ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು. ದೀಪಗಳನ್ನು ಹಚ್ಚಿ ಹಬ್ಬ ಆಚರಿಸಿದರೆ ಲಕ್ಷ್ಮಿ ನೆಲೆಸುತ್ತಾಳೆ. ಮಾನವರಲ್ಲಿನ ರಾಕ್ಷಸತ್ವವನ್ನು ದೀಪಗಳು ಓಡಿಸಲಿ' ಎಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಶುಭ ಹಾರೈಸಿದ್ದಾರೆ.
ಬೆಂಗಳೂರು (ನ. 14): 'ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು. ದೀಪಗಳನ್ನು ಹಚ್ಚಿ ಹಬ್ಬ ಆಚರಿಸಿದರೆ ಲಕ್ಷ್ಮಿ ನೆಲೆಸುತ್ತಾಳೆ. ಮಾನವರಲ್ಲಿನ ರಾಕ್ಷಸತ್ವವನ್ನು ದೀಪಗಳು ಓಡಿಸಲಿ' ಎಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಶುಭ ಹಾರೈಸಿದ್ದಾರೆ.
ದೀಪಾವಳಿ ಹಬ್ಬದಂದು ಪಟಾಕಿಗಳನ್ನು ಹಚ್ಚುವುದು ಸರಿಯಲ್ಲ. ಇದು ಮನುಷ್ಯರ ಆರೋಗ್ಯದ ಮೇಲೆ, ಪರಿಸರದ ಮೇಲೆ ಪ್ರಭಾವ ಬೀರುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯವರು ಜಾಗೃತಿ ಮೂಡಿಸುವ ವಿಚಾರ ಮಾಡುತ್ತಿದ್ದಾರೆ. ಇದು ಸ್ವಾಗತಾರ್ಹವಾದದ್ದು' ಎಂದು ಸ್ವಾಮೀಜಿ ಹೇಳಿದ್ದಾರೆ.