Shashti special: ಹುತ್ತಕ್ಕೆ ಕೋಳಿ ರಕ್ತ ಎರೆದು ನಾಗಾರಾಧನೆ

Shashti special: ಹುತ್ತಕ್ಕೆ ಕೋಳಿ ರಕ್ತ ಎರೆದು ನಾಗಾರಾಧನೆ

Published : Dec 14, 2021, 02:40 PM IST

ಷಷ್ಠಿ ಹಬ್ಬದಂದು ಹಾವಿನ ಹುತ್ತಕ್ಕೆ ಕೋಳಿ ಮಾಂಸ ಹಾಗೂ ಮೊಟ್ಟೆ ಹಾಕಿ ಪೂಜೆ ಮಾಡುವ ವಿಶಿಷ್ಠ ಆಚರಣೆ ಚಾಮರಾಜನಗರದ ಹಲವೆಡೆ ಇದೆ. 

ಷಷ್ಠಿ ಹಬ್ಬದ ದಿನದಂದು ಹುತ್ತಕ್ಕೆ ಹಾಲೆರೆದು ನಾಗಪೂಜೆ ಮಾಡುವುದು ಸಾಮಾನ್ಯ. ಆದರೆ ಚಾಮರಾಜನಗರ ಜಿಲ್ಲೆಯ ಹಲವೆಡೆ ಹುತ್ತಕ್ಕೆ ಕೋಳಿರಕ್ತ ಎರೆದು ಕೋಳಿ ಮೊಟ್ಟೆ ಹಾಕಿ ನಾಗಾರಾಧನೆ ಮಾಡುತ್ತಾರೆ. 

 ಷಷ್ಟಿ ಹಬ್ಬದ ದಿನ ಮನೆಮಂದಿಯೆಲ್ಲಾ ಸ್ನಾನ, ಮಡಿ ಮಾಡಿ, ಒಂದು ಹೊತ್ತು ಉಪವಾಸ ಇರುತ್ತಾರೆ. ಅಂದು ಹುತ್ತದ ಮುಂದೆಯೇ ಕೋಳಿ ಕೊಯ್ಯುವ ಭಕ್ತರು, ಕೋಳಿಯ ತಲೆ ಹಾಗೂ ಮೊಟ್ಟೆಯನ್ನು ಹುತ್ತದೊಳಕ್ಕೆ ಹಾಕುತ್ತಾರೆ. ಬಳಿಕ ಹುತ್ತಕ್ಕೆ ಕೋಳಿರಕ್ತ ಎರೆದು ನಾಗಪೂಜೆ ಮಾಡುತ್ತಾರೆ. ಹೀಗೆ ಮಾಡುವುದರಿಂದ ಹೊಲಗದ್ದೆಗಳಲ್ಲಿ ಕೆಲಸ  ಮಾಡುವಾಗ ಹಾವುಗಳು ತಮಗೆ ಕಾಣಿಸುವುದಿಲ್ಲ ಹಾಗೂ ಅವುಗಳಿಂದ ತಮಗೆ ಯಾವುದೇ  ತೊಂದರೆ ಉಂಟಾಗುವುದಿಲ್ಲ ಎಂಬ ನಂಬಿಕೆ ಗ್ರಾಮೀಣ ಜನರಲ್ಲಿದೆ.  

Ramayana Facts: ಬ್ರಹ್ಮಚಾರಿ ಹನುಮನಿಗೂ ಮಗನಿದ್ದಾನೆ ಗೊತ್ತಾ?

ಮೇಲ್ನೋಟಕ್ಕೆ ಇದು ಮೂಢನಂಬಿಕೆ ಅನಿಸಿದರೂ ಇದರ ಹಿಂದೆ ಒಂದು ಸದುದ್ದೇಶ ಅಡಗಿದೆ. ಬಹುಶಃ ಹುತ್ತದ ಒಳಗಿರುವ ಹಾವುಗಳಿಗೆ ಹಾಲೆರೆದರೆ  ಅವುಗಳಿಗೆ ತೊಂದರೆ ಉಂಟಾಗಬಹುದು, ಹುತ್ತಕ್ಕೆ ಹಾಲಿನ ಬದಲಾಗಿ ಕೋಳಿ ಮೊಟ್ಟೆ ಹಾಗು ಕೋಳಿಯ ತಲೆ ಭಾಗವನ್ನು ಹಾಕಿದರೆ ಹಾವುಗಳಿಗೆ ಆಹಾರವಾದರೂ ಆಗಲಿ ಎಂಬ ದೃಷ್ಠಿಯಿಂದ ಹಿರಿಯರು ಈ ಸಂಪ್ರದಾಯ ಹುಟ್ಟು ಹಾಕಿರಬಹುದು ಎನ್ನಲಾಗುತ್ತದೆ. 

26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
Read more