ಉರಿಗೌಡ - ನಂಜೇಗೌಡ ಸಿನಿಮಾ: ಮುನಿರತ್ನಗೆ ಆದಿಚುಂಚನಗಿರಿ ಶ್ರೀ ಆಹ್ವಾನ

ಉರಿಗೌಡ - ನಂಜೇಗೌಡ ಸಿನಿಮಾ: ಮುನಿರತ್ನಗೆ ಆದಿಚುಂಚನಗಿರಿ ಶ್ರೀ ಆಹ್ವಾನ

Published : Mar 19, 2023, 12:58 PM ISTUpdated : Mar 19, 2023, 01:02 PM IST

ಉರಿಗೌಡ ಮತ್ತು ನಂಜೇಗೌಡರ ಕುರಿತ ಸಿನಿಮಾವನ್ನು ಮಾಡಲು ಮುಂದಾಗಿರುವ ಮುನಿರತ್ನ ಅವರನ್ನು ಆದಿಚುಂಚನಗಿರಿ ನಿರ್ಮಲಾನಂದರನಾಥ ಸ್ವಾಮೀಜಿಗಳು ತಮ್ಮನ್ನು ಭೇಟಿಯಾಗುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರು (ಮಾ.19): ರಾಜ್ಯದಲ್ಲಿ ಟಿಪ್ಪುವನ್ನು ಕೊಂದಿದ್ದಾರೆಂಬ ಉರಿಗೌಡ ಮತ್ತು ನಂಜೇಗೌಡರ ಕುರಿತ ಸಿನಿಮಾವನ್ನು ಮಾಡಲು ಮುನಿರತ್ನ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ನಿರ್ಮಲಾನಂದರನಾಥ ಸ್ವಾಮೀಜಿಗಳು ತಮ್ಮನ್ನು ಭೇಟಿಯಾಗುವಂತೆ ಸೂಚನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುನಿರತ್ನ ಅವರು, ಕಾಲ್ಪನಿಕ ಕಥೆಗಳನ್ನ ಯಾರು ಹುಟ್ಟು ಹಾಕೋದಕ್ಕೆ ಆಗಲ್ಲ. 1940-50 ನೇ ಇಸವಿಗೂ ಹಿಂದೆಯಿಂದಲೂ ಉರಿಗೌಡ್ರು, ನಂಜೇಗೌಡರ ಬಗ್ಗೆ ಲಾವಣಿ ಹಾಡುಗಳಿವೆ. ಲಾವಣಿ ಹಾಡುಗಳ ಆಧಾರದಲ್ಲಿ ಉರಿಗೌಡ ನಂಜೇಗೌಡರು ಇದದ್ದು ಸತ್ಯ. ಮೈಸೂರು ಸಂಸ್ಥಾನದ ಪರವಾಗಿ ಕೆಲಸ ಮಾಡಿದ್ದು ನಿಜ. ಅದಕ್ಕೆ ಬೇಕಾದ ಸಾಕ್ಷಿಗಳು ಸಾಕಷ್ಟಿವೆ. ಈ ಕುರಿತು ಅಶ್ವಥ್ ನಾರಾಯಣ ಅವರು ಸಂಶೋಧನೆ ಮಾಡ್ತಿದ್ದಾರೆ ಎಂದು ಹೇಳಿದರು. ಇನ್ನು ಸಿನಿಮಾ ಕುರಿತಂತೆ ಆದಿಚುಂಚನಗಿರಿ ಶ್ರೀಗಳು ತಮ್ಮನ್ನು ಭೇಟಿಯಾಗುವಂತೆ ಹೇಳಿದ್ದಾರೆ ಎಂದು ತಿಳಿಸಿದರು.

ಬೆಳ್ಳಿ ತೆರೆಮೇಲೆ ಬರಲಿದ್ದಾರೆ ಉರಿಗೌಡ ನಂಜೇಗೌಡ: ಒಕ್ಕಲಿಗ ವೀರರ ಬಗ್ಗೆ ಮುನಿರತ್ನ ಸಿನಿಮಾ ನಿರ್ಮಾಣ

ಕುಮಾರಸ್ವಾಮಿಯಿಂದಲೇ ಸಿನಿಮಾ ಹುಟ್ಟಿಕೊಂಡಿದೆ: ಕುಮಾರಸ್ವಾಮಿಯ ಟೀಕೆ ಮಾಡುವಾಗ, ಮುನಿರತ್ನನಿಗೆ ಸಿನಿಮಾ ಮಾಡಲು ಅಶ್ವಥನಾರಯಣ್ ಮತ್ತು ಅಶೋಕ್ ಸಿನಿಮಾ ಹೇಳಿದ್ದಾರೆ ಎಂದಾಗಲೇ ನನಗೆ ಸಿನಿಮಾ ಆಲೋಚನೆ ಬಂದಿದೆ. ಕುಮಾರಸ್ವಾಮಿ ಅವರಿಂದಲೇ ಈ ಸಿನಿಮಾ ಹುಟ್ಟಿಕೊಂಡಿದೆ. ರಾಜಕಾರಣಿಯಾಗಿ ಸಿನಿಮಾ ಮಾಡ್ತೀನಿ ಅಂದ್ರೆ ದುಡ್ಡಿಗೋ, ಓಟಿಗೋ ಎನ್ನಬಹುದು. ನಾನು 25 ವರ್ಷದಿಂದ ಸಿನಿಮಾ ಮಾಡ್ತಿದ್ದೇನೆ. ನನ್ನ ಕೊನೆ ಸಿನಿಮಾ ಕುರುಕ್ಷೇತ್ರ, ಈ ಸಿನಿಮಾ ಮಹಾಭಾರತಕ್ಕೆ ಸಂಭಂಧಪಟ್ಟಿದ್ದು ಆಗಿತ್ತು. ಇನ್ನು ನನ್ನ ಪೋಸ್ಟರ್‌ನಲ್ಲಿ ಉರಿಗೌಡ ಮತ್ತು ನಂಜೇಗೌಡರ ಪೋಟೋಗಳು ಇವೆ. ಆದರೆ, ಅವುಗಳನ್ನು ಯಾರಿಗೂ ಹೋಲಿಕೆ ಮಾಡಬಾರುದು ಎಂದು ಮನವಿ ಮಾಡಿದರು. 

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
Read more