ಉರಿಗೌಡ - ನಂಜೇಗೌಡ ಸಿನಿಮಾ: ಮುನಿರತ್ನಗೆ ಆದಿಚುಂಚನಗಿರಿ ಶ್ರೀ ಆಹ್ವಾನ

ಉರಿಗೌಡ - ನಂಜೇಗೌಡ ಸಿನಿಮಾ: ಮುನಿರತ್ನಗೆ ಆದಿಚುಂಚನಗಿರಿ ಶ್ರೀ ಆಹ್ವಾನ

Published : Mar 19, 2023, 12:58 PM ISTUpdated : Mar 19, 2023, 01:02 PM IST

ಉರಿಗೌಡ ಮತ್ತು ನಂಜೇಗೌಡರ ಕುರಿತ ಸಿನಿಮಾವನ್ನು ಮಾಡಲು ಮುಂದಾಗಿರುವ ಮುನಿರತ್ನ ಅವರನ್ನು ಆದಿಚುಂಚನಗಿರಿ ನಿರ್ಮಲಾನಂದರನಾಥ ಸ್ವಾಮೀಜಿಗಳು ತಮ್ಮನ್ನು ಭೇಟಿಯಾಗುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರು (ಮಾ.19): ರಾಜ್ಯದಲ್ಲಿ ಟಿಪ್ಪುವನ್ನು ಕೊಂದಿದ್ದಾರೆಂಬ ಉರಿಗೌಡ ಮತ್ತು ನಂಜೇಗೌಡರ ಕುರಿತ ಸಿನಿಮಾವನ್ನು ಮಾಡಲು ಮುನಿರತ್ನ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ನಿರ್ಮಲಾನಂದರನಾಥ ಸ್ವಾಮೀಜಿಗಳು ತಮ್ಮನ್ನು ಭೇಟಿಯಾಗುವಂತೆ ಸೂಚನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುನಿರತ್ನ ಅವರು, ಕಾಲ್ಪನಿಕ ಕಥೆಗಳನ್ನ ಯಾರು ಹುಟ್ಟು ಹಾಕೋದಕ್ಕೆ ಆಗಲ್ಲ. 1940-50 ನೇ ಇಸವಿಗೂ ಹಿಂದೆಯಿಂದಲೂ ಉರಿಗೌಡ್ರು, ನಂಜೇಗೌಡರ ಬಗ್ಗೆ ಲಾವಣಿ ಹಾಡುಗಳಿವೆ. ಲಾವಣಿ ಹಾಡುಗಳ ಆಧಾರದಲ್ಲಿ ಉರಿಗೌಡ ನಂಜೇಗೌಡರು ಇದದ್ದು ಸತ್ಯ. ಮೈಸೂರು ಸಂಸ್ಥಾನದ ಪರವಾಗಿ ಕೆಲಸ ಮಾಡಿದ್ದು ನಿಜ. ಅದಕ್ಕೆ ಬೇಕಾದ ಸಾಕ್ಷಿಗಳು ಸಾಕಷ್ಟಿವೆ. ಈ ಕುರಿತು ಅಶ್ವಥ್ ನಾರಾಯಣ ಅವರು ಸಂಶೋಧನೆ ಮಾಡ್ತಿದ್ದಾರೆ ಎಂದು ಹೇಳಿದರು. ಇನ್ನು ಸಿನಿಮಾ ಕುರಿತಂತೆ ಆದಿಚುಂಚನಗಿರಿ ಶ್ರೀಗಳು ತಮ್ಮನ್ನು ಭೇಟಿಯಾಗುವಂತೆ ಹೇಳಿದ್ದಾರೆ ಎಂದು ತಿಳಿಸಿದರು.

ಬೆಳ್ಳಿ ತೆರೆಮೇಲೆ ಬರಲಿದ್ದಾರೆ ಉರಿಗೌಡ ನಂಜೇಗೌಡ: ಒಕ್ಕಲಿಗ ವೀರರ ಬಗ್ಗೆ ಮುನಿರತ್ನ ಸಿನಿಮಾ ನಿರ್ಮಾಣ

ಕುಮಾರಸ್ವಾಮಿಯಿಂದಲೇ ಸಿನಿಮಾ ಹುಟ್ಟಿಕೊಂಡಿದೆ: ಕುಮಾರಸ್ವಾಮಿಯ ಟೀಕೆ ಮಾಡುವಾಗ, ಮುನಿರತ್ನನಿಗೆ ಸಿನಿಮಾ ಮಾಡಲು ಅಶ್ವಥನಾರಯಣ್ ಮತ್ತು ಅಶೋಕ್ ಸಿನಿಮಾ ಹೇಳಿದ್ದಾರೆ ಎಂದಾಗಲೇ ನನಗೆ ಸಿನಿಮಾ ಆಲೋಚನೆ ಬಂದಿದೆ. ಕುಮಾರಸ್ವಾಮಿ ಅವರಿಂದಲೇ ಈ ಸಿನಿಮಾ ಹುಟ್ಟಿಕೊಂಡಿದೆ. ರಾಜಕಾರಣಿಯಾಗಿ ಸಿನಿಮಾ ಮಾಡ್ತೀನಿ ಅಂದ್ರೆ ದುಡ್ಡಿಗೋ, ಓಟಿಗೋ ಎನ್ನಬಹುದು. ನಾನು 25 ವರ್ಷದಿಂದ ಸಿನಿಮಾ ಮಾಡ್ತಿದ್ದೇನೆ. ನನ್ನ ಕೊನೆ ಸಿನಿಮಾ ಕುರುಕ್ಷೇತ್ರ, ಈ ಸಿನಿಮಾ ಮಹಾಭಾರತಕ್ಕೆ ಸಂಭಂಧಪಟ್ಟಿದ್ದು ಆಗಿತ್ತು. ಇನ್ನು ನನ್ನ ಪೋಸ್ಟರ್‌ನಲ್ಲಿ ಉರಿಗೌಡ ಮತ್ತು ನಂಜೇಗೌಡರ ಪೋಟೋಗಳು ಇವೆ. ಆದರೆ, ಅವುಗಳನ್ನು ಯಾರಿಗೂ ಹೋಲಿಕೆ ಮಾಡಬಾರುದು ಎಂದು ಮನವಿ ಮಾಡಿದರು. 

05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
03:58ಬಿಗ್ ​ಬಾಸ್​ನಿಂದ ಬಿಗ್​ ಬಾಸೇ ಔಟ್.. ದೊಡ್ಮನೆಯಲ್ಲಿ ವಿಲನ್ ಟಾಸ್ಕ್‌ಗಳಿಂದ ಬೆಚ್ಚಿಬಿದ್ದ ಸ್ಪರ್ಧಿಗಳು!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
Read more