಿಮಾ: ಮುನಿರತ್ನಗೆ ಆದಿಚುಂಚನಗಿರಿ ಶ್ರೀ ಆಹ್ವಾನ

Published : Mar 19, 2023, 12:58 PM ISTUpdated : Mar 19, 2023, 01:02 PM IST

ಉರಿಗೌಡ ಮತ್ತು ನಂಜೇಗೌಡರ ಕುರಿತ ಸಿನಿಮಾವನ್ನು ಮಾಡಲು ಮುಂದಾಗಿರುವ ಮುನಿರತ್ನ ಅವರನ್ನು ಆದಿಚುಂಚನಗಿರಿ ನಿರ್ಮಲಾನಂದರನಾಥ ಸ್ವಾಮೀಜಿಗಳು ತಮ್ಮನ್ನು ಭೇಟಿಯಾಗುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರು (ಮಾ.19): ರಾಜ್ಯದಲ್ಲಿ ಟಿಪ್ಪುವನ್ನು ಕೊಂದಿದ್ದಾರೆಂಬ ಉರಿಗೌಡ ಮತ್ತು ನಂಜೇಗೌಡರ ಕುರಿತ ಸಿನಿಮಾವನ್ನು ಮಾಡಲು ಮುನಿರತ್ನ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ನಿರ್ಮಲಾನಂದರನಾಥ ಸ್ವಾಮೀಜಿಗಳು ತಮ್ಮನ್ನು ಭೇಟಿಯಾಗುವಂತೆ ಸೂಚನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುನಿರತ್ನ ಅವರು, ಕಾಲ್ಪನಿಕ ಕಥೆಗಳನ್ನ ಯಾರು ಹುಟ್ಟು ಹಾಕೋದಕ್ಕೆ ಆಗಲ್ಲ. 1940-50 ನೇ ಇಸವಿಗೂ ಹಿಂದೆಯಿಂದಲೂ ಉರಿಗೌಡ್ರು, ನಂಜೇಗೌಡರ ಬಗ್ಗೆ ಲಾವಣಿ ಹಾಡುಗಳಿವೆ. ಲಾವಣಿ ಹಾಡುಗಳ ಆಧಾರದಲ್ಲಿ ಉರಿಗೌಡ ನಂಜೇಗೌಡರು ಇದದ್ದು ಸತ್ಯ. ಮೈಸೂರು ಸಂಸ್ಥಾನದ ಪರವಾಗಿ ಕೆಲಸ ಮಾಡಿದ್ದು ನಿಜ. ಅದಕ್ಕೆ ಬೇಕಾದ ಸಾಕ್ಷಿಗಳು ಸಾಕಷ್ಟಿವೆ. ಈ ಕುರಿತು ಅಶ್ವಥ್ ನಾರಾಯಣ ಅವರು ಸಂಶೋಧನೆ ಮಾಡ್ತಿದ್ದಾರೆ ಎಂದು ಹೇಳಿದರು. ಇನ್ನು ಸಿನಿಮಾ ಕುರಿತಂತೆ ಆದಿಚುಂಚನಗಿರಿ ಶ್ರೀಗಳು ತಮ್ಮನ್ನು ಭೇಟಿಯಾಗುವಂತೆ ಹೇಳಿದ್ದಾರೆ ಎಂದು ತಿಳಿಸಿದರು.

ಬೆಳ್ಳಿ ತೆರೆಮೇಲೆ ಬರಲಿದ್ದಾರೆ ಉರಿಗೌಡ ನಂಜೇಗೌಡ: ಒಕ್ಕಲಿಗ ವೀರರ ಬಗ್ಗೆ ಮುನಿರತ್ನ ಸಿನಿಮಾ ನಿರ್ಮಾಣ

ಕುಮಾರಸ್ವಾಮಿಯಿಂದಲೇ ಸಿನಿಮಾ ಹುಟ್ಟಿಕೊಂಡಿದೆ: ಕುಮಾರಸ್ವಾಮಿಯ ಟೀಕೆ ಮಾಡುವಾಗ, ಮುನಿರತ್ನನಿಗೆ ಸಿನಿಮಾ ಮಾಡಲು ಅಶ್ವಥನಾರಯಣ್ ಮತ್ತು ಅಶೋಕ್ ಸಿನಿಮಾ ಹೇಳಿದ್ದಾರೆ ಎಂದಾಗಲೇ ನನಗೆ ಸಿನಿಮಾ ಆಲೋಚನೆ ಬಂದಿದೆ. ಕುಮಾರಸ್ವಾಮಿ ಅವರಿಂದಲೇ ಈ ಸಿನಿಮಾ ಹುಟ್ಟಿಕೊಂಡಿದೆ. ರಾಜಕಾರಣಿಯಾಗಿ ಸಿನಿಮಾ ಮಾಡ್ತೀನಿ ಅಂದ್ರೆ ದುಡ್ಡಿಗೋ, ಓಟಿಗೋ ಎನ್ನಬಹುದು. ನಾನು 25 ವರ್ಷದಿಂದ ಸಿನಿಮಾ ಮಾಡ್ತಿದ್ದೇನೆ. ನನ್ನ ಕೊನೆ ಸಿನಿಮಾ ಕುರುಕ್ಷೇತ್ರ, ಈ ಸಿನಿಮಾ ಮಹಾಭಾರತಕ್ಕೆ ಸಂಭಂಧಪಟ್ಟಿದ್ದು ಆಗಿತ್ತು. ಇನ್ನು ನನ್ನ ಪೋಸ್ಟರ್‌ನಲ್ಲಿ ಉರಿಗೌಡ ಮತ್ತು ನಂಜೇಗೌಡರ ಪೋಟೋಗಳು ಇವೆ. ಆದರೆ, ಅವುಗಳನ್ನು ಯಾರಿಗೂ ಹೋಲಿಕೆ ಮಾಡಬಾರುದು ಎಂದು ಮನವಿ ಮಾಡಿದರು. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
05:19ದೊಡ್ಮನೆಯಲ್ಲಿ ಹೊಡಿ ಮಗ ಹೊಡಿ ಮಗ: ರಕ್ಷಿತಾ ಶೆಟ್ಟಿ ಮೇಲೆ ಕೈ ಎತ್ತಿದ ರಾಶಿಕಾ ಶೆಟ್ಟಿ
Read more