ಉರಿಗೌಡ - ನಂಜೇಗೌಡ ಸಿನಿಮಾ: ಮುನಿರತ್ನಗೆ ಆದಿಚುಂಚನಗಿರಿ ಶ್ರೀ ಆಹ್ವಾನ

ಉರಿಗೌಡ - ನಂಜೇಗೌಡ ಸಿನಿಮಾ: ಮುನಿರತ್ನಗೆ ಆದಿಚುಂಚನಗಿರಿ ಶ್ರೀ ಆಹ್ವಾನ

Published : Mar 19, 2023, 12:58 PM ISTUpdated : Mar 19, 2023, 01:02 PM IST

ಉರಿಗೌಡ ಮತ್ತು ನಂಜೇಗೌಡರ ಕುರಿತ ಸಿನಿಮಾವನ್ನು ಮಾಡಲು ಮುಂದಾಗಿರುವ ಮುನಿರತ್ನ ಅವರನ್ನು ಆದಿಚುಂಚನಗಿರಿ ನಿರ್ಮಲಾನಂದರನಾಥ ಸ್ವಾಮೀಜಿಗಳು ತಮ್ಮನ್ನು ಭೇಟಿಯಾಗುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರು (ಮಾ.19): ರಾಜ್ಯದಲ್ಲಿ ಟಿಪ್ಪುವನ್ನು ಕೊಂದಿದ್ದಾರೆಂಬ ಉರಿಗೌಡ ಮತ್ತು ನಂಜೇಗೌಡರ ಕುರಿತ ಸಿನಿಮಾವನ್ನು ಮಾಡಲು ಮುನಿರತ್ನ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ನಿರ್ಮಲಾನಂದರನಾಥ ಸ್ವಾಮೀಜಿಗಳು ತಮ್ಮನ್ನು ಭೇಟಿಯಾಗುವಂತೆ ಸೂಚನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುನಿರತ್ನ ಅವರು, ಕಾಲ್ಪನಿಕ ಕಥೆಗಳನ್ನ ಯಾರು ಹುಟ್ಟು ಹಾಕೋದಕ್ಕೆ ಆಗಲ್ಲ. 1940-50 ನೇ ಇಸವಿಗೂ ಹಿಂದೆಯಿಂದಲೂ ಉರಿಗೌಡ್ರು, ನಂಜೇಗೌಡರ ಬಗ್ಗೆ ಲಾವಣಿ ಹಾಡುಗಳಿವೆ. ಲಾವಣಿ ಹಾಡುಗಳ ಆಧಾರದಲ್ಲಿ ಉರಿಗೌಡ ನಂಜೇಗೌಡರು ಇದದ್ದು ಸತ್ಯ. ಮೈಸೂರು ಸಂಸ್ಥಾನದ ಪರವಾಗಿ ಕೆಲಸ ಮಾಡಿದ್ದು ನಿಜ. ಅದಕ್ಕೆ ಬೇಕಾದ ಸಾಕ್ಷಿಗಳು ಸಾಕಷ್ಟಿವೆ. ಈ ಕುರಿತು ಅಶ್ವಥ್ ನಾರಾಯಣ ಅವರು ಸಂಶೋಧನೆ ಮಾಡ್ತಿದ್ದಾರೆ ಎಂದು ಹೇಳಿದರು. ಇನ್ನು ಸಿನಿಮಾ ಕುರಿತಂತೆ ಆದಿಚುಂಚನಗಿರಿ ಶ್ರೀಗಳು ತಮ್ಮನ್ನು ಭೇಟಿಯಾಗುವಂತೆ ಹೇಳಿದ್ದಾರೆ ಎಂದು ತಿಳಿಸಿದರು.

ಬೆಳ್ಳಿ ತೆರೆಮೇಲೆ ಬರಲಿದ್ದಾರೆ ಉರಿಗೌಡ ನಂಜೇಗೌಡ: ಒಕ್ಕಲಿಗ ವೀರರ ಬಗ್ಗೆ ಮುನಿರತ್ನ ಸಿನಿಮಾ ನಿರ್ಮಾಣ

ಕುಮಾರಸ್ವಾಮಿಯಿಂದಲೇ ಸಿನಿಮಾ ಹುಟ್ಟಿಕೊಂಡಿದೆ: ಕುಮಾರಸ್ವಾಮಿಯ ಟೀಕೆ ಮಾಡುವಾಗ, ಮುನಿರತ್ನನಿಗೆ ಸಿನಿಮಾ ಮಾಡಲು ಅಶ್ವಥನಾರಯಣ್ ಮತ್ತು ಅಶೋಕ್ ಸಿನಿಮಾ ಹೇಳಿದ್ದಾರೆ ಎಂದಾಗಲೇ ನನಗೆ ಸಿನಿಮಾ ಆಲೋಚನೆ ಬಂದಿದೆ. ಕುಮಾರಸ್ವಾಮಿ ಅವರಿಂದಲೇ ಈ ಸಿನಿಮಾ ಹುಟ್ಟಿಕೊಂಡಿದೆ. ರಾಜಕಾರಣಿಯಾಗಿ ಸಿನಿಮಾ ಮಾಡ್ತೀನಿ ಅಂದ್ರೆ ದುಡ್ಡಿಗೋ, ಓಟಿಗೋ ಎನ್ನಬಹುದು. ನಾನು 25 ವರ್ಷದಿಂದ ಸಿನಿಮಾ ಮಾಡ್ತಿದ್ದೇನೆ. ನನ್ನ ಕೊನೆ ಸಿನಿಮಾ ಕುರುಕ್ಷೇತ್ರ, ಈ ಸಿನಿಮಾ ಮಹಾಭಾರತಕ್ಕೆ ಸಂಭಂಧಪಟ್ಟಿದ್ದು ಆಗಿತ್ತು. ಇನ್ನು ನನ್ನ ಪೋಸ್ಟರ್‌ನಲ್ಲಿ ಉರಿಗೌಡ ಮತ್ತು ನಂಜೇಗೌಡರ ಪೋಟೋಗಳು ಇವೆ. ಆದರೆ, ಅವುಗಳನ್ನು ಯಾರಿಗೂ ಹೋಲಿಕೆ ಮಾಡಬಾರುದು ಎಂದು ಮನವಿ ಮಾಡಿದರು. 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
Read more