ಉರಿಗೌಡ - ನಂಜೇಗೌಡ ಸಿನಿಮಾ: ಮುನಿರತ್ನಗೆ ಆದಿಚುಂಚನಗಿರಿ ಶ್ರೀ ಆಹ್ವಾನ

ಉರಿಗೌಡ - ನಂಜೇಗೌಡ ಸಿನಿಮಾ: ಮುನಿರತ್ನಗೆ ಆದಿಚುಂಚನಗಿರಿ ಶ್ರೀ ಆಹ್ವಾನ

Published : Mar 19, 2023, 12:58 PM ISTUpdated : Mar 19, 2023, 01:02 PM IST

ಉರಿಗೌಡ ಮತ್ತು ನಂಜೇಗೌಡರ ಕುರಿತ ಸಿನಿಮಾವನ್ನು ಮಾಡಲು ಮುಂದಾಗಿರುವ ಮುನಿರತ್ನ ಅವರನ್ನು ಆದಿಚುಂಚನಗಿರಿ ನಿರ್ಮಲಾನಂದರನಾಥ ಸ್ವಾಮೀಜಿಗಳು ತಮ್ಮನ್ನು ಭೇಟಿಯಾಗುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರು (ಮಾ.19): ರಾಜ್ಯದಲ್ಲಿ ಟಿಪ್ಪುವನ್ನು ಕೊಂದಿದ್ದಾರೆಂಬ ಉರಿಗೌಡ ಮತ್ತು ನಂಜೇಗೌಡರ ಕುರಿತ ಸಿನಿಮಾವನ್ನು ಮಾಡಲು ಮುನಿರತ್ನ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ನಿರ್ಮಲಾನಂದರನಾಥ ಸ್ವಾಮೀಜಿಗಳು ತಮ್ಮನ್ನು ಭೇಟಿಯಾಗುವಂತೆ ಸೂಚನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುನಿರತ್ನ ಅವರು, ಕಾಲ್ಪನಿಕ ಕಥೆಗಳನ್ನ ಯಾರು ಹುಟ್ಟು ಹಾಕೋದಕ್ಕೆ ಆಗಲ್ಲ. 1940-50 ನೇ ಇಸವಿಗೂ ಹಿಂದೆಯಿಂದಲೂ ಉರಿಗೌಡ್ರು, ನಂಜೇಗೌಡರ ಬಗ್ಗೆ ಲಾವಣಿ ಹಾಡುಗಳಿವೆ. ಲಾವಣಿ ಹಾಡುಗಳ ಆಧಾರದಲ್ಲಿ ಉರಿಗೌಡ ನಂಜೇಗೌಡರು ಇದದ್ದು ಸತ್ಯ. ಮೈಸೂರು ಸಂಸ್ಥಾನದ ಪರವಾಗಿ ಕೆಲಸ ಮಾಡಿದ್ದು ನಿಜ. ಅದಕ್ಕೆ ಬೇಕಾದ ಸಾಕ್ಷಿಗಳು ಸಾಕಷ್ಟಿವೆ. ಈ ಕುರಿತು ಅಶ್ವಥ್ ನಾರಾಯಣ ಅವರು ಸಂಶೋಧನೆ ಮಾಡ್ತಿದ್ದಾರೆ ಎಂದು ಹೇಳಿದರು. ಇನ್ನು ಸಿನಿಮಾ ಕುರಿತಂತೆ ಆದಿಚುಂಚನಗಿರಿ ಶ್ರೀಗಳು ತಮ್ಮನ್ನು ಭೇಟಿಯಾಗುವಂತೆ ಹೇಳಿದ್ದಾರೆ ಎಂದು ತಿಳಿಸಿದರು.

ಬೆಳ್ಳಿ ತೆರೆಮೇಲೆ ಬರಲಿದ್ದಾರೆ ಉರಿಗೌಡ ನಂಜೇಗೌಡ: ಒಕ್ಕಲಿಗ ವೀರರ ಬಗ್ಗೆ ಮುನಿರತ್ನ ಸಿನಿಮಾ ನಿರ್ಮಾಣ

ಕುಮಾರಸ್ವಾಮಿಯಿಂದಲೇ ಸಿನಿಮಾ ಹುಟ್ಟಿಕೊಂಡಿದೆ: ಕುಮಾರಸ್ವಾಮಿಯ ಟೀಕೆ ಮಾಡುವಾಗ, ಮುನಿರತ್ನನಿಗೆ ಸಿನಿಮಾ ಮಾಡಲು ಅಶ್ವಥನಾರಯಣ್ ಮತ್ತು ಅಶೋಕ್ ಸಿನಿಮಾ ಹೇಳಿದ್ದಾರೆ ಎಂದಾಗಲೇ ನನಗೆ ಸಿನಿಮಾ ಆಲೋಚನೆ ಬಂದಿದೆ. ಕುಮಾರಸ್ವಾಮಿ ಅವರಿಂದಲೇ ಈ ಸಿನಿಮಾ ಹುಟ್ಟಿಕೊಂಡಿದೆ. ರಾಜಕಾರಣಿಯಾಗಿ ಸಿನಿಮಾ ಮಾಡ್ತೀನಿ ಅಂದ್ರೆ ದುಡ್ಡಿಗೋ, ಓಟಿಗೋ ಎನ್ನಬಹುದು. ನಾನು 25 ವರ್ಷದಿಂದ ಸಿನಿಮಾ ಮಾಡ್ತಿದ್ದೇನೆ. ನನ್ನ ಕೊನೆ ಸಿನಿಮಾ ಕುರುಕ್ಷೇತ್ರ, ಈ ಸಿನಿಮಾ ಮಹಾಭಾರತಕ್ಕೆ ಸಂಭಂಧಪಟ್ಟಿದ್ದು ಆಗಿತ್ತು. ಇನ್ನು ನನ್ನ ಪೋಸ್ಟರ್‌ನಲ್ಲಿ ಉರಿಗೌಡ ಮತ್ತು ನಂಜೇಗೌಡರ ಪೋಟೋಗಳು ಇವೆ. ಆದರೆ, ಅವುಗಳನ್ನು ಯಾರಿಗೂ ಹೋಲಿಕೆ ಮಾಡಬಾರುದು ಎಂದು ಮನವಿ ಮಾಡಿದರು. 

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
Read more