ಸಮುದ್ರ ತಳದಲ್ಲಿ 22,000 ಕೆಜಿ ಬಂಗಾರ ಪತ್ತೆ; ಕೆಜಿಎಫ್ ರಾಕಿಭಾಯ್ ಕಥೆ ನಿಜವಾಯ್ತಾ?

ಸಮುದ್ರ ತಳದಲ್ಲಿ 22,000 ಕೆಜಿ ಬಂಗಾರ ಪತ್ತೆ; ಕೆಜಿಎಫ್ ರಾಕಿಭಾಯ್ ಕಥೆ ನಿಜವಾಯ್ತಾ?

Published : Jan 02, 2025, 05:39 PM IST

ಪೋರ್ಚುಗಲ್ ಸಮುದ್ರದಲ್ಲಿ 22,000 ಕೆ.ಜಿ ಚಿನ್ನ ಪತ್ತೆಯಾಗಿದ್ದು, 4 ಶತಮಾನಗಳ ಹಿಂದೆ ಮುಳುಗಿದ ಹಡಗುಗಳಿಂದ ಬಂದಿರಬಹುದು ಎಂದು ಶಂಕಿಸಲಾಗಿದೆ. ಇದೆಲ್ಲವನ್ನು ನೋಡಿದರೆ ಕೆಜಿಎಫ್ ರಾಕಿಭಾಯ್ ಕಥೆ ನಿಜವಾಯ್ತಾ ಎಂಬ ಅನುಮಾನ ಮೂಡುತ್ತಿದೆ.

ಕೆಜಿಎಫ್ ಸಿನಿಮಾದಲ್ಲಿ ಸಮುದ್ರ ಪಾಲಾಗಿತ್ತು ರಾಕಿ ಕಟ್ಟಿದ ಸ್ವರ್ಣ ಸಾಮ್ರಾಜ್ಯ. ರಾಕಿ ಭಾಯ್ ಚಿನ್ನದೊಂದಿಗೆ ಸಾಗರದಲ್ಲಿ ಸಮಾಧಿಯಾಗಿದ್ದ. ಅದು ರೀಲ್ ಕೆಜಿಎಫ್, ಇದು ರಿಯಲ್ ಕೆಜಿಎಫ್. ಆ ಸಮುದ್ರ ಗರ್ಭದಲ್ಲಿ ಪತ್ತೆಯಾಯ್ತು ಬರೋಬ್ಬರಿ 22,000 ಕೆ.ಜಿ ಬಂಗಾರ. 4 ಶತಮಾನಗಳ ಹಿಂದೆ, ಆ ಸಾಗರದಲ್ಲಿ ಮುಳುಗಿದ್ವು 8,500ಕ್ಕೂ ಅಧಿಕ ಹಡಗುಗಳು. ಈ ಪೈಕಿ ಜಲಸಮಾಧಿಯಾದ 250ಕ್ಕೂ ಅಧಿಕ ನೌಕೆಗಳಲ್ಲಿ ಟನ್‌ಗಟ್ಟಲೆ ಚಿನ್ನವಿತ್ತು. ಇದೀಗ ಚಿನ್ನದ ಗಣಿ ಕಡಲುಗಳ್ಳರ ಪಾಲಾಗುತ್ತಾ ಎಂಬ ಆತಂಕ ಮೂಡಿದೆ. 435 ವರ್ಷಗಳ ಹಿಂದೆ ಸಮಾಧಿಯಾದ ಸ್ವರ್ಣ ಸತ್ಯ ಈಗ ಸುನಾಮಿಯಂತೆ ಎದ್ದು ಬಂದಿದ್ದೇ ರೀಚಕವಾಗಿದೆ. ಇದೇ ಇವತ್ತಿನ ಸುವರ್ಣ ಫೋಕಸ್, ಕೆಜಿಎಫ್ ಚಾಪ್ಟರ್ 3.

ಅಷ್ಟಕ್ಕೂ ಪೋರ್ಚುಗಲ್‌ನ ಆ ಸಮುದ್ರದಾಳದಲ್ಲಿ 22 ಸಾವಿರ ಕೆ.ಜಿ ಚಿನ್ನ ಇದೆ ಅನ್ನೋದು ಗೊತ್ತಾಗಿದ್ದು ಹೇಗೆ.? ಸಾಗರಗರ್ಭಕ್ಕೆ ಹೋಗಿ ಅದನ್ನು ಪತ್ತೆ ಹಚ್ಚಿದ ಮಹಾನುಭಾವ ಯಾರು.? ಆತ ಬಿಚ್ಚಿಟ್ಟ ರಹಸ್ಯವನ್ನು ಕೇಳಿ ಪೋರ್ಚುಗಲ್ ಸರ್ಕಾರ ಬೆಚ್ಚಿ ಬಿದ್ದಿರೋದ್ಯಾಕೆ.? 16 ಸಾವಿರ ಕೋಟಿಗಳ ಈ ಚಿನ್ನದ ಮೇಲೆ ಬಿದ್ದಿರೋದು ಅದ್ಯಾರ ಕಳ್ಳಗಣ್ಣು.? ಆ ಇಂಟ್ರೆಸ್ಟಿಂಗ್ ಸ್ಟೋರಿಯನ್ನು ತೋರಿಸ್ತೀವಿ ನೋಡಿ.

ಸಾಗರ ಗರ್ಭದಿಂದ ಸಿಡಿದು ಬಂದಿದೆ ಆ ಸ್ವರ್ಣ ರಹಸ್ಯ. ಸಮುದ್ರದಾಳದಲ್ಲಿ 22 ಸಾವಿರ ಕೆ.ಜಿ ಚಿನ್ನ ಅನಾಥವಾಗಿ ಬಿದ್ದಿದೆ ಅನ್ನೋ ಸತ್ಯ, ಪೋರ್ಚುಗಲ್ ಸರ್ಕಾರದ ನಿದ್ದೆಗೆಡಿಸಿದೆ. ನೀರಿನೊಳಗಿನ ಆ ಚಿನ್ನಕ್ಕೆ ರಕ್ಷಣೆ ಕೊಡದೇ ಇದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಅಂತ ಪುರಾತತ್ವ ಶಾಸ್ತ್ರಜ್ಞ ಎಚ್ಚರಿಸಿದ್ದಾರೆ. ಅಷ್ಟಕ್ಕೂ ಆ ಸ್ವರ್ಣ ರಹಸ್ಯ ಪೋರ್ಚುಗಲ್ ಸರ್ಕಾರಕ್ಕೆ ತಲೆ ನೋವು ತಂದಿರೋದು ಯಾಕೆಎಂಬ ಪ್ರಶ್ನೆ ಮೂಡಿದೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್