ಬಿಸಿಲೂರಿನ ದೇಗುಲಕ್ಕೆ ಸುಧಾಮೂರ್ತಿ ಭೇಟಿ: ಗಬ್ಬೂರಿನ ಲಕ್ಷ್ಮೀ ವೆಂಕಟೇಶ್ವರನಿಗೆ ವಿಶೇಷ ಪೂಜೆ

ಬಿಸಿಲೂರಿನ ದೇಗುಲಕ್ಕೆ ಸುಧಾಮೂರ್ತಿ ಭೇಟಿ: ಗಬ್ಬೂರಿನ ಲಕ್ಷ್ಮೀ ವೆಂಕಟೇಶ್ವರನಿಗೆ ವಿಶೇಷ ಪೂಜೆ

Published : Nov 17, 2022, 09:14 PM IST

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿರುವ ಗಬ್ಬೂರಿನ ಲಕ್ಷ್ಮೀ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಲಕ್ಷ್ಮೀ ವೆಂಕಟೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು

ರಾಯಚೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿರುವ ಗಬ್ಬೂರಿನ ಲಕ್ಷ್ಮೀ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಲಕ್ಷ್ಮೀ ವೆಂಕಟೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಕಲ್ಯಾಣದ ಚಾಲುಕ್ಯರ ಕಾಲದ ಪುರಾತನ ದೇಗುಲ ಇದಾಗಿದ್ದು, ಇತ್ತೀಚೆಗೆ ಬಿಸಿನೀರು ಪವಾಡದಿಂದ ಪ್ರಸಿದ್ಧಿ ಪಡೆದಿದೆ. ನಂತರ ಮಾತನಾಡಿದ ಸುಧಾಮೂರ್ತಿ, ಯೂಟ್ಯೂಬ್‌ನಲ್ಲಿ ಈ ದೇವಾಲಯ ಕುರಿತು ನೋಡಿದ್ದೆ ಕೊರೊನಾ ಬಳಿಕ ಬರಬೇಕು ಅಂದುಕೊಂಡಿದ್ದೆ. ಮಂತ್ರಾಲಯ ಹಾಗೂ ಗಬ್ಬೂರು ದೇವಸ್ಥಾನಕ್ಕೆ ಭೇಟಿ ನೀಡಬೇಕು ಅಂತ ಬಂದಿದ್ದೇನೆ. ಪುರಾತತ್ವ ಇಲಾಖೆ ಅನುಮತಿ ಕೊಟ್ಟರೆ  ಜೀರ್ಣೋದ್ಧಾರಕ್ಕೆ ಕೈ ಜೋಡಿಸುತ್ತೇವೆ. ದೇವಸ್ಥಾನಕ್ಕೆ ಬಂದಿದ್ದಕ್ಕೆ ತುಂಬಾ ಸಂತೋಷವಾಗಿದೆ ಎಂದು ಹೇಳಿದರು.

ದೇವದಾಸಿ ಮಹಿಳೆಯರಿಗೆ ಪಿಂಚಣಿ ಸೇರಿ ಇತರೆ ಸೌಲಭ್ಯ ಸರಿಯಾಗಿ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಂತಹದ್ದೆಲ್ಲಾ ವಿಚಾರಕ್ಕೆ ನಾನು ಕೈ ಹಾಕಲು ಹೋಗಲ್ಲ, ನನ್ನ ಶಕ್ತಿಗೆ ಅನುಸಾರ ಕೈಲಾದ ಕೆಲಸವನ್ನ ನಾನು ಮಾಡಿಕೊಂಡು ಹೋಗುತ್ತೇನೆ ಎಂದು ಹೇಳಿದರು.
 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more